Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಭಾರತ-ಪಾಕ್ ಉದ್ವಿಗ್ನತೆ ನಡುವೆ ‘ಆಪರೇಷನ್ ಸಿಂಧೂರ್’ ಸಿನಿಮಾ ಘೋಷಣೆ; ಮೊದಲ ಪೋಸ್ಟರ್ ರಿಲೀಸ್

09/05/2025 10:14 PM

BREAKING: ಪಂಜಾಬ್ ನ ಫಿರೋಜ್ ಪುರ್ ನಲ್ಲಿ ಮನೆಗೆ ಅಪ್ಪಳಿಸಿದ ಡ್ರೋನ್: 2-3 ಜನರಿಗೆ ಗಾಯ

09/05/2025 10:09 PM

BREAKING: ಪಾಕಿಸ್ತಾನಕ್ಕೆ ‘ಐಎಂಎಫ್ ಬೇಲ್ ಔಟ್ ಪ್ಯಾಕೇಜ್’ಗೆ ಭಾರತ ಆಕ್ಷೇಪ

09/05/2025 9:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗದ ಐತಿಹಾಸಿಕ ಫ್ರೀಡಂ ಪಾರ್ಕ್ ಗೆ ಅಲ್ಲಮಪ್ರಭು ನಾಮಕರಣ
KARNATAKA

ಶಿವಮೊಗ್ಗದ ಐತಿಹಾಸಿಕ ಫ್ರೀಡಂ ಪಾರ್ಕ್ ಗೆ ಅಲ್ಲಮಪ್ರಭು ನಾಮಕರಣ

By kannadanewsnow0719/01/2024 3:02 PM
vidhana soudha
vidhana soudha

ಬೆಂಗಳೂರು : ವಚನ ಸಾಹಿತ್ಯದ ಮೂಲಕ ಸಾಮಾಜಿಕ ನ್ಯಾಯದ ಕಲ್ಪನೆಯನ್ನು ಸಾರಿದ ಶರಣ ಅಲ್ಲಮಪ್ರಭು ಅವರ ಹೆಸರನ್ನು ಶಿವಮೊಗ್ಗದ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕಿಗೆ ನಾಮಕಾರಣ ಮಾಡಲು ಗುರುವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಕ್ಕೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

“ಶಿವಮೊಗ್ಗದ 46.32 ಎಕರೆ ವಿಸ್ತೀರ್ಣದ ಜೈಲು ಆವರಣದ ಮೈದಾನಕ್ಕೆ ಅಲ್ಲಮಪ್ರಭು ಹೆಸರು ನಾಮಕರಣ ಮಾಡುವ ಮೂಲಕ ಜಿಲ್ಲೆಯ ಜನತೆಯ ದಶಕಗಳ ಕನಸನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರ ನನಸು ಮಾಡಿದೆ,” ಎಂದು ಸಚಿವರು ಹೇಳಿದ್ದಾರೆ.

“12ನೇ ಶತಮಾನದಲ್ಲಿಅನುಭವ ಮಂಟಪದ ಅಧ್ಯಕ್ಷರಾಗಿ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಮೊದಲಿಗೆ ಈ ನೆಲದಲ್ಲಿ ಸ್ಥಾಪಿಸಿದ ಅಲ್ಲಮಪ್ರಭು ಅವರ ಹೆಸರನ್ನು ಶಿವಮೊಗ್ಗದ ಫ್ರೀಡಂ ಪಾರ್ಕ್​​ಗೆ ಇಡಬೇಕು ಎಂಬುದು ಜನತೆಯ ಒತ್ತಾಸೆಯಾಗಿತ್ತು. ಜಿಲ್ಲೆಯ ಜನರ ಬೇಡಿಕೆಗೆ ಸ್ಪಂದಿಸಿರುವುದು ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ಪಡೆದುಕೊಳ್ಳುತ್ತದೆ ಎಂಬುದಕ್ಕೆ ಇದು ನಿದರ್ಶನ,” ಎಂದು ಬಣ್ಣಿಸಿದ್ದಾರೆ.

“12ನೇ ಶತಮಾನದ ಒಬ್ಬ ಪ್ರಸಿದ್ಧ ಕವಿ, ತತ್ತ್ವ ಜ್ಞಾನಿ ಅಲ್ಲಮ ಪ್ರಭುಗಳು ಶಿಕಾರಿಪುರದ ಬಳ್ಳಿಗಾವಿಯವರು. ಅವರು ನಮ್ಮ ಶಿವಮೊಗ್ಗ ಜಿಲ್ಲೆಯವರು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ. ಹೀಗಾಗಿ ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮಪ್ರಭು ಅವರ ಹೆಸರಿಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ್ ಅವರಿಗೆ ಮನವಿ ಮಾಡಲಾಗಿತ್ತು. ಇದಕ್ಕಾಗಿ ಇಡೀ ಜಿಲ್ಲೆಯ ಜ‌ನರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಸಚಿವರು ತಿಳಿಸಿದ್ದಾರೆ.

ಸಮ ಸಮಾಜದ ಕಲ್ಪನೆಯ ಜತೆಗೆ ಮಹಿಳೆಯರಿಗೆ ಸಮಾನ ಗೌರವ ಸ್ಥಾನ ಮಾಡಲು ನೀಡಲು ಹೋರಾಟ ನಡೆಸಿದ, ಜಾತಿಯತೆಯ ನಿರ್ಮೂಲನೆಗೆ 12ನೇ ಶತಮಾನದಲ್ಲೇ ಕ್ರಾಂತಿ ಮಾಡಿದ ಮತ್ತು ತಮ್ಮ ವಚನಗಳ ಮೂಲಕ ಜಗತ್ತಿನ ಕಣ್ಣು ತೆರೆಸಿದ ಅಲ್ಲಮ ಪ್ರಭು ಅವರ ಆದರ್ಶಗಳು ಮುಂದಿನ ಯುವ ಪೀಳಿಗೆಗೆ ಮಾದರಿಯಾಗಬೇಕು. ಸರ್ಕಾರದ ನಿರ್ಧಾರ ಅತ್ಯಂತ ಸಮಯೋಚಿತವಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳೆದ ಜನವರಿ,12 ರಂದು ಶಿವಮೊಗ್ಗದ ಐತಿಹಾಸಿಕ ಫ್ರೀಡಂ ಪಾರ್ಕ್ ನಲ್ಲಿ ನಡೆದ ಯುವನಿಧಿ ಕಾರ್ಯಕ್ರಮದ ವೇಳೆ ಅಲ್ಲಮಪ್ರಭು ಹೆಸರು ನಾಮಕರಣ ಮಾಡುವಂತೆ ವೇದಿಕೆಯಲ್ಲಿದ್ದ ಸಿ.ಎಂ ಹಾಗೂ ಡಿಸಿಎಂ ಅವರಿಗೆ ಸಚಿವರು ಮನವಿ ಮಾಡಿದ್ದರು.

“ಜ.12 ರಂದು ಇದೇ ಪಾರ್ಕ್‌ನಲ್ಲಿ ಆಯೋಜಿಸಿದ್ದ ಯುವನಿಧಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಷಯ ಘೋಷಿಸಿದ್ದರು. ಕಾರ್ಯಕ್ರಮವನ್ನು ಇಲ್ಲಿ ಆಯೋಜಿಸಿದ್ದ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರಿಗೂ ಅಭಿನಂದನೆ‌ ಸಲ್ಲಿಸುತ್ತೇನೆ,” ಎಂದು ಸಚಿವರು ಹೇಳಿದ್ದಾರೆ.

ಈ ಸಂದರ್ಭದಲ್ಲಿ ನಾಡಿನ ಎಲ್ಲ ಜನತೆಗೆ ಮತ್ತು ಬಸವತತ್ತ್ವ ಅನುಯಾಯಿಗಳಿಗೆ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Shimoga's historic Freedom Park named after Allamaprabhu
Share. Facebook Twitter LinkedIn WhatsApp Email

Related Posts

ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ.ಬಾಲಕೃಷ್ಣ ಸರ್ಕಾರಿ ಸೇವೆಯಿಂದ ವಜಾ

09/05/2025 9:51 PM1 Min Read

BIG NEWS: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ: ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ

09/05/2025 9:28 PM1 Min Read

ಅಂಗವಿಕಲರಿಗೆ ಗುಡ್ ನ್ಯೂಸ್: ಮುಂಬಡ್ತಿಯಲ್ಲಿ ಶೇ.4ರಷ್ಟು ಮೀಸಲಾತಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ

09/05/2025 9:26 PM1 Min Read
Recent News

BREAKING: ಭಾರತ-ಪಾಕ್ ಉದ್ವಿಗ್ನತೆ ನಡುವೆ ‘ಆಪರೇಷನ್ ಸಿಂಧೂರ್’ ಸಿನಿಮಾ ಘೋಷಣೆ; ಮೊದಲ ಪೋಸ್ಟರ್ ರಿಲೀಸ್

09/05/2025 10:14 PM

BREAKING: ಪಂಜಾಬ್ ನ ಫಿರೋಜ್ ಪುರ್ ನಲ್ಲಿ ಮನೆಗೆ ಅಪ್ಪಳಿಸಿದ ಡ್ರೋನ್: 2-3 ಜನರಿಗೆ ಗಾಯ

09/05/2025 10:09 PM

BREAKING: ಪಾಕಿಸ್ತಾನಕ್ಕೆ ‘ಐಎಂಎಫ್ ಬೇಲ್ ಔಟ್ ಪ್ಯಾಕೇಜ್’ಗೆ ಭಾರತ ಆಕ್ಷೇಪ

09/05/2025 9:56 PM

ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ.ಬಾಲಕೃಷ್ಣ ಸರ್ಕಾರಿ ಸೇವೆಯಿಂದ ವಜಾ

09/05/2025 9:51 PM
State News
KARNATAKA

ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ.ಬಾಲಕೃಷ್ಣ ಸರ್ಕಾರಿ ಸೇವೆಯಿಂದ ವಜಾ

By kannadanewsnow0909/05/2025 9:51 PM KARNATAKA 1 Min Read

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿದಂತ ಮಗುವನ್ನು ಮತ್ತೊಬ್ಬರಿಗೆ ಮಾರಾಟ ಮಾಡಿದ ಪ್ರಕರಣದಲ್ಲಿ ಸಿಕ್ಕಿಬಿದ್ದಂತ ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ…

BIG NEWS: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ: ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ

09/05/2025 9:28 PM

ಅಂಗವಿಕಲರಿಗೆ ಗುಡ್ ನ್ಯೂಸ್: ಮುಂಬಡ್ತಿಯಲ್ಲಿ ಶೇ.4ರಷ್ಟು ಮೀಸಲಾತಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ

09/05/2025 9:26 PM

ಮಂಡ್ಯದಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಆರೋಪಿ ಜಾವೀದ್ ಬಂಧನ

09/05/2025 9:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.