ಮಹಾರಾಷ್ಟ್ರ; ಕೇವಲ 6 ತಿಂಗಳಲ್ಲೇ ಶಿಂಧೆ ಸರ್ಕಾರ ಪತನವಾಗೋದು ಪಕ್ಕಾ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್

ಮುಂಬೈ (ಮಹಾರಾಷ್ಟ್ರ): ಮುಂದಿನ ಆರು ತಿಂಗಳಲ್ಲಿ ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ಪತನವಾಗುವ ಸಾಧ್ಯತೆಯಿರುವುದರಿಂದ ಮಹಾರಾಷ್ಟ್ರದಲ್ಲಿ ಮಧ್ಯಂತರ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್(Sharad Pawar) ತಿಳಿಸಿದ್ದಾರೆ. ನಿನ್ನೆ ಸಂಜೆ ಮುಂಬೈನಲ್ಲಿ ಎನ್‌ಸಿಪಿ ಶಾಸಕರು ಮತ್ತು ಪಕ್ಷದ ಇತರ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಅವರು, “ಮಹಾರಾಷ್ಟ್ರದಲ್ಲಿ ಹೊಸದಾಗಿ ರಚನೆಯಾದ ಸರ್ಕಾರವು ಮುಂದಿನ ಆರು ತಿಂಗಳಲ್ಲಿ ಬೀಳಬಹುದು. ಆದ್ದರಿಂದ, ಎಲ್ಲರೂ ಮಧ್ಯಂತರ ಚುನಾವಣೆಗೆ ಸಿದ್ಧರಾಗಿರಬೇಕು” ಎಂದಿದ್ದಾರೆ. … Continue reading ಮಹಾರಾಷ್ಟ್ರ; ಕೇವಲ 6 ತಿಂಗಳಲ್ಲೇ ಶಿಂಧೆ ಸರ್ಕಾರ ಪತನವಾಗೋದು ಪಕ್ಕಾ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್