ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರದ ಗಡಿ ವಿವಾದ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದಾರೆ. ಇದೀಗ ಕರ್ನಾಟಕ ಸರ್ಕಾರದಿಂದ ಗಡಿ ಭಾಗದ ಮರಾಠಿ ಭಾಷಿಕರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮಹಾರಾಷ್ಟ್ರ ಕೊಲ್ಲಾಪುರ ನಗರದಲ್ಲಿ ಶಿವಸೇನೆ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
Body odor: ʻದೇಹದ ದುರ್ವಾಸನೆʼ ಗಂಭೀರ ಕಾಯಿಲೆಗಳ ಸೂಚನೆ, ಇಲ್ಲಿದೆ ಆರೋಗ್ಯ ತಜ್ಞರ ಮಾಹಿತಿ
ಈ ಹಿನ್ನೆಲೆಯಲ್ಲಿ ಕರ್ನಾಟಕ ಗಡಿ ಭಾಗದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್ಪೋಸ್ಟ್ನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಗಾವಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಬೆಳಗಿನಿಂದಲೇ ಪೊಲೀಸರು ಮಹಾರಾಷ್ಟ್ರ ಕರ್ನಾಟಕ ಗಡಿ ಪ್ರದೇಶ ಮೇಲೆ ನಿಗಾ ಇಟ್ಟಿದ್ದಾರೆ.
Body odor: ʻದೇಹದ ದುರ್ವಾಸನೆʼ ಗಂಭೀರ ಕಾಯಿಲೆಗಳ ಸೂಚನೆ, ಇಲ್ಲಿದೆ ಆರೋಗ್ಯ ತಜ್ಞರ ಮಾಹಿತಿ
ಮಹಾರಾಷ್ಟ್ರ ಕೊಲ್ಲಾಪುರದಲ್ಲಿ ಕರ್ನಾಟಕ ಸರ್ಕಾರವು ಗಡಿ ಮರಾಠಿ ಭಾಷಿಕರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿಲಾಗಿದೆ.
ಛತ್ರಪತಿ ಶಿವಾಜಿ ಮಹಾರಾಜರ ವಿರುದ್ಧ ಬಿಜೆಪಿ ನಾಯಕರು ಕಾಲಕಾಲಕ್ಕೆ ನೀಡುತ್ತಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ ಇಂದು ಕೊಲ್ಲಾಪುರದಲ್ಲಿ ಮಹಾವಿಕಾಸ ಅಘಾಡಿ ಸಂಘಟನೆ ನಗರದ ಶಾಹು ಸಮಾಧಿ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತಿದೆ.