Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಭೂ ಪರಿಹಾರ ನೀಡದ ಹಾಸನ ಜಿಲ್ಲಾಧಿಕಾರಿಗೆ ಕೋರ್ಟ್ ಶಾಕ್: ಕಾರು ಜಪ್ತಿಗೆ ಆದೇಶ

09/01/2026 3:11 PM

Watch Video: ಬೆಂಗಳೂರಲ್ಲಿ ಮತ್ತೊಂದು ಆಘಾತಕಾರಿ ಘಟನೆ: ಡೆಲಿವರಿ ಬಾಯ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

09/01/2026 2:44 PM

BREAKING: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ: ಶಿವಮೊಗ್ಗದಲ್ಲಿ ಇಂಜಿನಿಯರಿಂದ್ ವಿದ್ಯಾರ್ಥಿ ಸಾವು

09/01/2026 2:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಸರ್ಕಾರದ ಹಸ್ತಕ್ಷೇಪವಿಲ್ಲದಿದ್ದಲ್ಲಿ ಸಹಕಾರಿ ಸಂಘಗಳು ಇನ್ನಷ್ಟು ಬಲಿಷ್ಟ – ಆರ್.ಎಂ.ಮಂಜುನಾಥಗೌಡ
KARNATAKA

ಶಿವಮೊಗ್ಗ: ಸರ್ಕಾರದ ಹಸ್ತಕ್ಷೇಪವಿಲ್ಲದಿದ್ದಲ್ಲಿ ಸಹಕಾರಿ ಸಂಘಗಳು ಇನ್ನಷ್ಟು ಬಲಿಷ್ಟ – ಆರ್.ಎಂ.ಮಂಜುನಾಥಗೌಡ

By kannadanewsnow0921/09/2025 2:21 PM

ಶಿವಮೊಗ್ಗ : ಸರ್ಕಾರದ ಯಾವುದೇ ನೆರವಿಲ್ಲದೆ, ಸರ್ಕಾರಗಳು ಮಾಡದಿರುವ ಸಮಾಜಮುಖಿ ಕಾರ್ಯವನ್ನು ಸಹಕಾರ ಸಂಘಗಳು ಮಾಡುತ್ತಿರುವುದು ಮಾದರಿ ಕಾರ್ಯಗಳಲ್ಲೊಂದಾಗಿದೆ ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಹಾಗೂ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ.ಆರ್.ಎಂ.ಮಂಜುನಾಥಗೌಡ ಅವರು ಹೇಳಿದರು.

ಅವರು ಇಂದು ರಾಜ್ಯ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ಮತ್ತು ರಾಜ್ಯ ಸರ್ಕಾರಿ ನೌಕರರ ಸೌಹಾರ್ಧ ಸಹಕಾರ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ನಗರದ ದ್ವಾರಕಾ ಕನ್ವೆನ್ಶನ್‌ಹಾಲ್‌ನಲ್ಲಿ ಏರ್ಪಡಿಸಲಾಗಿದ್ದ ಸರ್ವಸದಸ್ಯರ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಯಾವುದೇ ಸಹಕಾರ ಸಂಘಗಳು ಜಾತಿ, ಪಕ್ಷ ಮತ್ತು ಲಿಂಗಭೇದ ಮರೆತು ಕಾರ್ಯನಿರ್ವಹಿಸುವಂತಾಗಬೇಕು. ಯಾವುದೇ ಸಹಕಾರಿ ಸಂಸ್ಥೆ ನಾಯಕನ ವ್ಯಕ್ತಿತ್ವದ ಮೇಲೆ ಅವಲಂಬಿತವಾಗಿರುತ್ತವೆ ಎಂದವರು ನುಡಿದರು.

ನಗರದ ಬೆಳವಣಿಗೆಯಲ್ಲಿ ಇಂತಹ ಸಹಕಾರ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ ಎಂದ ಅವರು, ಸಂಘಗಳಲ್ಲಿ ಎಲ್ಲರಿಗೂ ಸರಳವಾಗಿ, ಸುಲಭವಾಗಿ ಸಾಲಸೌಲಭ್ಯಗಳು ದೊರೆಯುವಂತಾಗಬೇಕು. ಆಗ ನಿಜವಾದ ಸಹಕಾರದ ಪದಕ್ಕೆ ಅರ್ಥ ಬರಲಿದೆ. ಇದರಿಂದಾಗಿ ಅರ್ಹರಿಗೆ ಸಾಲಸೌಲಭ್ಯ ದೊರೆಯುವುದು ಮಾತ್ರವಲ್ಲ, ಪರೋಕ್ಷವಾಗಿ ಉದ್ಯೋಗಸೃಷ್ಠಿಯಾಗಲಿದೆ. ಸಾಲ ಪಡೆದವರು ಸಕಾಲದಲ್ಲಿ ಸಾಲ ಮರುಪಾವತಿ ಮಾಡುವ ಮೂಲಕ ಇನ್ನೊಬ್ಬರ ಅವಶ್ಯಕತೆಗಳಿಗೆ ಸಹಕರಿಸಬೇಕು. ಸರ್ಕಾರದ ಹಸ್ತಕ್ಷೇಪವಿಲ್ಲದಿದ್ದಲ್ಲಿ ಸಹಕಾರಿ ಸಂಘಗಳು ಇನ್ನಷ್ಟು ರಚನಾತ್ಮಕವಾಗಿ ಕಾರ್ಯನಿರ್ವಹಿಸಲಿವೆ ಎಂದವರು ನುಡಿದರು.

ಸೌಹಾರ್ಧ ಸಹಕಾರ ಸಂಘದಲ್ಲಿ 3600 ಮತ್ತು ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ 4800ಕ್ಕೂ ಹೆಚ್ಚಿನ ಜನ ಸದಸ್ಯತ್ವ ಪಡೆದಿರುವುದು ಹಾಗೂ ಈವರಗೆ ಗೃಹನಿರ್ಮಾಣ ಸಹಕಾರ ಸಂಘದ ವತಿಯಿಂದ ಸುಮಾರು 175 ಎಕರೆ ಪ್ರದೇಶದಲ್ಲಿ ಬಡಾವಣೆ ನಿರ್ಮಿಸಿ, ನಿವೇಶನ ವಿತರಿಸಿರುವುದು ಅತ್ಯಂತ ಪ್ರಶಂಸನಾರ್ಹ ಸಂಗತಿಯಾಗಿದೆ. ಇದರಿಂದಾಗಿ ಪ್ರತಿ ವ್ಯಕ್ತಿಯೂ ಚಿಕ್ಕದಾದರೂ ತನ್ನ ಕನಸಿನ ಮನೆಯನ್ನು ನಿರ್ಮಿಸಿಕೊಂಡು ನೆಮ್ಮದಿಯ ಜೀವನ ನಡೆಸಬಹುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಹಾಗೂ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯದ ಸಹಕಾರಿ ಕ್ಷೇತ್ರದಲ್ಲಿ ನೌಕರರ ಸಂಘದ ವತಿಯಿಂದ ಸ್ಥಾಪಿಸಲಾಗಿರುವ ಎರಡೂ ಸಂಘಗಳು “ಎ” ಶ್ರೇಣಿಯಲ್ಲಿ ಗುರುತಿಸಿಕೊಳ್ಳುವ ಸ್ಥಾನಮಾನ ಹೊಂದಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

11ವರ್ಷಗಳ ಅವಧಿಯಲ್ಲಿ ಸಂಘಟನೆಗೆ ಸಣ್ಣ ಕಪ್ಪುಚುಕ್ಕೆಯೂ ಬಾರದಂತೆ ನಡೆಸಿಕೊಂಡು ಬರಲಾಗಿದೆ. ಪ್ರಸಕ್ತ ಅವಧಿಯಲ್ಲಿ ಸಂಘವು ಸುಮಾರು 1.50ಕೋಟಿ ಲಾಭ ಗಳಿಸಿರುವುದು ಸಂತಸದ ವಿಷಯವಾಗಿದೆ. ಇಂತಹ ಸಂಘಟನೆಯನ್ನು ಆರಂಭದ ಹಂತದಲ್ಲಿ ರಾಜ್ಯದ ನೆರೆಯ ಜಿಲ್ಲೆಗಳಿಗೆ ನಂತರ ರಾಜ್ಯದ ಉದ್ದಗಲಕ್ಕೆ ವಿಸ್ತರಿಸುವ ಉದ್ಧೇಶ ಹೊಂದಲಾಗಿದೆ ಎಂದರು.

ಗೃಹ ನಿರ್ಮಾಣ ಸಹಕಾರ ಸಂಘದ ವತಿಯಿಂದ ಈವರೆಗೆ ಸುಮಾರು 2500ಕ್ಕೂ ಹೆಚ್ಚಿನ ನೌಕರರಿಗೆ ಮಾರುಕಟ್ಟೆ ದರಕ್ಕಿಂತ ಕಡಿಮೆ ಬೆಲೆಗೆ ನಿವೇಶನಗಳನ್ನು ವಿತರಿಸಲಾಗಿದೆ. ಅಲ್ಲದೇ ಈಗಾಗಲೇ 110ಎಕರೆ ಭೂಪ್ರದೇಶದಲ್ಲಿ ಗುಣಮಟ್ಟದ ಕಾಮಗಾರಿಗಳೊಂದಿಗೆ ಕಾನೂನುಬದ್ದವಾಗಿ ಸೃಜಿಸಲಾಗಿರುವ 1500ನಿವೇಶನಗಳನ್ನು ಶೀಘ್ರದಲ್ಲಿ ವಿತರಿಸಲು ಕ್ರಮಕೈಗೊಳ್ಳಲಾಗುವುದು ಎಂದ ಅವರು, ಸಂಘಟನೆಯು ನೌಕರರ ನೆಮ್ಮದಿಯ ಬದುಕಿಗೆ ಆಸರೆಯಾಗಿದೆ ಎಂದರು.

ಮಹಾಸಭೆಯಲ್ಲಿ ನೌಕರರ ಪ್ರತಿಭಾವಂತ ಮಕ್ಕಳಿಗೆ ನಗದು ಪುರಸ್ಕಾರ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು. ನಂತರ ಶೇರುದಾರರ ಉಪಸ್ಥಿತಿಯಲ್ಲಿ ಸಂಘದ ಮಹಾಸಭೆಯಲ್ಲಿ ಅನೇಕ ವಿಷಯಗಳ ಕುರಿತು ಚರ್ಚಿಸಿ ಅನೇಕ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಸಭೆಯಲ್ಲಿ ಡಿ.ಸಿ.ಸಿ.ಬ್ಯಾಂಕ್‌ ಉಪಾಧ್ಯಕ್ಷ ಎಸ್.ಕೆ.ಮರಿಯಪ್ಪ, ಸೂಡಾ ಅಧ್ಯಕ್ಷ ಸುಂದರೇಶ್‌, ಮಹಾನಗರಪಾಲಿಕೆ ಆಯುಕ್ತ ಮಾಯಣ್ಣಗೌಡ, ಸೂಡಾ ಆಯುಕ್ತ ವಿಶ್ವನಾಥ ಮುದ್ದಜ್ಜಿ, ಸಹಕಾರ ಸಂಘಗಳ ಉಪನಿಬಂಧಕ ನಾಗಭೂಷಣ ಚಂದ್ರಶೇಖರ ಕಲ್ಮನೆ, ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್‌ಕುಮಾರ್‌, ಆರ್.ಪಾಪಣ್ಣ, ಎನ್.ಎಂ.ರಂಗನಾಥ್‌, ನರಸಿಂಹಮೂರ್ತಿ, ದಿನೇಶ್‌, ಪ್ರಸನ್ನ, ಸುರೇಶ್‌, ಕೃಷ್ಣಮೂರ್ತಿ, ಸಿದ್ಧಬಸಪ್ಪ ಸೇರಿದಂತೆ ಅವಳಿ ಸಂಘಗಳ ಪದಾಧಿಕಾರಿಗಳು, ನಿರ್ದೇಶಕರು, ಶೇರುದಾರರು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

BREAKING: ಭೂ ಪರಿಹಾರ ನೀಡದ ಹಾಸನ ಜಿಲ್ಲಾಧಿಕಾರಿಗೆ ಕೋರ್ಟ್ ಶಾಕ್: ಕಾರು ಜಪ್ತಿಗೆ ಆದೇಶ

09/01/2026 3:11 PM1 Min Read

Watch Video: ಬೆಂಗಳೂರಲ್ಲಿ ಮತ್ತೊಂದು ಆಘಾತಕಾರಿ ಘಟನೆ: ಡೆಲಿವರಿ ಬಾಯ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

09/01/2026 2:44 PM1 Min Read

BREAKING: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ: ಶಿವಮೊಗ್ಗದಲ್ಲಿ ಇಂಜಿನಿಯರಿಂದ್ ವಿದ್ಯಾರ್ಥಿ ಸಾವು

09/01/2026 2:30 PM1 Min Read
Recent News

BREAKING: ಭೂ ಪರಿಹಾರ ನೀಡದ ಹಾಸನ ಜಿಲ್ಲಾಧಿಕಾರಿಗೆ ಕೋರ್ಟ್ ಶಾಕ್: ಕಾರು ಜಪ್ತಿಗೆ ಆದೇಶ

09/01/2026 3:11 PM

Watch Video: ಬೆಂಗಳೂರಲ್ಲಿ ಮತ್ತೊಂದು ಆಘಾತಕಾರಿ ಘಟನೆ: ಡೆಲಿವರಿ ಬಾಯ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

09/01/2026 2:44 PM

BREAKING: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ: ಶಿವಮೊಗ್ಗದಲ್ಲಿ ಇಂಜಿನಿಯರಿಂದ್ ವಿದ್ಯಾರ್ಥಿ ಸಾವು

09/01/2026 2:30 PM

ಮನರೇಗಾ ಯೋಜನೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಸಾರ್ವಜನಿಕ ಚರ್ಚೆಗೆ ಬರಲಿ: ಡಿಸಿಎಂ ಡಿ.ಕೆ. ಶಿವಕುಮಾರ್

09/01/2026 2:24 PM
State News
KARNATAKA

BREAKING: ಭೂ ಪರಿಹಾರ ನೀಡದ ಹಾಸನ ಜಿಲ್ಲಾಧಿಕಾರಿಗೆ ಕೋರ್ಟ್ ಶಾಕ್: ಕಾರು ಜಪ್ತಿಗೆ ಆದೇಶ

By kannadanewsnow0909/01/2026 3:11 PM KARNATAKA 1 Min Read

ಹಾಸನ: ಯಗಚಿ ನಾಲೆಗಾಗಿ ಭೂಮಿ ನೀಡಿದ್ದಂತ ರೈತರಿಗೆ ಪರಿಹಾರ ನೀಡುವಂತೆ ಕೋರ್ಟ್ ಸೂಚಿಸಿದ್ದರೂ ಡಿಸಿ ಮಾತ್ರ ಡೋಂಟ್ ಕೇರ್ ಎನ್ನುವಂತಿದ್ದರು.…

Watch Video: ಬೆಂಗಳೂರಲ್ಲಿ ಮತ್ತೊಂದು ಆಘಾತಕಾರಿ ಘಟನೆ: ಡೆಲಿವರಿ ಬಾಯ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

09/01/2026 2:44 PM

BREAKING: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ: ಶಿವಮೊಗ್ಗದಲ್ಲಿ ಇಂಜಿನಿಯರಿಂದ್ ವಿದ್ಯಾರ್ಥಿ ಸಾವು

09/01/2026 2:30 PM

ಮನರೇಗಾ ಯೋಜನೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಸಾರ್ವಜನಿಕ ಚರ್ಚೆಗೆ ಬರಲಿ: ಡಿಸಿಎಂ ಡಿ.ಕೆ. ಶಿವಕುಮಾರ್

09/01/2026 2:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.