Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಸಂವಿಧಾನದ ಆಶಯಗಳನ್ನು ಹೇಗೆ ಉಲ್ಲಂಘಿಸಲಾಗಿದೆ ಎಂಬುದನ್ನು ಯಾವ ಭಾರತೀಯನೂ ಮರೆಯಲಾರ’: ತುರ್ತುಸ್ಥಿತಿ ಕುರಿತು ಪ್ರಧಾನಿ ಮೋದಿ

25/06/2025 10:05 AM

ಆಷಾಢ ನವರಾತ್ರಿ ಜೂನ್ 26 ರಿಂದ ಜುಲೈ 4 ರವರೆಗೆ ಇರುತ್ತದೆ : ಈ 9 ದಿನಗಳಲ್ಲಿ ತಪ್ಪದೇ ಈ ಕೆಲಸ ಮಾಡಿ

25/06/2025 9:42 AM

BREAKING : ಅಂಡಮಾನ್ ಸಮುದ್ರದಲ್ಲಿ 24 ಗಂಟೆಗಳಲ್ಲಿ ಮೂರು ಭೂಕಂಪಗಳು, ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲು | Earthquake Andaman

25/06/2025 9:36 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ‘ನಾಮಫಲಕ’ಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಪ್ರದರ್ಶಿಸಲು ‘DC ಸೂಚನೆ’
KARNATAKA

ಶಿವಮೊಗ್ಗ: ‘ನಾಮಫಲಕ’ಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಪ್ರದರ್ಶಿಸಲು ‘DC ಸೂಚನೆ’

By kannadanewsnow0912/03/2024 3:52 PM

ಶಿವಮೊಗ್ಗ : ಕನ್ನಡ ಭಾಷಾ ಸಮಗ್ರ ಅಭಿವೃದ್ದಿ ಅಧಿನಿಯಮದಂತೆ ಜಿಲ್ಲೆಯಾದ್ಯಂತ ಕನ್ನಡ ಭಾಷೆಯ ವ್ಯಾಪಕ ಬಳಕೆ ಹಾಗೂ ಶೇ.60 ರಷ್ಟು ಕನ್ನಡ ಭಾಷೆಯನ್ನು ನಾಮಫಲಕಗಳ ಮೇಲ್ಭಾಗದಲ್ಲಿ ಪ್ರದರ್ಶಿಸಬೇಕೆಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಸೂಚನೆ ನೀಡಿದರು.

ರಾಜ್ಯ ಸರ್ಕಾರ ಕನ್ನಡ ಭಾಷಾ ಸಮಗ್ರ ಅಭಿವೃದ್ದಿ (ತಿದ್ದುಪಡಿ)ಅಧಿನಿಯಮ 2024ನ್ನು ರೂಪಿಸಿ ಆದೇಶಿಸಿರುವ ಹಿನ್ನೆಲೆ ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಸಮಿತಿ ಸಭೆ ನಡೆಸಿ ಜಿಲ್ಲೆಯಾದ್ಯಂತ ಅಧಿನಿಯಮ ಜಾರಿಗೊಳಿಸುವ ಸಂಬಂಧ ಅವರು ಸೂಚನೆ ನೀಡಿದರು.

ಕನ್ನಡ ಭಾಷೆಯ ಸಮಗ್ರ ಅಭಿವೃದ್ದಿಗಾಗಿ ಮತ್ತು ಕನ್ನಡಿಗರಿಗೆ ಜೀವನದ ಎಲ್ಲ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳು ಮತ್ತು ಕಲ್ಯಾಣ ಕ್ರಮಗಳನ್ನು ಕಲ್ಪಿಸುವುದಕ್ಕಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ದಿ ವಿಧೇಯಕ ಜಾರಿಗೆ ಬಂದಿದ್ದು ಜಿಲ್ಲೆಯಾದ್ಯಂತ ಕನ್ನಡ ಭಾಷೆಯನ್ನು ವ್ಯಾಪಕವಾಗಿ ಬಳಕೆ ಮಾಡಬೇಕು. ಸ್ಥಳೀಯ ಸಂಸ್ಥೆಗಳು ಹಾಗೂ ಸಮಿತಿ ಸದಸ್ಯರು ಮೊದಲು ಒಂದು ವಾರ ಜಿಲ್ಲೆಯಲ್ಲಿ ಕನ್ನಡ ಭಾಷೆ ಬಳಕೆ ಬಗ್ಗೆ ವ್ಯಾಪಕ ಅರಿವು ಮೂಡಿಸಿ ನಂತರ ಕ್ರಮ ವಹಿಸಬೇಕೆಂದರು.

ಸರ್ಕಾರದ ಇಲಾಖೆಗಳು, ಉದ್ಯಮಗಳು, ಸ್ವಾಯತ್ತ ಸಂಸ್ಥೆಗಳು, ಸಹಕಾರ ಮತ್ತು ಸಾರ್ವಜನಿಕ ಉದ್ಯಮಗಳು, ಶೈಕ್ಷಣಿಕ ಸಂಸ್ಥೆಗಳು, ಬ್ಯಾಂಕುಗಳು, ಇತರೆ ಹಣಕಾಸು ಸಂಸ್ಥೆಗಳು, ಖಾಸಗಿ ಕೈಗಾರಿಕೆಗಳು ಮತ್ತು ವಿಶ್ವವಿದ್ಯಾಲಯಗಳ ಫಲಕಗಳಲ್ಲಿರುವ ಹೆಸರುಗಳು ಮತ್ತು ಸದರಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳ ಹೆಸರು ಮತ್ತು ಪದನಾಮಗಳನ್ನು ಸೂಚಿಸುವ ಫಲಕಗಳು ಪ್ರಮುಖವಾಗಿ ಕನ್ನಡದಲ್ಲಿ ಇರಬೇಕು.

ರಸ್ತೆಗಳು ಮತ್ತು ಬಡಾವಣೆ ಪ್ರದೇಶಗಳ ಹೆಸರುಗಳೂ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳ ಮತ್ತು ಸ್ಥಳೀಯ ಪ್ರಾಧಿಕಾರಗಳ ಮೇಲ್ವಿಚಾರಣೆಯಲ್ಲಿ ಹಾಕಲಾಗಿರುವ ಫಲಕಗಳ ಮೇಲೆ ಪ್ರದರ್ಶಿಸಲಾಗುವ ವಿವರಗಳು ಪ್ರಮುಖವಾಗಿ ಕನ್ನಡದಲ್ಲಿ ಇರಬೇಕು.

ಕರಪತ್ರ, ಬ್ಯಾನರ್, ಫ್ಲೆಕ್ಸ್, ಎಲೆಕ್ಟ್ರಾನಿಕ್ ಪ್ರದರ್ಶನ ಫಲಕ, ಮಾಹಿತಿಗಳು, ನೋಟಿಸ್‍ಗಳು, ಅಧಿಸೂಚನೆ, ಜಾಹಿರಾತು, ರಸೀದಿ, ಇತ್ಯಾದಿಗಳು ಪ್ರಮುಖವಾಗಿ ಕನ್ನಡದಲ್ಲಿ ಇರತಕ್ಕದ್ದು. ಶಿಕ್ಷಣ, ಉನ್ನತ ಶಿಕ್ಷಣ, ತಾಂತ್ರಿ ಶಿಕ್ಷಣ, ವೃತ್ತಿ ಶಿಕ್ಷಣದಲ್ಲಿ ಕನ್ನಡ ಭಾಷೆ, ನ್ಯಾಯಾಲಯ, ಬ್ಯಾಂಕುಗಳಲ್ಲಿ ಭಾಷೆ ಕಡ್ಡಾಯವಾಗಿ ಬಳಸಬೇಕು.

ಕನ್ನಡ ಭಾಷಾ ಅನುಷ್ಟಾನಕ್ಕಾಗಿ ರಾಜ್ಯ, ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಸಮಿತಿಗಳು, ಜಾರಿ ಪ್ರಾಧಿಕಾರಗಳು ಇರುತ್ತವೆ. ಸರ್ಕಾರಿ ಮತ್ತು ಖಾಸಗಿ ಪ್ರಾಧಿಕಾರ, ವ್ಯಕ್ತಿಗಳು ಅಧಿನಿಯಮದ ಉಪಬಂಧಗಳನ್ನು ಪಾಲಿಸುವಲ್ಲಿ ವಿಫಲವಾದಲ್ಲಿ ಅಂತಹ ವಿಫಲತೆಯನ್ನು ಕರ್ತವ್ಯಚ್ಯುತಿ ಎಂದು ಭಾವಿಸಿ ಶಿಸ್ತು ಕ್ರಮ ಹಾಗೂ ಜುಲ್ಮಾನೆಗೆ ಗುರಿಯಾಗತಕ್ಕದ್ದು.

ಶೇ.60 ಕನ್ನಡ ಬಳಕೆ : ಅಧಿನಿಯಮದ 17 ನೇ ಪ್ರಕರಣ ತಿದ್ದುಪಡಿ ಪ್ರಕಾರ ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್‍ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‍ಗಳು ಮುಂತಾದವುಗಳು ತಮ್ಮ ನಾಮಫಲಗಳಲ್ಲಿ ಮೇಲ್ಭಾಗದಲ್ಲಿ ಶೇ.60ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಹೆಚ್, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ʻಭಾರತೀಯ ಪೌರತ್ವʼಕ್ಕಾಗಿ ಅರ್ಜಿ ಸಲ್ಲಿಸಲು ಈ ವೆಬ್ ಸೈಟ್ ಗೆ ಭೇಟಿ ನೀಡಿ‌ | Indian citizenship

BREAKING : ರಾಜಸ್ಥಾನದಲ್ಲಿ ವಾಯುಪಡೆಯ ‘ತೇಜಸ್ ವಿಮಾನ’ ಪತನ, ‘ಪೈಲಟ್’ ಸುರಕ್ಷಿತ

breaking news kannada latest news kannada news kannada news live kannada news now kannada online news kannadanews kannadanewsnow dot com kannadanewsnow.com kannadanewsnowdotcom karnataka latest news karnataka news latest news
Share. Facebook Twitter LinkedIn WhatsApp Email

Related Posts

ಆಷಾಢ ನವರಾತ್ರಿ ಜೂನ್ 26 ರಿಂದ ಜುಲೈ 4 ರವರೆಗೆ ಇರುತ್ತದೆ : ಈ 9 ದಿನಗಳಲ್ಲಿ ತಪ್ಪದೇ ಈ ಕೆಲಸ ಮಾಡಿ

25/06/2025 9:42 AM4 Mins Read
vidhana soudha

BIG NEWS : ರಾಜ್ಯದ `ಕೈಮಗ್ಗ ನೇಕಾರರಿಗೆ’ ಗುಡ್ ನ್ಯೂಸ್ : ` ಮುದ್ರಾ ಯೋಜನೆಯಡಿ’ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

25/06/2025 9:21 AM1 Min Read

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ 2025-26 ನೇ ಶೈಕ್ಷಣಿಕ ವರ್ಷದ `ವಿದ್ಯಾರ್ಥಿ ವೇತನ’ಕ್ಕೆ ಅರ್ಜಿ ಆಹ್ವಾನ : ಈ ದಾಖಲೆಗಳು ಕಡ್ಡಾಯ

25/06/2025 9:18 AM1 Min Read
Recent News

‘ಸಂವಿಧಾನದ ಆಶಯಗಳನ್ನು ಹೇಗೆ ಉಲ್ಲಂಘಿಸಲಾಗಿದೆ ಎಂಬುದನ್ನು ಯಾವ ಭಾರತೀಯನೂ ಮರೆಯಲಾರ’: ತುರ್ತುಸ್ಥಿತಿ ಕುರಿತು ಪ್ರಧಾನಿ ಮೋದಿ

25/06/2025 10:05 AM

ಆಷಾಢ ನವರಾತ್ರಿ ಜೂನ್ 26 ರಿಂದ ಜುಲೈ 4 ರವರೆಗೆ ಇರುತ್ತದೆ : ಈ 9 ದಿನಗಳಲ್ಲಿ ತಪ್ಪದೇ ಈ ಕೆಲಸ ಮಾಡಿ

25/06/2025 9:42 AM

BREAKING : ಅಂಡಮಾನ್ ಸಮುದ್ರದಲ್ಲಿ 24 ಗಂಟೆಗಳಲ್ಲಿ ಮೂರು ಭೂಕಂಪಗಳು, ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲು | Earthquake Andaman

25/06/2025 9:36 AM

ವಿಜ್ಞಾನಿಗಳ ಅದ್ಭುತ ಆವಿಷ್ಕಾರ :24 ಗಂಟೆಗಳಲ್ಲಿ ತ್ಯಾಜ್ಯವನ್ನು ನೋವು ನಿವಾರಕವಾಗಿ ಪರಿವರ್ತನೆ |Plastic To Paracetamol

25/06/2025 9:36 AM
State News
KARNATAKA

ಆಷಾಢ ನವರಾತ್ರಿ ಜೂನ್ 26 ರಿಂದ ಜುಲೈ 4 ರವರೆಗೆ ಇರುತ್ತದೆ : ಈ 9 ದಿನಗಳಲ್ಲಿ ತಪ್ಪದೇ ಈ ಕೆಲಸ ಮಾಡಿ

By kannadanewsnow5725/06/2025 9:42 AM KARNATAKA 4 Mins Read

ಆಷಾಢ ನವರಾತ್ರಿ ಜೂನ್ 26 ರಿಂದ ಜುಲೈ 4 ರವರೆಗೆ ಇರುತ್ತದೆ. ಈ 9 ದಿನಗಳಲ್ಲಿ, ವಾರಘಿಯನ್ನು ಸ್ಮರಿಸಿ ಈ…

vidhana soudha

BIG NEWS : ರಾಜ್ಯದ `ಕೈಮಗ್ಗ ನೇಕಾರರಿಗೆ’ ಗುಡ್ ನ್ಯೂಸ್ : ` ಮುದ್ರಾ ಯೋಜನೆಯಡಿ’ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

25/06/2025 9:21 AM

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ 2025-26 ನೇ ಶೈಕ್ಷಣಿಕ ವರ್ಷದ `ವಿದ್ಯಾರ್ಥಿ ವೇತನ’ಕ್ಕೆ ಅರ್ಜಿ ಆಹ್ವಾನ : ಈ ದಾಖಲೆಗಳು ಕಡ್ಡಾಯ

25/06/2025 9:18 AM

SHOCKING : ಬೆಂಗಳೂರಲ್ಲಿ ಘೋರ ದುರಂತ : ಕುಡಿದು ಕಟ್ಟಡದಿಂದ ಆಯತಪ್ಪಿ ಬಿದ್ದು ಯುವತಿ ಸಾವು.!

25/06/2025 9:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.