Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

“ಶೇ.10ರಷ್ಟು ಜನಸಂಖ್ಯೆ ಸೇನೆಯನ್ನ ನಿಯಂತ್ರಿಸುತ್ತಿದೆ” : ‘ರಾಹುಲ್ ಗಾಂಧಿ’ ಹೊಸ ವಿವಾದಾತ್ಮಕ ಹೇಳಿಕೆ

04/11/2025 10:17 PM

BREAKING ; “ಸಂಸ್ಥೆಗಿಂತ ಯಾರೂ ದೊಡ್ಡವರಿಲ್ಲ” : ‘ಟಾಟಾ ಟ್ರಸ್ಟ್’ಗಳ ಟ್ರಸ್ಟಿ ಹುದ್ದೆಯಿಂದ ಕೆಳಗಿಳಿದ ‘ಮೆಹ್ಲಿ ಮಿಸ್ತ್ರಿ’

04/11/2025 10:04 PM

BREAKING : ‘ಟಾಟಾ ಟ್ರಸ್ಟ್’ಗಳಿಂದ ಹೊರಬಂದ ‘ಮೆಹ್ಲಿ ಮಿಸ್ತ್ರಿ’ ; ‘ರತನ್ ಟಾಟಾ’ ಬದ್ಧತೆ ಉಲ್ಲೇಖ

04/11/2025 9:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಉಳ್ಳೂರಲ್ಲಿ KSRTC ಬಸ್ ನಿಲ್ಲಿಸುವಂತೆ ‘ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆ’ ಮನವಿ
KARNATAKA

ಶಿವಮೊಗ್ಗ: ಉಳ್ಳೂರಲ್ಲಿ KSRTC ಬಸ್ ನಿಲ್ಲಿಸುವಂತೆ ‘ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆ’ ಮನವಿ

By kannadanewsnow0918/09/2025 8:50 PM

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರು ಗ್ರಾಮದಲ್ಲಿ ಸ್ಥಳೀಯವಾಗಿ ಸಾಗರ ಡಿಪೋ ವ್ಯಾಪ್ತಿಯಿಂದ ಹೊರಡುವ ಸರ್ಕಾರಿ ಬಸ್‌ಗಳನ್ನು ನಿಲ್ಲಿಸುವಂತೆ ಕೋರಿ ಸಾಗರದ ಡಿಪೋ ಮ್ಯಾನೇಜರ್ ಗೆ ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆಯ ಅಧ್ಯಕ್ಷ ವಸೀಮ್ ಉಳ್ಳೂರು ಅವರು ಮನವಿ ಸಲ್ಲಿಸಿದರು.

ಈ ಸಂಬಂಧ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿನ ಕೆ ಎಸ್ ಆರ್ ಟಿ ಸಿ ಡಿಪೋಗೆ ತೆರಳಿದಂತ ಅವರು, ಡಿಪೋ ಮ್ಯಾನೇಜರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಿದರು. ಸಾಗರ ಸಮೀಪದ ಉಳ್ಳೂರಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ನಿಲುಗಡೆ ನೀಡುವಂತೆ ಮನವಿ ಪತ್ರದಲ್ಲಿ ಕೋರಲಾಗಿದೆ.

ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆಯ ಮನವಿ ಏನು?

ಸಾಗರ ತಾಲ್ಲೂಕು ಉಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಳ್ಳೂರು ಗ್ರಾಮವು ಪಂಚಾಯಿತಿಯ ಕೇಂದ್ರ ಸ್ಥಾನವಾಗಿದ್ದು ಈ ವ್ಯಾಪ್ತಿಯಲ್ಲಿ ಸುಮಾರು 700 ರಿಂದ 800 ಕುಟುಂಬಗಳು ವಾಸಿಸುತ್ತಿದ್ದು, ಸದರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಸಾರ್ವಜನಿಕರು, ರೈತಾಪಿ ವರ್ಗದವರು, ಮಹಿಳೆಯರು ವೃದ್ಧರು ಆಸ್ಪತ್ರೆ ಹಾಗೂ ಇನ್ನಿತರೆ ಕೆಲಸ ಕಾರ್ಯಗಳಿಗೆ ಹಾಗೂ ಶಾಲಾ ಮಕ್ಕಳು ವಿದ್ಯಾಭ್ಯಾಸ ಸಲುವಾಗಿ ನಗರ ಪ್ರದೇಶಕ್ಕೆ ಸ್ಥಳೀಯವಾಗಿ ಮತ್ತು ಶಿವಮೊಗ್ಗ ಮಾರ್ಗವಾಗಿ ಚಲಿಸುವ ಸರ್ಕಾರಿ ಬಸ್ ಮುಖಾಂತರವಾಗಿಯೇ ತೆರಳುತ್ತಿದ್ದಾರೆ. ಆದರೆ ಸಾಗರದಿಂದ ಶಿವಮೊಗ್ಗ ಮತ್ತು ಶಿವಮೊಗ್ಗದಿಂದ ಸಾಗರ ಮಾರ್ಗವಾಗಿ ಚಲಿಸುವ ಸರ್ಕಾರಿ ಬಸ್‌ಗಳು ಉಳ್ಳೂರು ಗ್ರಾಮದ ಕೆರೆಯ ಹತ್ತಿರ ಇರುವ ಬಸ್ ಸ್ಯಾಂಡ್ ನಲ್ಲಿ ಏರಿ ಹಾಗೂ ತಿರುವು ಇದೇ ಎಂಬ ಕಾರಣದಿಂದ ಸ್ಥಳೀಯ ಬಸ್ ಮತ್ತು ಮುಂಭಾಗ ಸರ್ಕಾರಿ ಬಸ್‌ಗಳು ನಿಲ್ಲಿಸದೇ, ಉಳ್ಳೂರು ಗ್ರಾಮದಿಂದ ದೂರವಿರುವ ಸಿಗಂಧೂರೇಶ್ವರಿ ಕಾಲೇಜ್ ನಿಲ್ಲಿಸುತ್ತಿರುತ್ತಾರೆ ಎಂದು ಆರೋಪಿಸಿದ್ದಾರೆ.

ಹೀಗೆ ಉಳ್ಳೂರು ಬಿಟ್ಟು, ಬೇರೆಡೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ಲಿಸುತ್ತಿರುವುದರಿಂದ ವೃದ್ದರು ಗರ್ಭಿಣಿಯರು ಹಾಗೂ ಮಹಿಳೆಯರು ಸಾರ್ವಜನಿಕರು ಸಿಗಂಧೂರೇಶ್ವರಿ ಕಾಲೇಜು ಬಳಿ ನಿಂತು ಬಸ್ ಹತ್ತುವುದು ಅಸಾಧ್ಯವಾಗಿದೆ. ಹೀಗಾಗಿ ಸರ್ಕಾರಿ ಬಸ್‌ಗಳನ್ನು ಉಳ್ಳೂರು ಗ್ರಾಮ ಬಿ.ಎಸ್.ಎನ್.ಎಲ್. ಕಛೇರಿ ಮುಂಭಾಗದಲ್ಲಿ ನಿಲ್ಲಿಸುವಂತೆ ಮನವಿ ಮಾಡಲಾಗಿದೆ. ಹೀಗೆ ನಿಲ್ಲಿಸುವುದರಿಂದ ಸಾರ್ವಜನಿಕರಿಗೆ ಬಹಳ ಅನುಕೂಲವಾಗುತ್ತದೆ. ಈ ಹಿಂದೆ ಖಾಸಗಿ ಬಸ್ ಹಾಗೂ ಸರ್ಕಾರಿ ಬಸ್‌ಗಳು ಈ ಸ್ಥಳದಲ್ಲಿ ನಿಲ್ಲಿಸುತ್ತಿದ್ದು, ಸಾರ್ವಜನಿಕರು ತೊಂದರೆ ಇಲ್ಲದೇ ನಗರ ಪ್ರದೇಶಗಳಿಗೆ ತೆರಳುತ್ತಿದ್ದರು ಎಂಬುದಾಗಿ ಮನವಿ ಪತ್ರದಲ್ಲಿ ಮನವರಿಕೆ ಮಾಡಿಕೊಡಲಾಗಿದೆ.

ಈ ಎಲ್ಲಾ ಕಾರಣಗಳಿಂದಾಗಿ ಸಾಗರ ತಾಲ್ಲೂಕಿನ ಉಳ್ಳೂರು ಗ್ರಾಮದ ಬಿ.ಎಸ್.ಎನ್.ಎಲ್, ಕಛೇರಿ ಮುಂಭಾಗದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ನಿಲುಗಡೆ ಮಾಡುವಂತೆ ಸಾಗರದ ಘಟಕ ವ್ಯವಸ್ಥಾಪಕರಿಗೆ ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆಯ ಅಧ್ಯಕ್ಷ ವಸೀಮ್ ಉಳ್ಳೂರು ಮನವಿ ಮಾಡಿದ್ದಾರೆ.

ಈ ವೇಳೆಯಲ್ಲಿ ಶಿವಕುಮಾರ್ ಉಳ್ಳೂರು, ಇಂಮ್ತಿಯಾಜ್ ಹಾಜರಿದ್ದರು.

ಉಳ್ಳೂರು ಗ್ರಾಮ ಪಂಚಾಯ್ತಿಯಿಂದಲೂ ಈ ಹಿಂದೆ ಮನವಿ

ಅಂದಹಾಗೇ ಇಂದು ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆಯಿಂದ ಉಳ್ಳೂರಲ್ಲಿ ಕೆ ಎಸ್ ಆರ್ ಟಿಸಿ ಬಸ್ ನಿಲ್ಲಿಸುವಂತೆ ಮನವಿ ಮಾಡಿದ್ದರೇ, ಇದಕ್ಕೂ ಮೊದಲೇ ಕಳೆದ ಫೆಬ್ರವರಿಯಲ್ಲೇ ಉಳ್ಳೂರು ಗ್ರಾಮ ಪಂಚಾಯ್ತಿಯಿಂದಲೂ ಸಾಗರದ ಕೆ ಎಸ್ ಆರ್ ಟಿ ಸಿ ಘಟಕ ವ್ಯವಸ್ಥಾಪಕರಿಗೆ ಇದೇ ಮನವಿ ಮಾಡಲಾಗಿತ್ತು. ಆದರೇ ಈವರೆಗೂ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ವಿಪರ್ಯಾಸವೇ ಸರಿ. ಹೀಗಾಗಿ ಕೂಡಲೇ ಈ ಬಗ್ಗೆ ಸಾಗರದ ಕೆ ಎಸ್ ಆರ್ ಟಿ ಸಿ ಘಟಕ ವ್ಯವಸ್ಥಾಪಕರು ಸಿಗಂದೂರು ಶಾಲೆಯ ಬದಲಾಗಿ ಉಳ್ಳೂರಲ್ಲಿ ಬಸ್ ನಿಲುಗಡೆ ಮಾಡುವಂತೆ ಉಳ್ಳೂರು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಜೊತೆಗೆ ಇದನ್ನು ಜರೂರಾಗಿ ಮಾಡದಿದ್ದರೇ ಕೆ ಎಸ್ ಆರ್ ಟಿ ಸಿ ಡಿಪೋ ಬಳಿಯಲ್ಲಿ ಹೋರಾಟ ಮಾಡುವುದಾಗಿಯೂ ಎಚ್ಚರಿಸಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: ಒಂದು ಬಾರಿಗೆ ವಯೋಮಿತಿ 2 ವರ್ಷ ಸಡಿಲಿಸಿ ರಾಜ್ಯ ಸರ್ಕಾರ ಆದೇಶ

BREAKING: ಅತ್ಯಾಚಾರ ಪ್ರಕರಣದಲ್ಲಿ ಲಲಿತ್ ಮೋದಿ ಸಹೋದರ ಸಮೀರ್ ಮೋದಿ ಅರೆಸ್ಟ್ | Samir Modi Arrest

Share. Facebook Twitter LinkedIn WhatsApp Email

Related Posts

ಕಸ ವಿಲೇವಾರಿ, ರಸ್ತೆಗುಂಡಿ ಸಮಸ್ಯೆ ವಿರುದ್ಧ ಒಂದು ವಾರ ಅಭಿಯಾನ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

04/11/2025 9:23 PM2 Mins Read

BREAKING: ಕೋಲಾರದ ಮಾಲೂರು ಕ್ಷೇತ್ರದ ಮರು ಮತಏಣಿಕೆಗೆ ದಿನಾಂಕ ಫಿಕ್ಸ್

04/11/2025 6:59 PM1 Min Read

BIG NEWS: ‘RFO ಹುದ್ದೆ’ಗಳಿಗೆ ಅರ್ಧ ಬಡ್ತಿ, ಅರ್ಧ ನೇರ ನೇಮಕಾತಿ: ಸಚಿವ ಈಶ್ವರ ಖಂಡ್ರೆ ಘೋಷಣೆ

04/11/2025 6:48 PM1 Min Read
Recent News

“ಶೇ.10ರಷ್ಟು ಜನಸಂಖ್ಯೆ ಸೇನೆಯನ್ನ ನಿಯಂತ್ರಿಸುತ್ತಿದೆ” : ‘ರಾಹುಲ್ ಗಾಂಧಿ’ ಹೊಸ ವಿವಾದಾತ್ಮಕ ಹೇಳಿಕೆ

04/11/2025 10:17 PM

BREAKING ; “ಸಂಸ್ಥೆಗಿಂತ ಯಾರೂ ದೊಡ್ಡವರಿಲ್ಲ” : ‘ಟಾಟಾ ಟ್ರಸ್ಟ್’ಗಳ ಟ್ರಸ್ಟಿ ಹುದ್ದೆಯಿಂದ ಕೆಳಗಿಳಿದ ‘ಮೆಹ್ಲಿ ಮಿಸ್ತ್ರಿ’

04/11/2025 10:04 PM

BREAKING : ‘ಟಾಟಾ ಟ್ರಸ್ಟ್’ಗಳಿಂದ ಹೊರಬಂದ ‘ಮೆಹ್ಲಿ ಮಿಸ್ತ್ರಿ’ ; ‘ರತನ್ ಟಾಟಾ’ ಬದ್ಧತೆ ಉಲ್ಲೇಖ

04/11/2025 9:54 PM

BREAKING : SBI ‘ಕ್ಲರ್ಕ್ ಪ್ರಿಲಿಮ್ಸ್’ ಫಲಿತಾಂಶ ಪ್ರಕಟ ; ರಿಸಲ್ಟ್ ನೋಡಲು ಡೈರೆಕ್ಟ್ ಲಿಂಕ್ ಇಲ್ಲಿದೆ!

04/11/2025 9:38 PM
State News
KARNATAKA

ಕಸ ವಿಲೇವಾರಿ, ರಸ್ತೆಗುಂಡಿ ಸಮಸ್ಯೆ ವಿರುದ್ಧ ಒಂದು ವಾರ ಅಭಿಯಾನ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

By kannadanewsnow0904/11/2025 9:23 PM KARNATAKA 2 Mins Read

ಬೆಂಗಳೂರು: ಬೆಂಗಳೂರಿನ ಕಸ ವಿಲೇವಾರಿ ಸಮಸ್ಯೆ ಹಾಗೂ ರಸ್ತೆಗುಂಡಿ ಸಮಸ್ಯೆ ವಿರುದ್ಧ ಒಂದು ವಾರ ಬಿಜೆಪಿ ಜನಪ್ರತಿನಿಧಿಗಳ ವತಿಯಿಂದ ಸರ್ಕಾರದ…

BREAKING: ಕೋಲಾರದ ಮಾಲೂರು ಕ್ಷೇತ್ರದ ಮರು ಮತಏಣಿಕೆಗೆ ದಿನಾಂಕ ಫಿಕ್ಸ್

04/11/2025 6:59 PM

BIG NEWS: ‘RFO ಹುದ್ದೆ’ಗಳಿಗೆ ಅರ್ಧ ಬಡ್ತಿ, ಅರ್ಧ ನೇರ ನೇಮಕಾತಿ: ಸಚಿವ ಈಶ್ವರ ಖಂಡ್ರೆ ಘೋಷಣೆ

04/11/2025 6:48 PM

BREAKING: ಮಂಡ್ಯದಲ್ಲಿ ಸಮಸ್ಯೆ ಬಗೆಹರಿಸದಿದ್ದಕ್ಕೆ ಡಿಸಿ ಕಚೇರಿ ಎದುರೇ ‘ರೈತ’ ಬೆಂಕಿ ಹಂಚ್ಚಿಕೊಂಡು ಆತ್ಮಹತ್ಯೆಗೆ ಯತ್ನ

04/11/2025 6:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.