ಶಿವಮೊಗ್ಗ: ನಾಳೆ ಸೊರಬ ತಾಲ್ಲೂಕಿನ ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ರಕ್ತದಾನ ಮಾಡುವಂತೆ ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪೃಥ್ವಿ.ಆರ್ ವಿನಂತಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ನಾಳೆ ಶಿವಮೊಗ್ಗ ಜಿಲ್ಲಾ ಆರೋಗ್ಯ ಕಲ್ಯಾಣಾಧಿಕಾರಿಗಳು, ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯ ರಕ್ತನಿಧಿ ಘಟಕ, ಸೊರಬ ತಾಲ್ಲೂಕು ಆರೋಗ್ಯಾಧಿಕಾರಿಗಳು, ದೂಗೂರು, ಉಳವಿ, ನಿಸರಾಣಿ, ಹೆಗ್ಗೋಡು ಗ್ರಾಮ ಪಂಚಾಯ್ತಿ, ಧರ್ಮಸ್ಥಳ ಸ್ವ ಸಹಾಯ ಸಂಘ, ಸ್ತ್ರೀಶಕ್ತಿ ಸಂಘ ಹಾಗೂ ಉಳವಿ ಲಯನ್ಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಕನಿಷ್ಠ 45 ಕೆಜಿ ತೂಕವಿರುವಂತ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು 18 ರಿಂದ 60 ವರ್ಷದ ಒಳಗಿನ ಎಲ್ಲಾ ಆರೋಗ್ಯವಂತರು ರಕ್ತವನ್ನು ನೀಡಬಹುದು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ರಕ್ತದಾನ ಮಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಇನ್ನೂ ಒಂದು ವರ್ಷದಿಂದ ಈಚೆಗೆ ಮಲೇರಿಯಾ, ಟೈಪೈಡ್, ಜಾಂಡೀಸ್ ಖಾಯಿಲೆಗೆ ಒಳಗಾದವರು ರಕ್ತ ನೀಡಬಾರದು. ಒಂದು ವರ್ಷದ ಈಚೆಗೆ ಶಸ್ತ್ರ ಚಿಕಿತ್ಸೆಗೆ ಒಳಗಾದವರು, ಗರ್ಭಿಣಿ ಸ್ತ್ರೀಯರು, ಹಾಲುಣಿಸುವಂತ ತಾಯಂದಿರು, ಋತುಸ್ರಾವದಲ್ಲಿರುವಂತ ಸ್ತ್ರೀಯರು ರಕ್ತ ನೀಡಬಾರದು ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಸೊರಬ ತಾಲ್ಲೂಕು ವೈದ್ಯಾಧಿಕಾರಿ ಡಾ.ನೂತನ್ ನಾಯ್ಕ್-9482371898, ಉಳವಿ ಪ್ರಾಥಮಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪೃಥ್ವಿ.ಆರ್-8088099155, ಆರೋಗ್ಯ ನಿರೀಕ್ಷಕ ಶಶಿಧರ-9844227608, ಉಳವಿ ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರವೀಣ್ ಕುಮಾರ್.ಹೆಚ್.ವಿ-9844466222ಗೆ ಸಂಪರ್ಕಿಸಬಹುದಾಗಿದೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
GOOD NEWS: ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ‘ಸಿಎಂ ಸಿದ್ಧರಾಮಯ್ಯ’ ಗುಡ್ ನ್ಯೂಸ್
BREAKING : ವಸತಿ ಯೋಜನೆಯಲ್ಲೂ ಮುಸ್ಲಿಂರಿಗೆ ಶೇ.15 ರಷ್ಟು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ
BREAKING : ಮೇ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ