Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಹಾಡಹಗಲೇ 11 ವರ್ಷದ ಬಾಲಕಿಗೆ ವೃದ್ಧನಿಂದ ಲೈಂಗಿಕ ಕಿರುಕುಳ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

10/09/2025 9:06 AM

ನೇಪಾಳದಲ್ಲಿ ರಾಜಕೀಯ ಭೂಕಂಪ: ಒಲಿ ಸರ್ಕಾರ ಪತನ, ಸೇನೆಗೆ ಭದ್ರತಾ ಹೊಣೆ !

10/09/2025 9:05 AM

ನೀವು 30 ವರ್ಷ ವಯಸ್ಸಿನವರಾಗಿದ್ದೀರಾ? ಹಾಗಾದ್ರೇ ಮಿಸ್ ಮಾಡದೇ 5 ಆರೋಗ್ಯ ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ

10/09/2025 9:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಸುಗಮ ಮತ್ತು ಶಾಂತಿಯುತ ಮತದಾನಕ್ಕೆ ಅಗತ್ಯವಾದ ಕ್ರಮಕ್ಕೆ ವೀಕ್ಷಕರಾದ ಪೂನಂ ಸೂಚನೆ
KARNATAKA

ಶಿವಮೊಗ್ಗ: ಸುಗಮ ಮತ್ತು ಶಾಂತಿಯುತ ಮತದಾನಕ್ಕೆ ಅಗತ್ಯವಾದ ಕ್ರಮಕ್ಕೆ ವೀಕ್ಷಕರಾದ ಪೂನಂ ಸೂಚನೆ

By kannadanewsnow0922/04/2024 2:06 PM

ಶಿವಮೊಗ್ಗ : ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸುಗಮ ಮತ್ತು ಶಾಂತಿಯುತ ಮತದಾನ ನಡೆಯಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕಟ್ಟುನಿಟ್ಟಾಗಿ ಚುನಾವಣಾಧಿಕಾರಿಗಳು ಕೈಗೊಳ್ಳಬೇಕೆಂದು 14-ಶಿವಮೊಗ್ಗ ಲೋಕಸಭಾ ಕ್ಷೇತ್ರದ ವೀಕ್ಷಕರಾದ ಪೂನಂ ಅವರು ತಿಳಿಸಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏ.22 ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಮತಕ್ಷೇತ್ರಗಳ ಎಆರ್‍ಓ ಮತ್ತು ಇತರೆ ಚುನಾವಣಾ ನಿಯೋಜಿತ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

14-ಲೋಕಸಭಾ ಕ್ಷೇತ್ರ ಕ್ಕೆ ಸಂಬಂಧಿಸಿದಂತೆ 111-ಶಿವಮೊಗ್ಗ ಗ್ರಾಮಾಂತರ, 112-ಭದ್ರಾವತಿ, 113-ಶಿವಮೊಗ್ಗ, 114-ತೀರ್ಥಹಳ್ಳಿ, 115-ಶಿಕಾರಿಪುರ, 116ಸೊರಬ, 117-ಸಾಗರ ಮತ್ತು 118 ಬೈಂದೂರು ಮತಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು, ಅಬಕಾರಿ ಮತ್ತು ಆದಾಯ ತೆರಿಗೆ ಅಧಿಕಾರಿಗಳು ಹಾಗೂ ಚುನಾವಣೆಗೆ ಸಂಬಂಧಿಸಿದ ವಿವಿಧ ಸಮಿತಿ, ತಂಡಗಳ ನೋಡಲ್ ಅಧಿಕಾರಿಗಳಿಂದ ಅವರ ಕಾರ್ಯಕ್ಷೇತ್ರದ ಕುರಿತು ಸಭೆಯಲ್ಲಿ ಮಾಹಿತಿ ಪಡೆದುಕೊಂಡ ಅವರು ಎಲ್ಲ ಸಹಾಯಕ ಚುನಾವಣಾಧಿಕಾರಿಗಳು ಮತ್ತು ಇತರೆ ತಂಡಗಳ ನೋಡಲ್ ಅಧಿಕಾರಿಗಳು ಸುಗಮವಾಗಿ ಮತದಾನ ಆಗುವ ನಿಟ್ಟಿನಲ್ಲಿ ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು.

ಪ್ರತಿ ಸಹಾಯಕ ಚುನಾವಣಾಧಿಕಾರಿಗಳು ತಮ್ಮ ಮತಕ್ಷೇತ್ರಗಳಿಗೆ ಖುದ್ದಾಗಿ ಭೇಟಿ ನೀಡಿ ಮತ ಕ್ಷೇತ್ರಗಳ ಸೂಕ್ಷ್ಮತೆಯನ್ನು ಅರಿತುಕೊಂಡು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಪ್ರತಿ ಚೆಕ್‍ಪೋಸ್ಟ್‍ಗಳಲ್ಲಿ ಎಚ್ಚರಿಕೆಯಿಂದ ಪರಿಶೀಲನೆ/ತಪಾಸಣೆ ಕೈಗೊಳ್ಳಬೇಕು.

ಪ್ರತಿ ಮನೆ ಮನೆಗಳಿಗೆ ತೆರಳಿ ಮತದಾರರ ಮಾಹಿತಿ ಸ್ಲಿಪ್‍ಗಳನ್ನು ವಿತರಿಸಬೇಕು. ವಿಶೇಷವಾಗಿ ದೂರದ ಹಳ್ಳಿ/ಪ್ರದೇಶಗಳಲ್ಲಿ ಸಮರ್ಪಕವಾಗಿ ವಿತರಣೆ ಮಾಡಬೇಕು. ಮತದಾರರ ಮಾಹಿತಿ ಸ್ಲಿಪ್ ವಿತರಣೆ ವೇಳೆ ಮತದಾರರ ಬೂತ್ ಮತ್ತು ಇತರೆ ಏನಾದರೂ ಸಮಸ್ಯೆಗಳು ಕಂಡು ಬಂದಲ್ಲಿ ಶೀಘ್ರವಾಗಿ ಇತ್ಯರ್ಥಪಡಿಸಬೇಕು.

ಮತದಾನಕ್ಕೆ ಸಂಬಂಧಿಸಿದಂತೆ ಇವಿಎಂ, ಅಣಕು ಮತದಾನ, ಇವಿಎಂ ಡಾಟಾ, ಬ್ಯಾಟರಿ, ಯೂಸರ್ ಬಟನ್ ಬಳಕೆ ಸೇರಿದಂತೆ ಎಲ್ಲ ಮಾಹಿತಿ ಎಸ್‍ಓಪಿ ಯಲ್ಲಿದ್ದು ಸಂಬಂಧಿಸಿದ ಅಧಿಕಾರಿಗಳು ಎಸ್‍ಓಪಿ ಯನ್ನು ಸಮರ್ಪಕವಾಗಿ ಓದಿಕೊಳ್ಳಬೇಕೆಂದು ಸೂಚನೆ ನೀಡಿದ ಅವರು ಎಲ್ಲ ಮತಕ್ಷೇತ್ರಗಳಲ್ಲಿ ಅಧಿಕಾರಿಗಳ ರಿಜಿಸ್ಟರ್ ಸೇರಿದಂತೆ ಇತರೆ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದರು.

ನಾನು ಭದ್ರಾವತಿ ಮತಕ್ಷೇತ್ರದಲ್ಲಿ ಸ್ಟ್ರಾಂಗ್ ರೂಂ, ವಲ್ನರಬಲ್, ಶ್ಯಾಡೋ ಮತಗಟ್ಟೆಗಳನ್ನು ಈಗಾಗಲೇ ಪರಿಶೀಲಿಸಿದ್ದು, ಇನ್ನುಳಿದ ಮತಕ್ಷೇತ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದ ಅವರು ಪ್ರತಿ ಮತಕ್ಷೇತ್ರಗಳ ಮತಗಟ್ಟೆಗಳು, ಮತದಾರರ ಪಟ್ಟಿ, ಕ್ರಿಟಿಕಲ್, ವಲ್ನರಬಲ್, ಪಿಡಬ್ಲ್ಯುಡಿ, ಸಖಿ, ಯುವ ಮತದಾರರ ಮತಗಟ್ಟೆಗಳ ಮಾಹಿತಿ, ಚೆಕ್‍ಪೋಸ್ಟ್, ವಶಕ್ಕೆ ಪಡೆಯಲಾದ ಅಕ್ರಮ ಹಣ, ಮದ್ಯದ ವಿವರ, ದಾಖಲಿಸಲಾದ ಪ್ರಕರಣಗಳು, ಅಧಿಕಾರಿ/ಸಿಬ್ಬಂದಿಗಳಿಗೆ ನೀಡಲಾದ ತರಬೇತಿಗಳ ಕುರಿತು ಮಾಹಿತಿ ಪಡೆದುಕೊಂಡು ಸೂಕ್ತ ಸಲಹೆ, ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು.

ವೆಚ್ಚ ವೀಕ್ಷಕರಾದ ಮೀನಾಕ್ಷಿ ಸಿಂಗ್ ಮಾತನಾಡಿ, ಎಲ್ಲ ಚೆಕ್‍ಪೋಸ್ಟ್‍ಗಳಲ್ಲಿ ಜಾಗರೂಕತೆಯಿಂದ ಪರಿಶೀಲನೆ ನಡೆಸಬೇಕು. ಯಾವುದಾದರೂ ಚೆಕ್‍ಪೋಸ್ಟ್‍ಗೆ ಹೆಚ್ಚುವರಿ ಅಧಿಕಾರಿ, ಸಿಬ್ಬಂದಿಗಳ ಅವಶ್ಯಕತೆ ಇದ್ದಲ್ಲಿ ತಿಳಿಸಬೇಕು ಎಂದರು.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ, ಎಲ್ಲ ಸಹಾಯಕ ಚುನಾವಣಾಧಿಕಾರಿಗಳು, ಎಫ್‍ಎಸ್‍ಟಿ, ಎಸ್‍ಎಸ್‍ಟಿ, ಇತರೆ ತಂಡಗಳು ಮತ್ತು ಸಮಿತಿಗಳ ನೋಡಲ್ ಅಧಿಕಾರಿಗಳು ಸಮರ್ಪಕವಾಗಿ ಚುನಾವಣಾ ಕರ್ತವ್ಯವನ್ನು ನಿರ್ವಹಿಸಬೇಕು. ಸುಗಮ ಮತ್ತು ಶಾಂತಿಯುತ ಚುನಾವಣೆಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಎಸ್‍ಪಿ ಮಿಥುನ್ ಕುಮಾರ್, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಎಸಿಗಳಾದ ಸತ್ಯನಾರಾಯಣ, ಯತೀಶ್, ಸಹಾಯಕ ಚುನಾವಣಾಧಿಕಾರಿಗಳು, ಚುನಾವಣಾ ನಿಯೋಜಿತ ಅಧಿಕಾರಿಗಳು ಹಾಜರಿದ್ದರು.

ದೆಹಲಿ ಮದ್ಯ ನೀತಿ ಪ್ರಕರಣ: ಕೇಜ್ರಿವಾಲ್ ಗೆ ‘ಮಧ್ಯಂತರ ಜಾಮೀನು’ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ತಿರಸ್ಕರಿಸಿದ ಹೈಕೋರ್ಟ್

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ : ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ

Share. Facebook Twitter LinkedIn WhatsApp Email

Related Posts

BREAKING : ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿ ರಾಜ್ಯಾದ್ಯಂತ 69 ಕಡೆ ಲೋಕಾಯುಕ್ತ ದಾಳಿ | Lokayukta Raid

10/09/2025 8:57 AM1 Min Read

BREAKING : ಬೆಳ್ಳಂ ಬೆಳಗ್ಗೆ ರಾಜ್ಯಾದ್ಯಂತ 69 ಕಡೆ ಲೋಕಾಯುಕ್ತ ದಾಳಿ |Lokayukta Raid

10/09/2025 8:37 AM1 Min Read

ನೀವು ಮಲಗುವ ಭಂಗಿಯಿಂದಲೂ ನಿಮ್ಮ ಆರೋಗ್ಯ ಮತ್ತು ವ್ಯಕ್ತಿತ್ವವನ್ನು ತಿಳಿಯಬಹುದು.!

10/09/2025 8:30 AM1 Min Read
Recent News

SHOCKING : ಹಾಡಹಗಲೇ 11 ವರ್ಷದ ಬಾಲಕಿಗೆ ವೃದ್ಧನಿಂದ ಲೈಂಗಿಕ ಕಿರುಕುಳ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

10/09/2025 9:06 AM

ನೇಪಾಳದಲ್ಲಿ ರಾಜಕೀಯ ಭೂಕಂಪ: ಒಲಿ ಸರ್ಕಾರ ಪತನ, ಸೇನೆಗೆ ಭದ್ರತಾ ಹೊಣೆ !

10/09/2025 9:05 AM

ನೀವು 30 ವರ್ಷ ವಯಸ್ಸಿನವರಾಗಿದ್ದೀರಾ? ಹಾಗಾದ್ರೇ ಮಿಸ್ ಮಾಡದೇ 5 ಆರೋಗ್ಯ ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ

10/09/2025 9:00 AM

BREAKING : ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿ ರಾಜ್ಯಾದ್ಯಂತ 69 ಕಡೆ ಲೋಕಾಯುಕ್ತ ದಾಳಿ | Lokayukta Raid

10/09/2025 8:57 AM
State News
KARNATAKA

BREAKING : ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿ ರಾಜ್ಯಾದ್ಯಂತ 69 ಕಡೆ ಲೋಕಾಯುಕ್ತ ದಾಳಿ | Lokayukta Raid

By kannadanewsnow5710/09/2025 8:57 AM KARNATAKA 1 Min Read

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ 69 ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು,…

BREAKING : ಬೆಳ್ಳಂ ಬೆಳಗ್ಗೆ ರಾಜ್ಯಾದ್ಯಂತ 69 ಕಡೆ ಲೋಕಾಯುಕ್ತ ದಾಳಿ |Lokayukta Raid

10/09/2025 8:37 AM

ನೀವು ಮಲಗುವ ಭಂಗಿಯಿಂದಲೂ ನಿಮ್ಮ ಆರೋಗ್ಯ ಮತ್ತು ವ್ಯಕ್ತಿತ್ವವನ್ನು ತಿಳಿಯಬಹುದು.!

10/09/2025 8:30 AM

ಪೋಷಕರೇ ನಿಮ್ಮ ಮಕ್ಕಳ ಮೊಬೈಲ್ ಚಟ ಬಿಡಿಸಲು ತಪ್ಪದೇ ಈ 7 ಸಲಹೆಗಳನ್ನು ಪಾಲಿಸಿ

10/09/2025 8:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.