ಶಿವಮೊಗ್ಗ: ಜಿಲ್ಲೆಯಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಜೂನ್.30ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ಮೆಸ್ಕಾಂ ತಿಳಿಸಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶಿವಮೊಗ್ಗ ನಗರ ಉಪ ವಿಭಾಗ-2ರ ವ್ಯಾಪ್ತಿಯಲ್ಲಿನ ಮಂಡ್ಲಿ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಇರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಜೂ.30 ರ ಬೆಳಗ್ಗೆ 09-00 ರಿಂದ ಸಂಜೆ 06-00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಅಂತ ಹೇಳಿದೆ.

ಜೂ.30ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಪೀಯರ್ ಲೈಟ್, ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್ ವಾಟರ್ ಸಪ್ಲೈ, ಗೋಪಿಶೆಟ್ಟಿಕೊಪ್ಪ, ಜಿ.ಎಸ್ ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆ.ಹೆಚ್.ಬಿ ಕಾಲೋನಿ, ಮೇಲಿನ ತುಂಗಾನಗರ ಕೆಳಗಿನ ತುಂಗಾನಗರ, ಪದ್ಮ ಟಾಕೀಸ್, ಮಂಜುನಾಥ ಬಡಾವಣೆ, ಹಳೇ ಗೋಪಿಶೆಟ್ಟಿಕೊಪ್ಪ, ಮಲ್ಲಿಕಾರ್ಜುನ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎನ್.ಟಿ ರಸ್ತೆ, ಬಿ.ಹೆಚ್ ರಸ್ತೆ, ಓಟಿ ರಸ್ತೆ, ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸುಳೇಬೈಲು ಸುತ್ತಮುತ್ತಲಿನ ಪ್ರದೇಶ, ಜೆ.ಸಿ ನಗರ, ಬುದ್ಧ ನಗರ, ಅಮೀರ್ ಅಹ್ಮದ್ ಸರ್ಕಲ್, ಆರ್.ಎಂ.ಎಲ್ ನಗರ, ಭಾರತಿಕಾಲೋನಿ, ದುರ್ಗಿಗುಡಿ, ಸವಾರ್ ಲೈನ್ ರಸ್ತೆ, ಪಂಚವಟಿ ಕಾಲೋನಿ, ಮಂಜುನಾಥ ಬಡಾವಣೆ, ಖಾಜಿ ನಗರ, ಟಿಪ್ಪು ನಗರ, ಗಾರ್ಡನ್ ಏರಿಯಾ, ನೆಹರೂ ರಸ್ತೆ, ಮಿಳಘಟ್ಟ ಕರೆಟ್ ಕಟ್ ಆಗಲಿದೆ.

ಆನಂದ ರಾವ್ ಬಡಾವಣೆ, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‍ಮಿಲ್, ಬೆನಕೇಶ್ವರ ರೈಸ್‍ಮಿಲ್, ಗಾಂಧಿ ಬಜಾರ್, ಕುಂಬಾರ್ ಗುಂಡಿ, ಬಿ.ಬಿ ರಸ್ತೆ, ಕೆ.ಆರ್ ಪುರಂ, ಸೀಗೆಹಟ್ಟಿ, ಮುರಾದ್ ನಗರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಇಮಾಮ್ ಬಡಾ, ಟಿ.ಎಸ್.ಆರ್ ರಸ್ತೆ, ರವಿವರ್ಮ ಬೀದಿ, ಮಾಕಮ್ಮನ ಕೇರಿ, ಆಜಾದ್ ನಗರ, ಲಾಲ್ ಬಂದರ್ ಕೇರಿ, ಇಲಿಯಾಜ್ ನಗರ 1ನೇ ಕ್ರಾಸ್ ನಿಂದ 14ನೇ ಕ್ರಾಸ್, 100 ಅಡಿ ರಸ್ತೆ, ಫಾರೂಕ್ಯ ಶಾದಿಮಹಲ್ ಪವರ್ ಇರೋದಿಲ್ಲ.

ಇಲಿಯಾಜ್ ನಗರ ಮಂಡಕ್ಕಿ ಭಟ್ಟಿ, ಟಿಪ್ಪು ನಗರ, ಖಾಜಿ ನಗರ 80 ಅಡಿ ರಸ್ತೆ, ಕಾಮತ್ ಲೇಔಟ್, ಅಣ್ಣಾನಗರ ಹಾಗೂ ಸುತ್ತಮುತ್ತಲಿನ ಪ್ರದೇಸಗಳು. ಎಫ್-5 ಗಾಜನೂರು ಗ್ರಾಮಾಂತರ ಪ್ರದೇಶ, ಎಫ್-8 ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಎಫ್-18 ಹೊಸಳ್ಳಿ, ಎಫ್-06 ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಎಫ್-17 ಐಹೊಳೆ, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್ ಹಾಗೂ ಶರಾವತಿ ನಗರ, ಶಾರದಾ ಕಾಲೋನಿ ಮತ್ತು ಸುತ್ತಮುತ್ತಲಿನ ಐಪಿ ಲಿಮಿಟ್‍ನ ಪ್ರದೇಶಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶದ ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಅಗಸವಳ್ಳಿ, ಹೊಸೂರು, ಮತ್ತೂರು, ಲಕ್ಷ್ಮೀಪುರ, ಹೊನ್ನಾಪುರ, ಈಚಲವಾಡಿ, ಹಾಯ್‍ಹೊಳೆ, ಪುರದಾಳ್, ಬೆಳ್ಳೂರು, ಬಸವಾಪುರ, ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

‘ರಾಕೇಶ್ ಶೆಟ್ಟಿ’ ವಿರುದ್ಧ ‘ರೌಡಿ ಶೀಟರ್’ ಓಪನ್ ಮಾಡಿ: ‘ಗಿರೀಶ್ ಮಟ್ಟೆಣ್ಣವರ’ ಆಗ್ರಹ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ, ರಾಜೀನಾಮೆ ನೀಡುವವರೆಗೂ ಹೋರಾಟ: ಆರ್‌.ಅಶೋಕ್

Share.
Exit mobile version