ಶಿವಮೊಗ್ಗ: ಕುವೆಂಪು ವಿವಿಯ ನೂತನ ‘ಕುಲಪತಿ ಪ್ರೊ.ಶರತ್ ಅನಂತಮೂರ್ತಿ’ ಅಧಿಕಾರ ಸ್ವೀಕಾರ

ಶಿವಮೊಗ್ಗ: ಕುವೆಂಪು ವಿವಿಯ ನೂತನ ಕುಲಪತಿಯಾಗಿ ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಭೌತಶಾಸ್ತ್ರ ಪ್ರಾಧ್ಯಾಪಕರಾಗಿದ್ದ ಡಾ. ಶರತ್ ಅನಂತಮೂರ್ತಿ ಅವರು ಗುರುವಾರ ಬೆಳಿಗ್ಗೆ ಅಧಿಕಾರ ಸ್ವೀಕಾರ ಮಾಡಿದ್ದಾರೆ. ರಾಜ್ಯಪಾಲ ಡಾ. ತಾವರ್ ಚಂದ್ ಗೆಹ್ಲೋಟ್ ಅವರು ಫೆಬ್ರವರಿ 05ರಂದು ಡಾ. ಶರತ್ ಅವರನ್ನು ಪೂರ್ಣಾವಧಿ ಕುಲಪತಿಯಾಗಿ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದ್ದರು. ಪ್ರೊ. ಶರತ್ ಅನಂತಮೂರ್ತಿ ಕರ್ನಾಟಕದ ಖ್ಯಾತ ಸಾಹಿತಿ ಹಾಗೂ ಜ್ಞಾನಪೀಠ ಪುರಸ್ಕೃತ ಡಾ. ಯು ಆರ್ ಅನಂತಮೂರ್ತಿ ಅವರ ಪುತ್ರರಾಗಿದ್ದಾರೆ. ಇವರು ಅಮೆರಿಕಾದ ಪ್ರತಿಷ್ಠಿತ ಅಯೋವಾ ಸ್ಟೇಟ್ ವಿಶ್ವವಿದ್ಯಾಲಯದಿಂದ … Continue reading ಶಿವಮೊಗ್ಗ: ಕುವೆಂಪು ವಿವಿಯ ನೂತನ ‘ಕುಲಪತಿ ಪ್ರೊ.ಶರತ್ ಅನಂತಮೂರ್ತಿ’ ಅಧಿಕಾರ ಸ್ವೀಕಾರ