ಶಿವಮೊಗ್ಗ: ಜಿಲ್ಲೆಯ ಸಾಗರದ ದೇಶಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಶ್ರೀಧರ್ ಮೂರ್ತಿ ಅವರು ಹೃದಯಾಘಾತದಿಂದ ಇಂದು ದಿಢೀರ್ ಸಾವನ್ನಪ್ಪಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ದೇಶಿ ಫೌಂಡೇಶನ್ ಸಂಸ್ಥೆ ನಿರ್ಮಿಸಿ, ಸಾಮಾಜಿಕ ಹೋರಾಟದಲ್ಲಿ ತೊಡಗಿದ್ದವರು ಶ್ರೀಧರ್ ಮೂರ್ತಿ. ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆಗೊಂಡ ಬಳಿಕ ಬಿಜೆಪಿ ಪಕ್ಷ ಸೇರಿ ತಮ್ಮ ರಾಜಕೀಯ, ಸಾಮಾಜಿಕ ಕೆಲಸ ಮುಂದುವರೆಸಿದ್ದರು.
ಇಂದು ಬೆಳಗ್ಗೆ ಮಕ್ಕಳನ್ನು ಶಾಲೆಗೆ ಬಿಟ್ಟು, ಮನೆಗೆ ವಾಪಾಸ್ ಆದ ವೇಳೆ ಗೇಟಿನ ಮುಂಭಾಗದಲ್ಲಿ ದಿಢೀರ್ ಕುಸಿದು ಬಿದ್ದಿದ್ದಾರೆ. ಅವರನ್ನು ಕೂಡಲೇ ಸಾಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಪರೀಕ್ಷೆಗೆ ಒಳಪಡಿಸಿದಂತ ವೈದ್ಯರು ಶ್ರೀಧರ್ ಮೂರ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.
ಇದೀಗ ಸಾಗರದಲ್ಲಿ ಸಾಮಾಜಿಕ ಹೋರಾಟ ಮಾಡುತ್ತಾ ಗುರುತಿಸಿಕೊಂಡಿದ್ದ ದೇಶೀ ಬ್ರಿಗೇಡ್, ದೇಶಿ ಫೌಂಡೇಶನ್ ಸಂಸ್ಥಾಪಕ ಶ್ರೀಧರ್ ಮೂರ್ತಿ ಇನ್ನಿಲ್ಲವಾಗಿದ್ದಾರೆ.