Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ವಿದ್ಯಾರ್ಥಿಗಳ ಆತ್ಮಹತ್ಯೆಗಳು ಸಾಂಸ್ಥಿಕ ವೈಫಲ್ಯದ ಸಂಕೇತ: ಸುಪ್ರೀಂ ಕೋರ್ಟ್ ಸಮಿತಿಯ ಗಂಭೀರ ಅಭಿಪ್ರಾಯ!

SHOCKING : ಮನೆಯ ಮೇಲಿನ ನೀರಿನ ಟ್ಯಾಂಕ್‌ ನಲ್ಲಿ 27 ಹಾವಿನ ಮರಿಗಳು ಪತ್ತೆ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಆಧುನಿಕ ಸಿನಿಮಾಗಳಲ್ಲಿ ಮಾದರಿ ನಾಯಕರಿಲ್ಲ: ಪ್ರೊ.ಗೋಪಿನಾಥ್
KARNATAKA

ಶಿವಮೊಗ್ಗ: ಆಧುನಿಕ ಸಿನಿಮಾಗಳಲ್ಲಿ ಮಾದರಿ ನಾಯಕರಿಲ್ಲ: ಪ್ರೊ.ಗೋಪಿನಾಥ್

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಸಮಾಜಕ್ಕೆ ಮಾದರಿಯಾಗಬಲ್ಲ ಪಾತ್ರಗಳ ಕೊರತೆಯೇ ಆಧುನಿಕ ಸಿನಿಮಾಗಳ ಪ್ರಮುಖ ಸಮಸ್ಯೆಯಾಗಿದೆ ಎಂದು ಕುವೆಂಪು ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ ಎಸ್.ಎಂ.ಗೋಪಿನಾಥ್ ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು 15ನೇ ಸಹ್ಯಾದ್ರಿ ಚಲನಚಿತ್ರೋತ್ಸವವನ್ನು “ನಿರಾಶ್ರಿತರ ಬಿಕ್ಕಟ್ಟು” ವಿಷಯ ಕುರಿತು ಸೆಪ್ಟೆಂಬರ್ 17-21ರ ವರೆಗೆ ವಿವಿಯ ಬಸವ ಸಭಾ ಭವನದಲ್ಲಿ ಆಯೋಜಿಸಿದ್ದು, ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಾಯಕನೇ ಖಳನಾಯಕ ಆಗಿರುವ, ಅತೀ ಹಿಂಸೆ, ಕೊಳ್ಳೆ ಹೊಡೆಯುವಿಕೆ ಅಂತಹ ಪಾತ್ರಗಳನ್ನು, ಸಿನಿಮಾಗಳನ್ನು ನಾವಿಂದು ಕಾಣುತ್ತಿದ್ದೇವೆ. ಪ್ಯಾನ್ ಇಂಡಿಯಾ ಸಿನಿಮಾಗಳು ಎಂದು ಹೇಳಿಕೊಂಡು ಬರುತ್ತಿರುವ ಎಲ್ಲವುಗಳಲ್ಲಿಯೂ ಇದೆ ಕಥಾನಕವಿದೆ. ಯುವಜನರು ಇವುಗಳನ್ನು ಸ್ಫೂರ್ತಿಯಾಗಿ ತೆಗೆದುಕೊಳ್ಳಬೇಕೆ, ಮಾದರಿ ಎಂದುಕೊಳ್ಳಬೇಕೆ ಎಂದು ಕಳವಳ ವ್ಯಕ್ತಪಡಿಸಿದರು.

ಶಿವಮೊಗ್ಗ ಚಿತ್ರ ಸಮಾಜ ಸಿನಿಮೊಗೆಯ ಸಂಚಾಲಕ ಮತ್ತು ಪತ್ರಕರ್ತ ವೈದ್ಯನಾಥ ಹೆಚ್ ಯು ಅವರು ಚಿತ್ರೋತ್ಸವಉದ್ಘಾಟಿಸಿ ಮಾತನಾಡುತ್ತ, ಇಂದಿನ ಸಿನಿಮಾಗಳಲ್ಲಿ ನಾಯಕ – ನಾಯಕಿಯರ ವಿಜೃಂಭಣೆ ಅಧಿಕಗೊಂಡು ಕಥೆ ಗೌಣವಾಗುತ್ತಿದೆ. ಉತ್ತಮ ಬದುಕಿಗೆ ಬೇಕಾದ ಆದರ್ಶಗಳನ್ನು ಬದಿಗೆ ಸರಿಸಲಾಗುತ್ತಿದೆ. ಸಿನಿಮಾ ರಂಗವು ಉದ್ಯಮ ಆದ ನಂತರ ಈ ಬಿಕ್ಕಟ್ಟುಗಳು ಹೆಚ್ಚಾಗಿದ್ದು, ಸಾಮಾಜಿಕ ಸಂದೇಶ – ಕಾಳಜಿಗಿಂತ, ಲಾಭದ ಉದ್ದೇಶಗಳು ಮುಖ್ಯವಾಗಿರುವುದು ಇದಕ್ಕೆ ಕಾರಣ ಎಂದರು.

ಸಿನಿಮಾವು ಮನರಂಜನೆಯ ಸರಕು ಮಾತ್ರವಲ್ಲ. ಅದು ಸಾಮಾಜಿಕ – ಸಾಂಸ್ಕೃತಿಕ ಬದುಕನ್ನು ದಾಖಲಿಸುವ ಮಾಧ್ಯಮ ರೂಪ. ಅದನ್ನು ಕೇವಲ ಮೋಜಿಗಾಗಿ ನೋಡದೆ, ಅಧ್ಯಯನ ದೃಷ್ಟಿಯಿಂದ ಕಾಣಬೇಕು. ಆಚರಣೆ ತೋರಿಕೆಗಿಂತ, ಪಾತ್ರಗಳ ಅನುಭಾವ, ಬದುಕಿನ ಆಳ, ತುಮುಲಗಳನ್ನು ದಾಟಿಸಿಕೊಳ್ಳುವ ಪ್ರಯತ್ನದಲ್ಲಿ ಸಿನಿಮಾ ವೀಕ್ಷಣೆ ಮಾಡಿ ಎಂದು ಸಲಹೆಯಿತ್ತರು.

ಉದ್ಘಾಟನಾ ಸಮಾರಂಭದಲ್ಲಿ ವಿಭಾಗದ ಅಧ್ಯಕ್ಷ ಪ್ರೊ. ಸತ್ಯಪ್ರಕಾಶ್ ಎಂ ಆರ್, ಅಧ್ಯಾಪಕರಾದ ಪ್ರೊ. ವರ್ಗೀಸ್, ಪ್ರೊ. ಸತೀಶ್ ಕುಮಾರ್ ಉಪಸ್ಥಿತರಿದ್ದರು. ಸಿನಿಮೋತ್ಸವದಲ್ಲಿ ವಿವಿಧ ವಿಭಾಗಗಳ ನೂರಕ್ಕೂ ಅಧಿಕ ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು, ಅಧ್ಯಾಪಕರು, ಸಿಬ್ಬಂದಿ ವರ್ಗ ಹಾಜರಿದ್ದರು.

ಸಿನಿಮೋತ್ಸವದ ಬಗ್ಗೆ

ಕುವೆಂಪು ವಿವಿಯ ಪತ್ರಿಕೋದ್ಯಮ ವಿಭಾಗ ಪ್ರತಿ ವರ್ಷವೂ ಸಿನಿಮೋತ್ಸವವನ್ನು ಆಚರಿಸುತ್ತಿದ್ದು ಈ ಬಾರಿ 15ನೇ ಸಹ್ಯಾದ್ರಿ ಸಿನಿಮೋತ್ಸವವನ್ನು”ನಿರಾಶ್ರಿತರ ಬಿಕ್ಕಟ್ಟು” ವಿಷಯ ಕುರಿತು ಇಂದಿನಿಂದ 5 ದಿನಗಳ ಕಾಲ ವಿವಿಯ ಬಸವ ಸಭಾ ಭವನದಲ್ಲಿ ಆಯೋಜಿಸಿದೆ. ಪ್ರತಿದಿನ ಮಧ್ಯಾಹ್ನ 3.45 ರಿಂದ ಸಿನಿಮಾ ಪ್ರದರ್ಶನ ಮಾಡಲಾಗುತ್ತಿದೆ.

ಸೆಪ್ಟೆಂಬರ್ 17ರಿಂದ 21ರ ವರೆಗೆ ನಡೆಯುವ ಚಲನಚಿತ್ರೋತ್ಸವದಲ್ಲಿ ಈ ಬಾರಿ ಇರಾನಿಯನ್ ಸಿನಿಮಾ “ದ ಸೈಕ್ಲಿಸ್ಟ್”, ಆಫ್ಘನ್ ನಿರಾಶ್ರಿತರ ಚಿತ್ರ “ಕೈಟ್ ರನ್ನರ್”, ಇಂಗ್ಲಿಷ್ ಸಿನಿಮಾ “ನೇಮ್ ಸೇಕ್”, ಬೆಂಗಾಳಿ ಸಿನಿಮಾ “ಸುಬರ್ಣರೇಖ”, ಸಿರಿಯನ್ ನಿರಾಶ್ರಿತರ ಚಿತ್ರ “ದಿ ಸ್ವಿಮ್ಮರ್ಸ್” ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದೆ.

ಈ ಹಿಂದಿನ ವರ್ಷಗಳಲ್ಲಿ ಚಾರ್ಲಿ ಚಾಪ್ಲಿನ್, ನಾಗರೀಕ ಹಕ್ಕುಗಳು, ಯುದ್ಧ, ಮುಗ್ಧಮಕ್ಕಳ ನೋಟ ಸೇರಿದಂತೆ ವಿವಿಧ ವಿಷಯಗಳ ಆಧಾರಿತ ಚಲನಚಿತ್ರಗಳನ್ನು ಪ್ರದರ್ಶಿಸಲಾಗಿದೆ. ವಿವಿಧ ಭಾಷೆಗಳ ಚಲನಚಿತ್ರಗಳನ್ನು ಪ್ರದರ್ಶಿಸುವ ಈ ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗ ಪಾಲ್ಗೊಳ್ಳುವರು.

ತಂದೆ ಇಲ್ಲದ ಮಕ್ಕಳಿಗೆ ಸಿಗಲಿದೆ ವರ್ಷಕ್ಕೆ 24,000: ಯಾರಿಗೆಲ್ಲ ಸಿಗಲಿದೆ? ಮಾನದಂಡಗಳೇನು? ಇಲ್ಲಿದೆ ಮಾಹಿತಿ

ಶಿವಪುರ ಸ್ಮಾರಕ ಪುನರುಜ್ಜೀವನಕ್ಕೆ 2 ಕೋಟಿ ರೂ. ಬಿಡುಗಡೆಗೆ ಸಿಎಂ ಆದೇಶ: ಶಾಸಕ ದಿನೇಶ್ ಗೂಳಿಗೌಡ ಅಭಿನಂದನೆ

BREAKING : ದೇಶಾದ್ಯಂತ ‘ಬುಲ್ಡೋಜರ್ ಕಾರ್ಯಚರಣೆ’ಗೆ ‘ಸುಪ್ರೀಂಕೋರ್ಟ್’ ತಡೆ

Share. Facebook Twitter LinkedIn WhatsApp Email

Related Posts

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ

2 Mins Read

Rent Agreement: ಬಾಡಿಗೆ ಒಪ್ಪಂದ ಕೇವಲ 11 ತಿಂಗಳಿಗೆ ಮಾತ್ರ ಏಕೆ? 12 ತಿಂಗಳು ಏಕಿಲ್ಲ? ಇಲ್ಲಿದೆ ಅಸಲಿ ರಹಸ್ಯ.!

2 Mins Read

ಚೆಕ್ ಬೌನ್ಸ್ ಆದರೆ ಜೈಲು ಗ್ಯಾರಂಟಿಯೇ? ಕಾನೂನು ಏನು ಹೇಳುತ್ತದೆ? ಇಂದೇ ತಿಳಿದುಕೊಳ್ಳಿ!

2 Mins Read
Recent News

​ವಿದ್ಯಾರ್ಥಿಗಳ ಆತ್ಮಹತ್ಯೆಗಳು ಸಾಂಸ್ಥಿಕ ವೈಫಲ್ಯದ ಸಂಕೇತ: ಸುಪ್ರೀಂ ಕೋರ್ಟ್ ಸಮಿತಿಯ ಗಂಭೀರ ಅಭಿಪ್ರಾಯ!

SHOCKING : ಮನೆಯ ಮೇಲಿನ ನೀರಿನ ಟ್ಯಾಂಕ್‌ ನಲ್ಲಿ 27 ಹಾವಿನ ಮರಿಗಳು ಪತ್ತೆ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ

​ಲಂಡನ್ ನಲ್ಲಿ 36ನೇ ಮಹಡಿಯಿಂದ ಬಿದ್ದು ಭಾರತೀಯ ಮೂಲದ ದಂಪತಿ ಮತ್ತು 9 ವರ್ಷದ ಬಾಲಕ ಸಾವು!

State News
KARNATAKA

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದ ನೂತನ ಸಾರಿಗೆ ಸಚಿವರಾಗಿ ಬೈರತಿ ಸುರೇಶ್ ಅವರು ಸೋಮವಾರ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.…

Rent Agreement: ಬಾಡಿಗೆ ಒಪ್ಪಂದ ಕೇವಲ 11 ತಿಂಗಳಿಗೆ ಮಾತ್ರ ಏಕೆ? 12 ತಿಂಗಳು ಏಕಿಲ್ಲ? ಇಲ್ಲಿದೆ ಅಸಲಿ ರಹಸ್ಯ.!

ಚೆಕ್ ಬೌನ್ಸ್ ಆದರೆ ಜೈಲು ಗ್ಯಾರಂಟಿಯೇ? ಕಾನೂನು ಏನು ಹೇಳುತ್ತದೆ? ಇಂದೇ ತಿಳಿದುಕೊಳ್ಳಿ!

Rain Alert : ರಾಜ್ಯಾದ್ಯಂತ ಮುಂದಿನ 3 ದಿನ `ನೈಋತ್ಯ ಮುಂಗಾರು’ ಆರ್ಭಟ: ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.