Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಟರ್ಕಿಯ ಇನೋನು ವಿಶ್ವವಿದ್ಯಾಲಯದೊಂದಿಗಿನ ಒಪ್ಪಂದ ಸ್ಥಗಿತಗೊಳಿಸಿದ ಜೆಎನ್‌ಯು

14/05/2025 6:55 PM

ಪಿಎಸ್‌ಐ ನೇಮಕಾತಿಗೆ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನ

14/05/2025 6:48 PM

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಾತಿಗೆ ಅರ್ಜಿ ಆಹ್ವಾನ

14/05/2025 6:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಭದ್ರಾ ಜಲಾಯಶದಿಂದ ಜ.10ರಿಂದು ಎಡದಂಡೆ, ಜ.20ರಿಂದ ಬಲದಂಡೆ ನಾಲೆಗೆ ನೀರು ಬಿಡುಗಡೆ
KARNATAKA

ಶಿವಮೊಗ್ಗ: ಭದ್ರಾ ಜಲಾಯಶದಿಂದ ಜ.10ರಿಂದು ಎಡದಂಡೆ, ಜ.20ರಿಂದ ಬಲದಂಡೆ ನಾಲೆಗೆ ನೀರು ಬಿಡುಗಡೆ

By kannadanewsnow0906/01/2024 4:31 PM

ಶಿವಮೊಗ್ಗ : ಭದ್ರಾ ಜಲಾಶಯದ ಎಡದಂಡ ನಾಲೆಗೆ ಜ.10 ರಿಂದ ಮತ್ತು ಬಲದಂಡ ನಾಲೆ ಜ.20 ರಿಂದ ನೀರು ಹರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು.

ಇಂದು ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಅಭಿವೃದ್ದಿ ಪ್ರಾಧಿಕಾರ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ 2023-24 ನೇ ಸಾಲಿನ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಅಧಿಕಾರಿಗಳು ಮತ್ತು ರೈತ ಮುಖಂಡರೊಂದಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಎಡದಂಡ ನಾಲೆಗೆ ಜ.10 ರಿಂದ ನೀರು ಹರಿಸಲಾಗುತ್ತಿದ್ದು, ಆನ್ ಮತ್ತು ಆಫ್ ಮಾದರಿ ಅನುಸರಿಸಲಾಗುವುದು. ಜ.10 ರಿಂದ 16 ದಿನ ಆನ್ ಮತ್ತು 15 ದಿನ ಆಫ್, ನಂತರ 17 ದಿನ ಆನ್, 15 ದಿನ ಆಫ್, 18 ದಿನ ಆನ್ 15 ದಿನ ಆಫ್ ಮತ್ತು 20 ದಿನ ಆನ್, 15 ದಿನ ಆಫ್ ಇರುತ್ತದೆ.

ಬಲದಂಡ ನಾಲೆಗೆ ಜ.20 ರಿಂದ ನೀರು ಹರಿಸಲಾಗುತ್ತಿದ್ದು ಮೊದಲಿಗೆ 12 ದಿನ ಆನ್, 20 ದಿನ ಆಫ್, 12 ದಿನ ಆನ್ 20 ದಿನ ಆಫ್, 14 ದಿನ ಆನ್ 20 ದಿನ ಆಫ್ ಮತ್ತು 15 ದಿನ ಆನ್ 20 ದಿನ ಆಫ್ ಇರುತ್ತದೆ ಎಂದರು.

ಪ್ರಸಕ್ತ ಸಾಲಿನಲ್ಲಿ ಸಾಕಷ್ಟು ಪ್ರಮಾಣದ ಮಳೆಯಾಗದ ಕಾರಣ ಭದ್ರಾ ಜಲಾಶಯದಲ್ಲಿ ನೀರಿನ ಕೊರತೆಯಾಗಿದೆ. ಜಲಾಶಯದ ಗರಿಷ್ಟ ನೀರಿನ ಸಂಗ್ರಹಣಾ ಮಟ್ಟ 186 ಅಡಿ, ಪ್ರಸ್ತುತ 35.370 ಅಡಿ ಸಂಗ್ರಹವಿದೆ. ಪ್ರಸ್ತತ ಜಲಾಶಯದಲ್ಲಿ ನೀರಾವರಿ ಬಳಕೆಗೆ ಬರುವ 12.50 ಟಿಎಂಸಿ ಪ್ರಮಾಣದ ನೀರನ್ನು ಬಲದಂಡ ನಾಲೆಗೆ 2650 ಕ್ಯೂಸೆಕ್ಸ್ ಮತ್ತು ಎಡದಂಡ ನಾಲೆಗೆ 380 ಕ್ಯೂಸೆಕ್ಸ್ ಮತ್ತು ಗೊಂದಿ ನಾಲೆ ಸೇರಿದಂತೆ ಪ್ರತಿದಿನ 0.27 ಟಿಎಂಸಿ ನೀರು ಹರಿಸಿದಲ್ಲಿ ಒಟ್ಟು 47 ದಿನಗಳಿಗೆ ನೀರು ಹರಿಸಬಹುದಾಗಿದೆ.

ಪ್ರಸ್ತುತ ಚಳಿ ಇದ್ದು ವಾತಾವರಣ ತಂಪಿದೆ. ಮಾರ್ಚ್ ನಂತರ ಬೇಸಿಗೆ ಹೆಚ್ಚಲಿದ್ದು, ಕುಡಿಯುವ ನೀರು ಮತ್ತು ತೋಟಗಾರಿಕೆ ಬೆಳೆ ಉಳಿಸಿಕೊಳ್ಳಲು ಕಷ್ಟವಾಗಬಹುದು. ಆದ್ದರಿಂದ ಕಟ್ಟಕಡೆಯ ಅಚ್ಚುಕಟ್ಟುದಾರರ ಅನುಕೂಲವನ್ನೂ ಪರಿಗಣಿಸಿ ಈಗ ಸ್ವಲ್ಪ ತಡವಾಗಿ ನೀರು ಹರಿಸುವ ಬಗ್ಗೆ ಅಧಿಕಾರಿಗಳು, ರೈತರು ತಮ್ಮ ಸಲಹೆ-ಸೂಚನೆಗಳನ್ನು ನೀಡಬೇಕು. ಹಾಗೂ ನೀರಿನ ಅಭಾವವಿರುವ ಕಾರಣ ಪ್ರಸ್ತುತ ರೈತರು ಭತ್ತ ಬೆಳೆದಿದ್ದರೆ ಒಳಿತು ಎಂದರು.

ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್, ದಾವಣಗೆರೆ ಜಿಲ್ಲಾಧಿಕಾರಿ ವೆಂಕಟೇಶ್, ರಾಜ್ಯ ರೈತ ಸಂಘದ ಅಧ್ಯಕ್ಷ ಹೆಚ್.ಆರ್.ಬಸವರಾಜಪ್ಪ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಶಾರದಾ ಪೂರ್ಯಾ ನಾಯ್ಕ, ಲತಾ ಮಲ್ಲಿಕಾರ್ಜುನ್, ಬಿ.ಕೆ.ಸಂಗಮೇಶ್, ಡಿ.ಜೆ. ಶಾಂತನಗೌಡ, ಬಸವರಾಜಪ್ಪ, ಶ್ರೀನಿವಾಸ್, ಬಸವರಾಜು ಶಿವಗಂಗ, ಕಾಡಾ ಮುಖ್ಯ ಇಂಜಿನಿಯರ್ ಶಿವಾನಂದ ಬಣಕಾರ್, ಆಡಳಿತಾಧಿಕಾರಿ ಮುರಳೀಧರ್, ಅಭಿಯಂತರರು, ಅಧಿಕಾರಿಗಳು, ರೈತ ಮುಖಂಡರು ಹಾಜರಿದ್ದರು.

BREAKING: ಇಸ್ರೋದ ಮೊದಲ ಸೂರ್ಯ ಮಿಷನ್ ಯಶಸ್ವಿ: ಅಂತಿಮ ಕಕ್ಷೆಗೆ ಆದಿತ್ಯ ಎಲ್1 ಸೇರ್ಪಡೆ | Aditya L-1

BREAKING: ರಾಜ್ಯದ ‘ಅತಿಥಿ ಉಪನ್ಯಾಸಕ’ರ ಗೌರವಧನ ‘5,000ದಿಂದ 8,000’ ಹೆಚ್ಚಳ – ಸಿಎಂ ಸಿದ್ಧರಾಮಯ್ಯ ಘೋಷಣೆ

Share. Facebook Twitter LinkedIn WhatsApp Email

Related Posts

ಪಿಎಸ್‌ಐ ನೇಮಕಾತಿಗೆ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನ

14/05/2025 6:48 PM1 Min Read

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಾತಿಗೆ ಅರ್ಜಿ ಆಹ್ವಾನ

14/05/2025 6:47 PM1 Min Read

BIG NEWS: ಇನ್ಮುಂದೆ ಸರ್ಕಾರದಿಂದಲೇ 108 ಆಂಬುಲೆನ್ಸ್ ಸೇವೆ: ಸಚಿವ ದಿನೇಶ್ ಗುಂಡೂರಾವ್

14/05/2025 6:42 PM1 Min Read
Recent News

ಟರ್ಕಿಯ ಇನೋನು ವಿಶ್ವವಿದ್ಯಾಲಯದೊಂದಿಗಿನ ಒಪ್ಪಂದ ಸ್ಥಗಿತಗೊಳಿಸಿದ ಜೆಎನ್‌ಯು

14/05/2025 6:55 PM

ಪಿಎಸ್‌ಐ ನೇಮಕಾತಿಗೆ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನ

14/05/2025 6:48 PM

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಾತಿಗೆ ಅರ್ಜಿ ಆಹ್ವಾನ

14/05/2025 6:47 PM

BIG NEWS: ಇನ್ಮುಂದೆ ಸರ್ಕಾರದಿಂದಲೇ 108 ಆಂಬುಲೆನ್ಸ್ ಸೇವೆ: ಸಚಿವ ದಿನೇಶ್ ಗುಂಡೂರಾವ್

14/05/2025 6:42 PM
State News
KARNATAKA

ಪಿಎಸ್‌ಐ ನೇಮಕಾತಿಗೆ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನ

By kannadanewsnow0914/05/2025 6:48 PM KARNATAKA 1 Min Read

ಶಿವಮೊಗ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ಮಂಜೂರಾದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ ರಾಜ್ಯದ…

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಾತಿಗೆ ಅರ್ಜಿ ಆಹ್ವಾನ

14/05/2025 6:47 PM

BIG NEWS: ಇನ್ಮುಂದೆ ಸರ್ಕಾರದಿಂದಲೇ 108 ಆಂಬುಲೆನ್ಸ್ ಸೇವೆ: ಸಚಿವ ದಿನೇಶ್ ಗುಂಡೂರಾವ್

14/05/2025 6:42 PM

BREAKING : ಬೆಳಗಾವಿ : ಕಳ್ಳತನಕ್ಕೆ ಬಂದಿದ್ದಾನೆಂದು, 16 ವರ್ಷದ ಬಾಲಕನನ್ನು ಹತ್ಯೆಗೈದು, ಆಸಿಡ್ ಹಾಕಿದ ಪಾಪಿಗಳು

14/05/2025 6:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.