Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಸಮುದಾಯಗಳ ಜೊತೆ ಆಯೋಗ ಸದಾ ಇರುತ್ತೆ: ಅಧ್ಯಕ್ಷ ಡಾ.ಎಲ್ ಮೂರ್ತಿ

29/10/2025 8:30 PM

KUWJ ರಾಜ್ಯಾಧ್ಯಕ್ಷರಾಗಿ ‘ಶಿವಾನಂದ ತಗಡೂರು’ ಪುನರಾಯ್ಕೆ

29/10/2025 8:25 PM

M.Sc ನರ್ಸಿಂಗ್ ಸೇರಿ ಹಲವು ಕೋರ್ಸುಗಳಿಗೆ 2ನೇ ಸುತ್ತಿನ ಸೀಟು ಹಂಚಿಕೆ: ಇಚ್ಛೆ/ಆಯ್ಕೆ ಬದಲಿಸಲು ಅ.30 ಲಾಸ್ಟ್ ಡೇಟ್

29/10/2025 8:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » KUWJ ರಾಜ್ಯಾಧ್ಯಕ್ಷರಾಗಿ ‘ಶಿವಾನಂದ ತಗಡೂರು’ ಪುನರಾಯ್ಕೆ
KARNATAKA

KUWJ ರಾಜ್ಯಾಧ್ಯಕ್ಷರಾಗಿ ‘ಶಿವಾನಂದ ತಗಡೂರು’ ಪುನರಾಯ್ಕೆ

By kannadanewsnow0929/10/2025 8:25 PM

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (Karnataka Union Of Working Journalist-KUWJ) ರಾಜ್ಯ ಅಧ್ಯಕ್ಷರಾಗಿ ಶಿವಾನಂದ ತಗಡೂರು ಅವರು ಪುನಾರಾಯ್ಕೆಯಾಗಿದ್ದಾರೆ.

2025-28ನೇ ಸಾಲಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಒಂದೇ ನಾಮಪತ್ರ ಬಂದಿದ್ದರಿಂದ ಅವಿರೋಧ ಆಯ್ಕೆಯಾದಂತಾಗಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಕುಗ್ರಾಮ ತಗಡೂರು ಗ್ರಾಮದ ರೈತ ಕುಟುಂಬದ ಶ್ರೀಮತಿ ಕಮಲಮ್ಮ ಮತ್ತು ವೀರೇಗೌಡ ದಂಪತಿಗಳ ಪುತ್ರನಾಗಿ ಜನಿಸಿದ ಟಿ.ವಿ.ಶಿವಾನಂದ (ಆನಂದ) ಅವರು ತೊಂಬತ್ತರ ದಶಕದಲ್ಲಿ ಪತ್ರಿಕೋದ್ಯಮ ಪ್ರವೇಶಿಸಿದವರು.

ಬಾಗೂರು-ನವಿಲೆ ಸುರಂಗ ಸಂತ್ರಸ್ತರ ಪರವಾಗಿ ಹೋರಾಟ ಸಂಘಟಿಸಿದ್ದ ಅವರು, ಹಾಸನ ಜಿಲ್ಲಾ ನೀರಾವರಿ ಹೋರಾಟ ಸಮಿತಿಗಳ ಒಕ್ಕೂಟ, ರೈತ ಹಿತ ರಕ್ಷಣಾ ಸಮಿತಿ, ಹಾಸನ ಜಿಲ್ಲಾ ಸಾಕ್ಷರತಾ ಆಂದೋಲನ ಸಮಿತಿ ಸಂಚಾಲಕರಾಗಿ ದುಡಿದವರು. ಹಲವು ಜನಪರ ಚಳವಳಿಯಲ್ಲಿ ಮುಂದಾಳಾಗಿ ಗುರುತಿಸಿಕೊಳ್ಳುತ್ತಲೇ ಪತ್ರಕರ್ತರಾಗಿ ಮಾಗಿದವರು.

2004ರಲ್ಲಿ ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಅಧ್ಯಕ್ಷರಾಗಿದ್ದಾಗ ಸುಸಜ್ಜಿತ ಪತ್ರಕರ್ತರ ಭವನವನ್ನು ನಿರ್ಮಾಣ ಮಾಡಿದ್ದು ಅವರ ಕ್ರೀಯಾಶೀಲತೆಗೆ ಸಾಕ್ಷಿ. 2018ರಲ್ಲಿ ಉಪಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಕೆಯುಡಬ್ಲೂೃಜೆಗೆ ಹೆಜ್ಜೆ ಇಟ್ಟ ತಗಡೂರು, ಅಧ್ಯಕ್ಷರೊಬ್ಬರ ರಾಜೀನಾಮೆ ತರುವಾಯ ಆ ಸಂಘಟನೆಯ ಚುಕ್ಕಾಣಿ ಹಿಡಿದವರು.
ಕೋವಿಡ್ ಸಂದರ್ಭದಲ್ಲಿ ಮೃತಪಟ್ಟ ಪತ್ರಕರ್ತರುಗಳ ಕುಟುಂಬಗಳಿಗೆ ತಲಾ 5 ಲಕ್ಷ ರೂ ನೆರವು ಕೊಡಿಸಿದ ಅವರ ಹೋರಾಟದ ಪರಿಯನ್ನು ಯಾರೂ ಮರೆಯುವಂತಿಲ್ಲ. ಬಹುರೂಪಿ ಪ್ರಕಾಶನ ಪ್ರಕಟಿಸಿರುವ ಕೋವಿಡ್ ಕಥೆಗಳು ಪುಸ್ತಕದಲ್ಲಿ ಪ್ರತಿ ಘಟನೆಗಳನ್ನು ತಗಡೂರು ದಾಖಲಿಸಿದ್ದಾರೆ.

75ನೇ ವರ್ಷದ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಹಿರಿಯ ಪತ್ರಕರ್ತರ ಮನೆಯಂಗಳಕ್ಕೆ ಕೆಯುಡಬ್ಲೂೃಜೆ ಎನ್ನುವ ಹೊಸ ಕಲ್ಪನೆಯೊಂದಿಗೆ ಹಿರಿಯ ಪತ್ರಕರ್ತರನ್ನು ಅವರ ಮನೆ ಅಂಗಳದಲ್ಲಿಯೇ ಗೌರವಿಸಿ, ಅವರ ಅನುಭವಗಳನ್ನು ದಾಖಲೀಕರಣ ಮಾಡಿದ್ದ್ದು ವಿಶೇಷ. ಅಷ್ಟೇ ಅಲ್ಲ, ಈ ಬಗ್ಗೆ ಅಮೃತ ಬೀಜ ಎನ್ನುವ ಪುಸ್ತಕವನ್ನು ಹೊರ ತಂದಿದ್ದಾರೆ.
ರಾಜ್ಯ ಪತ್ರಕರ್ತರ ಸಮ್ಮೇಳನಗಳಿಗೆ ಹೊಸ ರೂಪ ನೀಡಿದ್ದಲ್ಲದೆ, ಪತ್ರಕರ್ತರ ಕ್ಷೇಮ ನಿಧಿಯನ್ನು ಒಂದು ಕೋಟಿಗೆ ಹೆಚ್ಚಿಸಿದ್ದು ಸಾಧನೆ. ಹತ್ತು ಹಲವು ಕಾರ್ಯಕ್ರಮದ ಮೂಲಕ ಕೆಯುಡಬ್ಲೂೃಜೆಗೆ ಹೊಸ ಆಯಾಮ ನೀಡಿದ ತಗಡೂರು ಅವರು ಸತತ ಎರಡು ಬಾರಿ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವುದು ಅವರ ಸಾಧನೆಗೆ ಹಿಡಿದ ಕನ್ನಡಿ ಮತ್ತು ಅವರ ಸೇವೆಗೆ ಸಂದ ಗೌರವ.

ಇನ್ನೆರಡು ಸ್ಥಾನಕ್ಕೆ ಅವಿರೋಧ:

ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿ, ಖಜಾಂಚಿ ಸೇರಿದಂತೆ ಒಟ್ಟು ಒಂಬತ್ತು ಸ್ಥಾನಗಳಲ್ಲಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಜಿ.ಸಿ.ಲೋಕೇಶ್ ಮತ್ತು ಖಜಾಂಚಿ ಸ್ಥಾನಕ್ಕೆ ವಾಸುದೇವ ಹೊಳ್ಳ ಅವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಈ ಬಗ್ಗೆ ಅಧಿಕೃತ ಘೋಣೆಯಷ್ಟೇ ಬಾಕಿ ಇದೆ.

ಹೀಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ರಾಜ್ಯಾಧ್ಯಕ್ಷರಾಗಿ ಪುನರಾಯ್ಕೆಯಾದಂತ ಶಿವಾನಂದ ತಗಡೂರು ಅವರಿಗೆ ಕನ್ನಡ ನ್ಯೂಸ್ ನೌ ಸಂಸ್ಥೆಯಿಂದ ಅಭಿನಂದನೆ, ಶುಭಾಶಯವನ್ನು ತಿಳಿಸಿದೆ.

ವರದಿ; ವಸಂತ ಬಿ ಈಶ್ವರಗೆರೆ., ಸಂಪಾದಕರು

‘ರೈಲ್ವೆ ಪ್ರಯಾಣಿಕ’ರ ಗಮನಕ್ಕೆ: ಈ ಮಾರ್ಗದಲ್ಲಿ ‘ರೈಲುಗಳ ಸಂಚಾರ’ ಪುನರಾರಂಭ

‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ಯಿಂದಾಗಿ ಪರಿಸರ, ಜೀವ ವೈವಿಧ್ಯತೆ ನಾಶ: ರೈತ ಮುಖಂಡ ದಿನೇಶ್ ಶಿರವಾಳ

Share. Facebook Twitter LinkedIn WhatsApp Email

Related Posts

ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಸಮುದಾಯಗಳ ಜೊತೆ ಆಯೋಗ ಸದಾ ಇರುತ್ತೆ: ಅಧ್ಯಕ್ಷ ಡಾ.ಎಲ್ ಮೂರ್ತಿ

29/10/2025 8:30 PM3 Mins Read

M.Sc ನರ್ಸಿಂಗ್ ಸೇರಿ ಹಲವು ಕೋರ್ಸುಗಳಿಗೆ 2ನೇ ಸುತ್ತಿನ ಸೀಟು ಹಂಚಿಕೆ: ಇಚ್ಛೆ/ಆಯ್ಕೆ ಬದಲಿಸಲು ಅ.30 ಲಾಸ್ಟ್ ಡೇಟ್

29/10/2025 8:11 PM1 Min Read

‘ರೈಲ್ವೆ ಪ್ರಯಾಣಿಕ’ರ ಗಮನಕ್ಕೆ: ಈ ಮಾರ್ಗದಲ್ಲಿ ‘ರೈಲುಗಳ ಸಂಚಾರ’ ಪುನರಾರಂಭ

29/10/2025 7:54 PM2 Mins Read
Recent News

ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಸಮುದಾಯಗಳ ಜೊತೆ ಆಯೋಗ ಸದಾ ಇರುತ್ತೆ: ಅಧ್ಯಕ್ಷ ಡಾ.ಎಲ್ ಮೂರ್ತಿ

29/10/2025 8:30 PM

KUWJ ರಾಜ್ಯಾಧ್ಯಕ್ಷರಾಗಿ ‘ಶಿವಾನಂದ ತಗಡೂರು’ ಪುನರಾಯ್ಕೆ

29/10/2025 8:25 PM

M.Sc ನರ್ಸಿಂಗ್ ಸೇರಿ ಹಲವು ಕೋರ್ಸುಗಳಿಗೆ 2ನೇ ಸುತ್ತಿನ ಸೀಟು ಹಂಚಿಕೆ: ಇಚ್ಛೆ/ಆಯ್ಕೆ ಬದಲಿಸಲು ಅ.30 ಲಾಸ್ಟ್ ಡೇಟ್

29/10/2025 8:11 PM

‘ರೈಲ್ವೆ ಪ್ರಯಾಣಿಕ’ರ ಗಮನಕ್ಕೆ: ಈ ಮಾರ್ಗದಲ್ಲಿ ‘ರೈಲುಗಳ ಸಂಚಾರ’ ಪುನರಾರಂಭ

29/10/2025 7:54 PM
State News
KARNATAKA

ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಸಮುದಾಯಗಳ ಜೊತೆ ಆಯೋಗ ಸದಾ ಇರುತ್ತೆ: ಅಧ್ಯಕ್ಷ ಡಾ.ಎಲ್ ಮೂರ್ತಿ

By kannadanewsnow0929/10/2025 8:30 PM KARNATAKA 3 Mins Read

ಮಂಡ್ಯ : ಶೋಷಣೆಗೆ ಒಳಗಾದವರು ಯಾರೇ ಆಗಿರಲಿ ಆಯೋಗಕ್ಕೆ ಬಂದು ಪ್ರಕರಣ ದಾಖಲಿಸಬಹುದು ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ…

KUWJ ರಾಜ್ಯಾಧ್ಯಕ್ಷರಾಗಿ ‘ಶಿವಾನಂದ ತಗಡೂರು’ ಪುನರಾಯ್ಕೆ

29/10/2025 8:25 PM

M.Sc ನರ್ಸಿಂಗ್ ಸೇರಿ ಹಲವು ಕೋರ್ಸುಗಳಿಗೆ 2ನೇ ಸುತ್ತಿನ ಸೀಟು ಹಂಚಿಕೆ: ಇಚ್ಛೆ/ಆಯ್ಕೆ ಬದಲಿಸಲು ಅ.30 ಲಾಸ್ಟ್ ಡೇಟ್

29/10/2025 8:11 PM

‘ರೈಲ್ವೆ ಪ್ರಯಾಣಿಕ’ರ ಗಮನಕ್ಕೆ: ಈ ಮಾರ್ಗದಲ್ಲಿ ‘ರೈಲುಗಳ ಸಂಚಾರ’ ಪುನರಾರಂಭ

29/10/2025 7:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.