Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಭಾರತ-ಪಾಕ್ ಮಧ್ಯ ಉದ್ವಿಗ್ನ ಪರಿಸ್ಥಿತಿ : ‘IPL’ ಟೂರ್ನಿಯ ಮುಂದಿನ ಎಲ್ಲಾ ಪಂದ್ಯಗಳು ರದ್ದಾಗುವ ಸಾಧ್ಯತೆ!

09/05/2025 12:05 PM

ಭಾರತ-ಪಾಕಿಸ್ತಾನ ಉದ್ವಿಗ್ನತೆ : ಇಂಧನ ದಾಸ್ತಾನು ಸಾಕಷ್ಟಿದೆ: ಇಂಡಿಯನ್ ಆಯಿಲ್ | Indian oil

09/05/2025 11:57 AM

India -Pak war : ಭಾರತದೊಳಗೆ ನುಸುಳಲು ಯತ್ನ : ಜಮ್ಮು ಕಾಶ್ಮೀರದಲ್ಲಿ 7 ಉಗ್ರರನ್ನು ಹತ್ಯೆಗೈದ BSF

09/05/2025 11:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಜೆಪಿ ಸಂಸದರು, ಶಾಸಕರ ಮೇಲೆ ನಿರಂತರ FIR: ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಶೋಭಾ ಕರಂದ್ಲಾಜೆ ಕಿಡಿ
KARNATAKA

ಬಿಜೆಪಿ ಸಂಸದರು, ಶಾಸಕರ ಮೇಲೆ ನಿರಂತರ FIR: ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಶೋಭಾ ಕರಂದ್ಲಾಜೆ ಕಿಡಿ

By kannadanewsnow0919/09/2024 3:01 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಆಕ್ಷೇಪಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಮೇಲೆ ಹಿಟ್ಲರ್ ಆಗಿದ್ದಾರೆ. ಬಿಜೆಪಿ ಸಂಸದರು ಮತ್ತು ಶಾಸಕರ ಮೇಲೆ ನಿರಂತರವಾಗಿ ಎಫ್‍ಐಆರ್‍ಗಳು ದಾಖಲಾಗುತ್ತಿವೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ; ಕೇಂದ್ರದ ಸಚಿವರ ಮೇಲೆ ಎಫ್‍ಐಆರ್ ದಾಖಲಿಸಿದ್ದಾರೆ ಎಂದು ಟೀಕಿಸಿದರು.
ಬೆಂಗಳೂರಿನ ಸಂಸದ ತೇಜಸ್ವಿ ಸೂರ್ಯರ ಮೇಲೆ ಎಫ್‍ಐಆರ್ ದಾಖಲು ಮಾಡಿದ್ದಾರೆ. ಶಾಸಕರಾದ ಹರೀಶ್ ಪೂಂಜಾ, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ಭರತ್ ಶೆಟ್ಟಿ- ಹೀಗೆ ನಿರಂತರವಾಗಿ ಬಿಜೆಪಿ ನಾಯಕರು, ಕಾರ್ಯಕರ್ತರನ್ನು ಹತ್ತಿಕ್ಕುವ, ಅವರ ಧ್ವನಿ ಅಡಗಿಸುವ ಕೆಲಸವನ್ನು ಕಾಂಗ್ರೆಸ್ ಸರಕಾರದ ನೇತೃತ್ವದಲ್ಲಿ ಮಾಡಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಬಾಂಗ್ಲಾ ಮಾದರಿಯಲ್ಲಿ ರಾಜ್ಯಪಾಲರನ್ನು ಓಡಿಸುತ್ತೇವೆ ಎಂದು ಐವನ್ ಡಿಸೋಜ ಅವರು ಹೇಳಿಕೆ ಕೊಟ್ಟಿದ್ದರು. ನಮ್ಮ ಮಂಗಳೂರಿನ ಜನರು, ಕಾರ್ಯಕರ್ತರು ದಿನವೂ ಪೊಲೀಸ್ ಸ್ಟೇಶನ್‍ಗೆ ಹೋಗುತ್ತಿದ್ದಾರೆ. ದೂರನ್ನೂ ನೀಡುತ್ತಿದ್ದಾರೆ. ಆದರೆ, ಇವತ್ತಿನ ತನಕ ದೂರನ್ನು ತೆಗೆದುಕೊಂಡಿಲ್ಲ ಎಂದು ವಿವರಿಸಿದರು. ಅವರ ಮೇಲೆ ಎಫ್‍ಐಆರ್ ದಾಖಲಿಸುತ್ತಿಲ್ಲವೇಕೆ ಎಂದು ಸಿದ್ದರಾಮಯ್ಯರನ್ನು ಪ್ರಶ್ನಿಸಿದರು.

ಕರ್ನಾಟಕವನ್ನು ನೀವೇನು ಮಾಡಲು ಹೊರಟಿದ್ದೀರಿ?

ಕರ್ನಾಟಕವನ್ನು ನೀವೇನು ಮಾಡಲು ಹೊರಟಿದ್ದೀರಿ? ನಾಗಮಂಗಲದಲ್ಲಿ ಘಟನೆ ನಡೆಯಿತು. ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಗಣೇಶ ಚತುರ್ಥಿಯ ಸಂದರ್ಭದಲ್ಲಿ ಗಣೇಶನನ್ನು ಪೊಲೀಸ್ ವ್ಯಾನಿನಲ್ಲಿ ಕರೆದುಕೊಂಡು ಹೋಗಿ ವಿಸರ್ಜನೆ ಮಾಡುವ ಘಟನೆ ನಡೆದಿದೆ. ಯಾಕಾಗಿ ಹೀಗಾಗಿದೆ? ನಾಗಮಂಗಲದ ಗಣಪತಿಗೆ ನೀವು ಚಪ್ಪಲಿ ಎಸೆಯಲು ಅವಕಾಶ ಕೊಟ್ಟಿದ್ದೀರಿ. ಕಲ್ಲುಗಳನ್ನೂ ಎಸೆದರು. ಮೂರ್ತಿ ಭಗ್ನ ಆಯಿತು. ಮೂರ್ತಿಯನ್ನು ಅಲ್ಲೇ ಬಿಟ್ಟು ಓಡಿದರು. 25 ಅಂಗಡಿಗಳನ್ನು ಸುಟ್ಟು ಹಾಕಿದರು. ಆ ಜನರು ಯಾರು ಎಂದು ಕು. ಶೋಭಾ ಕರಂದ್ಲಾಜೆ ಅವರು ಪ್ರಶ್ನೆಯನ್ನು ಮುಂದಿಟ್ಟರು.

ನಾಗಮಂಗಲದ ಜನರಿಗೆ ಆ ಧೈರ್ಯ ಹೇಗೆ ಬಂತು? ಲಭಿಸಿದ ವರದಿ ಪ್ರಕಾರ ಕೇರಳದಿಂದ ಬಂದಿದ್ದಾರೆ ಎನ್ನುತ್ತಿದ್ದಾರೆ. ಅವರು ಯಾರು? ಹೇಗೆ ಮತ್ತು ಯಾಕೆ ಬಂದರು? ಇವತ್ತು ನಾಗಮಂಗಲದ ಕೇಸನ್ನೂ ನೀವು ಮುಚ್ಚಿ ಹಾಕಿದ್ದೀರಿ. ನಿಮ್ಮ ಪೊಲೀಸರು ಇದೊಂದು ಘಟನೆಯೇ ಅಲ್ಲ ಎಂಬಂತೆ ಆ ಕೇಸನ್ನು ಕ್ಲೋಸ್ ಮಾಡಿದ್ದಾರೆ ಎಂದು ದೂರಿದರು. ಪರಮೇಶ್ವರ್ ಅವರು ಇದೊಂದು ಚಿಕ್ಕ ಘಟನೆ ಎನ್ನುತ್ತಾರೆ. ಯಾವುದು ಚಿಕ್ಕ ಘಟನೆ ಪರಮೇಶ್ವರ್ ಅವರೇ ಎಂದು ಕೇಳಿದರು. 25 ಅಂಗಡಿ ಸುಟ್ಟದ್ದು ಚಿಕ್ಕ ಘಟನೆಯೇ? ಪಕ್ಕದ ರಾಜ್ಯದಿಂದ ಬಂದು ಗಲಭೆ ಮಾಡಿದ್ದು ಚಿಕ್ಕ ಘಟನೆಯೇ? ಎಂದರು.

ಅತ್ಯಂತ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಪರಶುರಾಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಶಾಸಕ ಮತ್ತು ಶಾಸಕರ ಪುತ್ರ ಸೇರಿ ತಮಗೆ ಹಣ ಕೇಳಿದ್ದು, ಅದನ್ನು ಕೊಡಲು ನನಗೆ ಶಕ್ತಿ ಇಲ್ಲ; ನನಗೆ ಹಿಂಸೆ ಕೊಡುತ್ತಿದ್ದಾರೆ ಎಂದು ಹೇಳಿ ಸತ್ತರು. ಅವರ ಮೇಲೆ ಎಫ್‍ಐಆರ್ ದಾಖಲಿಸಲು ಹಿಂದೆ ಮುಂದೆ ನೋಡಿದ್ದೀರಿ ಎಂದು ಟೀಕಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಹಗರಣ ಮಾಡಿ ಸಿಕ್ಕಿ ಹಾಕಿಕೊಂಡ ಬಳಿಕ ನೀವು ಎಸ್‍ಐಟಿ ರಚಿಸಿದ್ದೀರಿ. ಎಸ್‍ಐಟಿ ವರದಿಯನ್ನು ಓದಿದ್ದೀರಾ ಸಿದ್ದರಾಮಯ್ಯನವರೇ? ಆ ವರದಿಯಲ್ಲಿ ನಾಗೇಂದ್ರ ಅವರ ಹೆಸರು ಯಾಕೆ ಇಲ್ಲ ಎಂದು ಪ್ರಶ್ನೆಯನ್ನು ಮುಂದಿಟ್ಟರು. ಅವರು ಅಪರಾಧಿ ಅಲ್ಲವೇ? ಎಂದು ಕೇಳಿದರು.

ರಾಷ್ಟ್ರಧ್ವಜದ ಅಶೋಕ ಚಕ್ರದ ಜಾಗದಲ್ಲಿ ಉರ್ದು ಬರಹ

ಬೆಳಗಾವಿಯಲ್ಲಿ ಗಣಪತಿ ಮೂರ್ತಿ ವಿಸರ್ಜನೆ ವೇಳೆ 3 ಜನ ಹಿಂದೂ ಯುವಕರಿಗೆ ಚಾಕುವಿನಿಂದ ಇರಿದಿದ್ದಾರೆ. ಕೋಲಾರದಲ್ಲಿ ಮೊದಲ ಬಾರಿಗೆ ಕರ್ನಾಟಕ ರಾಜ್ಯ ಪ್ಯಾಲೆಸ್ಟೀನ್ ಧ್ವಜ ನೋಡುವಂತಾಗಿದೆ. ಕೋಲಾರದ ಮೆರವಣಿಗೆಯಲ್ಲಿ ಪ್ಯಾಲೆಸ್ಟೀನ್ ಧ್ವಜದ ಪ್ರದರ್ಶನ ಆಗಿದೆ. ನಿನ್ನೆ ಬೆಂಗಳೂರಿನ ನಂದಿನಿ ಲೇ ಔಟ್‍ನಲ್ಲಿ ರಾಷ್ಟ್ರಧ್ವಜ ವಿರೂಪಗೊಳಿಸಿ ರಾಷ್ಟ್ರಧ್ವಜದ ಅಶೋಕ ಚಕ್ರದ ಜಾಗದಲ್ಲಿ ಉರ್ದುವಿನಲ್ಲಿ ಬರೆದಿದ್ದಾರೆ. ಇಂಥ ಧ್ವಜವನ್ನು ಬೆಂಗಳೂರಿನಲ್ಲಿ ಏರಿಸುತ್ತಿದ್ದಾರೆ. ಇದು ಕರ್ನಾಟಕದ ರಾಜಧಾನಿಯ ಸ್ಥಿತಿ ಎಂದು ಕು. ಶೋಭಾ ಕರಂದ್ಲಾಜೆ ಅವರು ಕಳವಳ ವ್ಯಕ್ತಪಡಿಸಿದರು.

ಸಮಾಜಘಾತುಕರು, ದೇಶದ್ರೋಹಿಗಳು, ಅಪರಾಧಿಗಳಿಗೆ ಈ ಧೈರ್ಯ ಹೇಗೆ ಬಂದಿದೆ? ನೀವು ಮುಖ್ಯಮಂತ್ರಿ ಆದ ತಕ್ಷಣ ರಾಜ್ಯಸಭೆ ಚುನಾವಣೆ ನಡೆದಿತ್ತು. ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ವಿಧಾನಸೌಧದಲ್ಲಿ ಮೊದಲ ಬಾರಿಗೆ ನಾವು ಪಾಕಿಸ್ತಾನ್ ಜಿಂದಾಬಾದ್ ಕೇಳಿದೆವು ಎಂದು ಆತಂಕ ವ್ಯಕ್ತಪಡಿಸಿದರು. ಎಫ್‍ಎಸ್‍ಎಲ್ ವರದಿ ಬಂದ ಬಳಿಕ ಕೇಸು ಹಾಕುವುದಾಗಿ ಹೇಳಿ ದಿನ ತಳ್ಳಲಾಯಿತು ಎಂದು ಟೀಕಿಸಿದರು.

ಶಿವಮೊಗ್ಗದಲ್ಲಿ ಹಿಂದೂಗಳನ್ನು ಕಗ್ಗೊಲೆ ಮಾಡಿದ ಔರಂಗಬೇಬನ ರಕ್ತಸಿಕ್ತ ಖಡ್ಗ ಪ್ರದರ್ಶನ ಮಾಡುತ್ತಾರೆ. ಕೋಲಾರದಲ್ಲೂ ಇದರ ಪ್ರದರ್ಶನ ನಡೆಯುತ್ತದೆ. ಟಿಪ್ಪುವನ್ನು ವೈಭವೀಕರಿಸಲಾಗುತ್ತಿದೆ. ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹನುಮಾನ್ ಚಾಲೀಸ ಕೇಳುತ್ತಿದ್ದ ಹುಡುಗನ ಮೇಲೆ ಹಲ್ಲೆ ಮಾಡುತ್ತಾರೆ. ಕೇಳಲು ಹೋದ ನಮ್ಮ ಮೇಲೇ ಕೇಸು ಹಾಕಿದ್ದೀರಿ ಎಂದು ಆಕ್ಷೇಪಿಸಿದರು.

ಇವತ್ತು ಅಶೋಕ್ ಮತ್ತು ನಾವು ಮಾಡಿದ ತಪ್ಪೇನು?

ಇವತ್ತು ಅಶೋಕ್ ಮತ್ತು ನಾವು ಮಾಡಿದ ತಪ್ಪೇನು? ಯಾವ ಅಪರಾಧಕ್ಕಾಗಿ ನೀವು ಎಫ್‍ಐಆರ್ ಹಾಕಿದ್ದೀರಿ? ನಾವು ನಿಮ್ಮನ್ನು ಕೇಳಿದ್ದೇ ನಮ್ಮ ಅಪರಾಧ. ನಿಮ್ಮನ್ನು ಪ್ರಶ್ನಿಸಿದ್ದೇ ಅಪರಾಧ. ಇವತ್ತು ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವುದಕ್ಕಾಗಿ ಪ್ರಜಾತಂತ್ರವನ್ನು ಕಗ್ಗೊಲೆ ಮಾಡುವ ಕೆಲಸ ಮಾಡುತ್ತಿದ್ದೀರಿ. ಪ್ರಜಾತಂತ್ರದ ರಕ್ಷಕರು ನೀವು ಎಂದು ವ್ಯಂಗ್ಯವಾಡಿದರು.

ಮೊನ್ನೆ ಭಾನುವಾರ ರಾಜ್ಯಾದ್ಯಂತ ಸಂವಿಧಾನ ರಕ್ಷಣೆ ಮಾಡಬೇಕೆಂದು ಶಾಲೆ- ಕಾಲೇಜು ಮಕ್ಕಳ ಮಾನವ ಸರಪಳಿ ಮಾಡಿದ್ದೀರಿ? ಯಾವ ಪುರುಷಾರ್ಥಕ್ಕೆ? ಜನರು ಬರಲಿಲ್ಲ. ಮನೆಗೆ ಹೋಗಿದ್ದ ಮಕ್ಕಳನ್ನು ಕರೆದುಕೊಂಡು ಬಂದು ರಸ್ತೆ ತುಂಬ ಬಿಸಿಲಲ್ಲಿ ನಿಲ್ಲಿಸಿದ್ದೀರಿ. ಮಕ್ಕಳನ್ನು ಬಿಸಿಲಲ್ಲಿ ನಿಲ್ಲಿಸಿದ್ದಾರೆ ಎಂದು ನೂರಾರು ಫೋನ್ ಕರೆ ನಮಗೆ ಬಂದಿತ್ತು. ಯಾವ ಸಂವಿಧಾನದ ರಕ್ಷಣೆ ಮಾಡಲು ನೀವು ಹೊರಟಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ. ಮುನಿರಾಜು, ರಾಜ್ಯ ವಕ್ತಾರರಾದ ಕು. ಸುರಭಿ ಹೊದಿಗೆರೆ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಕೆ.ಸಿ.ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

‘ವಖ್ಫ್ ಅದಾಲತ್’ ಕಾಟಾಚಾರಕ್ಕೆ ಮಾಡುತ್ತಿಲ್ಲ: ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ‘ಸಚಿವ ಜಮೀರ್ ಅಹಮದ್’

‘ಖಲಿಸ್ತಾನಿ ಭಯೋತ್ಪಾದಕ’ ಪನ್ನುನಿ ಹತ್ಯೆ ಯತ್ನ: ಭಾರತ ಸರ್ಕಾರಕ್ಕೆ ಸಮನ್ಸ್ ಜಾರಿ ಮಾಡಿದ ಅಮೆರಿಕ ಕೋರ್ಟ್

ಮುಂದುವರಿದ ಟೆಕ್ ಕಂಪನಿಗಳ ಉದ್ಯೋಗ ಕಡಿತ: ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಿದ CISCO | Lay offs

Share. Facebook Twitter LinkedIn WhatsApp Email

Related Posts

BREAKING : ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್

09/05/2025 11:46 AM1 Min Read

ಮಹಾಲಕ್ಷ್ಮಿಯನ್ನು ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು, ಸಮೃದ್ಧಿಯು ಹೆಚ್ಚಾಗುತ್ತದೆ. ಧನಾಗಮನ ಖಂಡಿತ..

09/05/2025 11:00 AM4 Mins Read

BIG NEWS : ಇಂದು ನಡೆಯುವ ಸಂಪುಟ ಸಭೆಯಲ್ಲಿ ‘ಜಾತಿ ಗಣತಿ’ ವರದಿ ಭವಿಷ್ಯ ನಿರ್ಧಾರ

09/05/2025 10:50 AM1 Min Read
Recent News

BREAKING : ಭಾರತ-ಪಾಕ್ ಮಧ್ಯ ಉದ್ವಿಗ್ನ ಪರಿಸ್ಥಿತಿ : ‘IPL’ ಟೂರ್ನಿಯ ಮುಂದಿನ ಎಲ್ಲಾ ಪಂದ್ಯಗಳು ರದ್ದಾಗುವ ಸಾಧ್ಯತೆ!

09/05/2025 12:05 PM

ಭಾರತ-ಪಾಕಿಸ್ತಾನ ಉದ್ವಿಗ್ನತೆ : ಇಂಧನ ದಾಸ್ತಾನು ಸಾಕಷ್ಟಿದೆ: ಇಂಡಿಯನ್ ಆಯಿಲ್ | Indian oil

09/05/2025 11:57 AM

India -Pak war : ಭಾರತದೊಳಗೆ ನುಸುಳಲು ಯತ್ನ : ಜಮ್ಮು ಕಾಶ್ಮೀರದಲ್ಲಿ 7 ಉಗ್ರರನ್ನು ಹತ್ಯೆಗೈದ BSF

09/05/2025 11:47 AM

BREAKING : ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್

09/05/2025 11:46 AM
State News
KARNATAKA

BREAKING : ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್

By kannadanewsnow0509/05/2025 11:46 AM KARNATAKA 1 Min Read

ಬೆಂಗಳೂರು : ಭಾರತ ಮತ್ತು ಪಾಕಿಸ್ತಾನದ ನಡುವೆ ಪರಿಸ್ಥಿತಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಇದೀಗ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ…

ಮಹಾಲಕ್ಷ್ಮಿಯನ್ನು ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು, ಸಮೃದ್ಧಿಯು ಹೆಚ್ಚಾಗುತ್ತದೆ. ಧನಾಗಮನ ಖಂಡಿತ..

09/05/2025 11:00 AM

BIG NEWS : ಇಂದು ನಡೆಯುವ ಸಂಪುಟ ಸಭೆಯಲ್ಲಿ ‘ಜಾತಿ ಗಣತಿ’ ವರದಿ ಭವಿಷ್ಯ ನಿರ್ಧಾರ

09/05/2025 10:50 AM

BREAKING : ಸಚಿವ ಸಂಪುಟದಲ್ಲಿ ಹೆಚ್ಚಿನ ಭದ್ರತೆ ಕುರಿತು ಚರ್ಚಿಸಲಾಗುತ್ತೆ : ಗೃಹ ಸಚಿವ ಜಿ.ಪರಮೇಶ್ವರ್

09/05/2025 10:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.