Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ತೈವಾನ್ ವಿಷಯದಲ್ಲಿ ಎಚ್ಚರ ತಪ್ಪಿದರೆ ಅಮೆರಿಕ-ಚೀನಾ ನಡುವೆ ಸಂಘರ್ಷ ಫಿಕ್ಸ್!’: ಟ್ರಂಪ್‌ಗೆ ಶಿ ಜಿನ್‌ಪಿಂಗ್ ಎಚ್ಚರಿಕೆ

GOOD NEWS : ಬೆಂಗಳೂರಿನ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘ಬಿ’ ಖಾತಾದಿಂದ ‘ಎ’ ಖಾತೆಗೆ ಬದಲಾಯಿಸಲು ಶೇ. 2ರಷ್ಟು ಮಾತ್ರ ಶುಲ್ಕ!

ತಾಯಿಯನ್ನು ನೋಡಿಕೊಳ್ಳದ ಮಗಳಿಗೆ ಶಾಕ್ : ಆಸ್ತಿ ವಾಪಸ್ ನೀಡುವಂತೆ ಹೈಕೋರ್ಟ್ ಮಹತ್ವದ ಆದೇಶ| Karnataka High Court

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತಾಯಿಯನ್ನು ನೋಡಿಕೊಳ್ಳದ ಮಗಳಿಗೆ ಶಾಕ್ : ಆಸ್ತಿ ವಾಪಸ್ ನೀಡುವಂತೆ ಹೈಕೋರ್ಟ್ ಮಹತ್ವದ ಆದೇಶ| Karnataka High Court
KARNATAKA

ತಾಯಿಯನ್ನು ನೋಡಿಕೊಳ್ಳದ ಮಗಳಿಗೆ ಶಾಕ್ : ಆಸ್ತಿ ವಾಪಸ್ ನೀಡುವಂತೆ ಹೈಕೋರ್ಟ್ ಮಹತ್ವದ ಆದೇಶ| Karnataka High Court

By kannadanewsnow57

ಬೆಂಗಳೂರು: ತಾಯಿಯನ್ನು ನೋಡಿಕೊಳ್ಳುವುದು ಕೇವಲ ಸಾಮಾಜಿಕ ಅಥವಾ ನೈತಿಕ ಜವಾಬ್ದಾರಿಯಲ್ಲ, ಅದು ಕಾನೂನುಬದ್ಧ ಹೊಣೆಗಾರಿಕೆಯೂ ಹೌದು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ವಯಸ್ಸಾದ ಕಾಲದಲ್ಲಿ ತಾಯಿಯನ್ನು ಕಡೆಗಣಿಸಿದ ಮಗಳ ನಡೆಯನ್ನು ತೀವ್ರವಾಗಿ ಖಂಡಿಸಿರುವ ನ್ಯಾಯಾಲಯ, ಮಗಳ ಹೆಸರಿಗೆ ವರ್ಗಾವಣೆಯಾಗಿದ್ದ ಆಸ್ತಿಯನ್ನು ಮರಳಿ ತಾಯಿಗೆ ನೀಡುವಂತೆ ಆದೇಶಿಸಿದೆ.

ಸುಮಾರು 62 ವರ್ಷದ ನಿವೃತ್ತ ಸರ್ಕಾರಿ ಶಾಲಾ ಶಿಕ್ಷಕಿ ಹೇಮಾ ಅವರು ತಾವು ಕಷ್ಟಪಟ್ಟು ಸಂಪಾದಿಸಿದ್ದ ಆಸ್ತಿಯನ್ನು, ವೃದ್ಧಾಪ್ಯದಲ್ಲಿ ಮಗಳು ಆರ್. ಪವಿತ್ರಾ ಮತ್ತು ಮಗ ಆರ್. ವೇಣುಗೋಪಾಲ್ ತಮ್ಮನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆ ಎಂಬ ನಂಬಿಕೆಯಿಂದ ಅವರ ಹೆಸರಿಗೆ ದಾನಪತ್ರದ ಮೂಲಕ ವರ್ಗಾಯಿಸಿದ್ದರು.

ಆದರೆ, ಆಸ್ತಿ ಕೈ ಸೇರಿದ ಮೇಲೆ ಮಕ್ಕಳು ತಾಯಿಯನ್ನು ಸರಿಯಾಗಿ ನೋಡಿಕೊಳ್ಳದೆ ಆಕೆಯನ್ನು ಬಾಡಿಗೆ ಮನೆಯಲ್ಲಿ ಇರುವಂತೆ ಮಾಡಿದ್ದರು. ಅಲ್ಲದೆ ಆಕೆಗೆ ಮಾನಸಿಕ ಹಿಂಸೆ ನೀಡುತ್ತಿದ್ದರು ಎನ್ನಲಾಗಿದೆ. ಇದರಿಂದ ನೊಂದ ತಾಯಿ, ‘ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ-2007’ರ ಅಡಿಯಲ್ಲಿ ತಮಗೆ ನ್ಯಾಯ ಕೊಡಿಸುವಂತೆ ಹಿರಿಯ ನಾಗರಿಕರ ನಿರ್ವಹಣಾ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರ ಪೀಠವು ,ತಾಯಿಯನ್ನು ಕಡೆಗಣಿಸಿದ ಕಾರಣ, ಮಕ್ಕಳಿಗೆ ಮಾಡಿಕೊಡಲಾಗಿದ್ದ ದಾನಪತ್ರವನ್ನು ರದ್ದುಗೊಳಿಸಿ ಆಸ್ತಿಯನ್ನು ಮರಳಿ ತಾಯಿಯ ಹೆಸರಿಗೆ ನೋಂದಣಿ ಮಾಡಿಕೊಡುವ ನ್ಯಾಯಮಂಡಳಿಯ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.ತಾಯಿಯನ್ನು ನೋಡಿಕೊಳ್ಳುವ ಜವಾಬ್ದಾರಿಯಿಂದ ಮಕ್ಕಳು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ದಾನಪತ್ರದಲ್ಲಿ ‘ನೋಡಿಕೊಳ್ಳಬೇಕು’ ಎಂದು ಸ್ಪಷ್ಟವಾಗಿ ಬರೆಯದಿದ್ದರೂ, ಆಸ್ತಿ ನೀಡುವ ಹಿಂದೆ ಅಂತಹದೊಂದು ನಂಬಿಕೆ ಇರುತ್ತದೆ ಎಂಬುದು ಕಾನೂನಿನ ಆಶಯ” ಎಂದು ನ್ಯಾಯಾಲಯ ಹೇಳಿದೆ.

ಸ್ವಂತ ಮನೆಯಿದ್ದರೂ ವೃದ್ಧ ತಾಯಿಯನ್ನು ಬಾಡಿಗೆ ಮನೆಯಲ್ಲಿ ಇರುವಂತೆ ಮಾಡಿರುವುದು ಮಕ್ಕಳ ಬೇಜವಾಬ್ದಾರಿತನವನ್ನು ತೋರಿಸುತ್ತದೆ ಎಂದು ಪೀಠವು ತರಾಟೆಗೆ ತೆಗೆದುಕೊಂಡಿದೆ. ತಾಂತ್ರಿಕ ಕಾರಣಗಳನ್ನು ನೀಡಿ ಹಿರಿಯ ನಾಗರಿಕರ ಕಾಯ್ದೆಯ ಮೂಲ ಉದ್ದೇಶವನ್ನು ಕಡೆಗಣಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ ಹೈಕೋರ್ಟ್, ಮಗಳು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಸಂಕಷ್ಟದಲ್ಲಿರುವ ಹಿರಿಯ ನಾಗರಿಕರಿಗೆ ಕಾನೂನು ಶ್ರೀರಕ್ಷೆಯಾಗಿ ನಿಂತಿದೆ.

Shock to daughter who did not take care of mother: High Court orders return of property
Share. Facebook Twitter LinkedIn WhatsApp Email

Related Posts

GOOD NEWS : ಬೆಂಗಳೂರಿನ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘ಬಿ’ ಖಾತಾದಿಂದ ‘ಎ’ ಖಾತೆಗೆ ಬದಲಾಯಿಸಲು ಶೇ. 2ರಷ್ಟು ಮಾತ್ರ ಶುಲ್ಕ!

1 Min Read

JOB ALERT : ಇಂದಿನಿಂದ ಭಾರತೀಯ ರೈಲ್ವೆ ಇಲಾಖೆಯಲ್ಲಿ `11,127’ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ | Railway Recruitment-2026

1 Min Read

ಖಾಸಗಿ ಶಾಲೆಗಳಿಗೆ ವಸ್ತ್ರಸಂಹಿತೆ ಆದೇಶ ಕಡ್ಡಾಯ ಮಾಡಲಾಗದು: ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ

1 Min Read
Recent News

‘ತೈವಾನ್ ವಿಷಯದಲ್ಲಿ ಎಚ್ಚರ ತಪ್ಪಿದರೆ ಅಮೆರಿಕ-ಚೀನಾ ನಡುವೆ ಸಂಘರ್ಷ ಫಿಕ್ಸ್!’: ಟ್ರಂಪ್‌ಗೆ ಶಿ ಜಿನ್‌ಪಿಂಗ್ ಎಚ್ಚರಿಕೆ

GOOD NEWS : ಬೆಂಗಳೂರಿನ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘ಬಿ’ ಖಾತಾದಿಂದ ‘ಎ’ ಖಾತೆಗೆ ಬದಲಾಯಿಸಲು ಶೇ. 2ರಷ್ಟು ಮಾತ್ರ ಶುಲ್ಕ!

ತಾಯಿಯನ್ನು ನೋಡಿಕೊಳ್ಳದ ಮಗಳಿಗೆ ಶಾಕ್ : ಆಸ್ತಿ ವಾಪಸ್ ನೀಡುವಂತೆ ಹೈಕೋರ್ಟ್ ಮಹತ್ವದ ಆದೇಶ| Karnataka High Court

JOB ALERT : ಇಂದಿನಿಂದ ಭಾರತೀಯ ರೈಲ್ವೆ ಇಲಾಖೆಯಲ್ಲಿ `11,127’ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ | Railway Recruitment-2026

State News
KARNATAKA

GOOD NEWS : ಬೆಂಗಳೂರಿನ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘ಬಿ’ ಖಾತಾದಿಂದ ‘ಎ’ ಖಾತೆಗೆ ಬದಲಾಯಿಸಲು ಶೇ. 2ರಷ್ಟು ಮಾತ್ರ ಶುಲ್ಕ!

By kannadanewsnow57 KARNATAKA 1 Min Read

ಬೆಂಗಳೂರು: ಸಿಲಿಕಾನ್ ಸಿಟಿಯ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಬೆಂಗಳೂರು ನಗರದ ಅಭಿವೃದ್ಧಿ ಮತ್ತು ನಾಗರಿಕರ…

ತಾಯಿಯನ್ನು ನೋಡಿಕೊಳ್ಳದ ಮಗಳಿಗೆ ಶಾಕ್ : ಆಸ್ತಿ ವಾಪಸ್ ನೀಡುವಂತೆ ಹೈಕೋರ್ಟ್ ಮಹತ್ವದ ಆದೇಶ| Karnataka High Court

JOB ALERT : ಇಂದಿನಿಂದ ಭಾರತೀಯ ರೈಲ್ವೆ ಇಲಾಖೆಯಲ್ಲಿ `11,127’ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ | Railway Recruitment-2026

ಖಾಸಗಿ ಶಾಲೆಗಳಿಗೆ ವಸ್ತ್ರಸಂಹಿತೆ ಆದೇಶ ಕಡ್ಡಾಯ ಮಾಡಲಾಗದು: ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.