Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
Aloo Batani Kurma Recipe

ಪೂರಿ ಚಪಾತಿಗೆ ಆಲೂಗಡ್ಡೆ ಬಟಾಣಿ ಕುರ್ಮಾ ರೆಸಿಪಿ

ರುಚಿಕರ ಪನೀರ್ ಮಸಾಲಾ ಗ್ರೇವಿ ಮಾಡುವ ಸುಲಭ ವಿಧಾನ

ರೇಣುಕಾಸ್ವಾಮಿ ಕೊಲೆ ಕೇಸ್ : ದರ್ಶನ್ ಕೇಸ್ ವಿಚಾರಣೆ ನಡೆಸುತ್ತಿರುವ ಕೋರ್ಟ್, ಜಡ್ಜ್ ಬದಲಾವಣೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಕಾಳಿಂಗ ಸರ್ಪಕ್ಕೆ ಪೋಟೋ ಶೂಟ್ ಕಾಟ ಕೊಟ್ಟವರಿಗೆ ಶಾಕ್: ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ
KARNATAKA

BREAKING: ಕಾಳಿಂಗ ಸರ್ಪಕ್ಕೆ ಪೋಟೋ ಶೂಟ್ ಕಾಟ ಕೊಟ್ಟವರಿಗೆ ಶಾಕ್: ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಸಂಶೋಧನೆ, ಅಧ್ಯಯನದ ಹೆಸರಿನಲ್ಲಿ ವನ್ಯ ಜೀವಿ ಅಭಯಾರಣ್ಯದಲ್ಲಿ ಕಾಳಿಂಗ ಸರ್ಪಕ್ಕೆ ಪೋಟೋ ಶೂಟ್ ಹೆಸರಿನಲ್ಲಿ ಕಾಟ ಕೊಟ್ಟಿದ್ದು ವೈರಲ್ ಆಗಿತ್ತು. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವಂತ ಅರಣ್ಯ ಸಚಿವ ಈಶ್ವರ್ ಖಂಡ್ರೆ ತನಿಖೆ ನಡೆಸಿ, ವರದಿಗೆ ಸೂಚಿಸಿದ್ದಾರೆ. ಈ ವರದಿಯನ್ನು ಆಧರಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದ್ದಾರೆ.

ಇಂದು ಈ ಕುರಿತಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪತ್ರ ಬರೆದಿದ್ದಾರೆ. ಅದರಲ್ಲಿ ಜನ ಸಂಗ್ರಾಮ ಪರಿಷತ್ತು. ಶಿವಮೊಗ್ಗ ಜಿಲ್ಲಾಧ್ಯಕ್ಷ ಅಖಿಲೇಶ್ ಚಿಪ್ಸ್, ಪತ್ರಕರ್ತ ಉದಯ್ ಸಾಗರ್, ಕನಕಪುರ ತಾಲೂಕಿನ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಇ- ಮೇಲ್ ಮೂಲಕ ಈ ಕಚೇರಿಗೆ ಸಲ್ಲಿಸಿರುವ ಸ್ವಯಂವೇದ್ಯ ಮನವಿ/ದೂರಿನ ಪ್ರತಿಯನ್ನು ಲಗತ್ತಿಸಲಾಗಿದ್ದು, ಅದರಲ್ಲಿ ಅವರು, ಆಗುಂಬೆ ಮಳೆಕಾಡು ಸಂಶೋಧನಾ ಕೇಂದ್ರ (ARRS)ದ ಚಟುವಟಿಕೆಗಳ ಬಗ್ಗೆ ಪ್ರಸ್ತಾಪಿಸಿ, ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲ್ಲೂಕು, ಆಗುಂಬೆ ಹೋಬಳಿ, ತಲ್ಲೂರು ಗ್ರಾಮ ಸ.ನಂ.11 ಸೋಮೇಶ್ವರ ಅಭಯಾರಣ್ಯದ ಕೇಂದ್ರ ಭಾಗದಲ್ಲಿ ಆಗುಂಬೆಯ ಎ.ಆರ್.ಆರ್.ಎಸ್. ಸಂಸ್ಥೆಯವರು ಅಕ್ರಮವಾಗಿ ಜಮೀನು ಖರೀದಿಸಿರುವ ಕುರಿತಂತೆ ಮಾಹಿತಿ ನೀಡಿರುತ್ತಾರೆ ಎಂದಿದ್ದಾರೆ.

ಯಾವುದೇ ಸಂಶೋಧನೆಗೆ ನಿರ್ದಿಷ್ಟ ಸಮಯಕ್ಕೆ ಮಾತ್ರವೇ ಅನುಮತಿ ನೀಡಲಾಗುತ್ತದೆ ಆದರೆ ಇಲ್ಲಿ ವರ್ಷವಿಡೀ ಸಂಶೋಧನೆ ಹೆಸರಲ್ಲಿ ಛಾಯಾಗ್ರಹಣ ನಡೆಸುವ ಬಗ್ಗೆ ತಿಳಿಸಿದ್ದು ವನ್ಯಜೀವಿ ಕಾಳಿಂಗ ಸರ್ಪಗಳ ಸೆರೆ, ರಕ್ಷಣೆಯ ಹೆಸರಲ್ಲಿ ಆಗುತ್ತಿರುವ ಪರಿಶಿಷ್ಠ ರ ವನ್ಯಜೀವಿ ಶೋಷಣೆಯ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ.

ಅರಣ್ಯ ಇಲಾಖೆಯ ಅನುಮತಿ ಇಲ್ಲದೆ ಅರಣ್ಯ ಭೂಮಿ ಒತ್ತುವರಿ ಹಾಗೂ ಕಟ್ಟಡ ನಿರ್ಮಾಣ, ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯೊಳಗೆ ಪರಿಸರ ಸೂಕ್ಷ್ಮ ಪ್ರದೇಶದ ಭೂಮಿ ಖರೀದಿ ಮಾಡಿರುವ ಗಂಭೀರ ಅಕ್ರಮಗಳ ಬಗ್ಗೆ ಸರ್ಕಾರದ ಗಮನ ಸೆಳೆದು, ಕಾಳಿಂಗ ಸರ್ಪಗಳ ಆವಾಸಸ್ಥಳದಲ್ಲಿ ನಡೆಯುತ್ತಿರುವ ವಾಣಿಜ್ಯ ಚಟುವಟಿಕೆಗಳು, ಹಾಗೂ ಅರಣ್ಯ ಮತ್ತು ವನ್ಯಜೀವಿ ಕಾಯಿದೆಗಳ ನೇರ ಉಲ್ಲಂಘನೆ ಕುರಿತಂತೆ ಉನ್ನತ ಮಟ್ಟದ ಪಾರದರ್ಶಕ ತನಿಖೆಗೆ ಮನವಿ ಮಾಡಿರುತ್ತಾರೆ.

ಈ ಮನವಿಗಳಲ್ಲಿರುವ ಎಲ್ಲ ಅಂಶಗಳನ್ನೂ ಗಣನೆಗೆ ತೆಗೆದುಕೊಂಡು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರ ನೇತೃತ್ವದ ತಂಡದಿಂದ ಪರಿಶೀಲನೆ ನಡೆಸಿ, ನಿರ್ಲಕ್ಷ್ಯ ವಹಿಸಿರುವ ಅಧಿಕಾರಿಗಳ ವಿರುದ್ಧ ಮತ್ತು ತಪ್ಪಿತಸ್ಥರ ವಿರುದ್ಧ ಕೈಗೊಳ್ಳಬಹುದಾದ ಕ್ರಮದ ಶಿಫಾರಸಿನೊಂದಿಗೆ ಸಮಗ್ರ ವರದಿಯನ್ನು ಕಡತದಲ್ಲಿ 10 ದಿನಗಳ ಒಳಗಾಗಿ ಸಲ್ಲಿಸಲು ಸೂಚಿಸಿದ್ದಾರೆ. ಈ ಮೂಲಕ ವನ್ಯ ಜೀವಿ ಅಭಯಾರಣ್ಯ ವ್ಯಾಪ್ತಿಯೊಳಗೆ ಪರಿಸರ ಸೂಕ್ಷ್ಮ ಪ್ರದೇಶದ ಭೂಮಿ ಖರೀದಿ ಮಾಡಿ, ಪೋಟೋ ಗ್ರಾಫಿ ಹೆಸರಿನಲ್ಲಿ ಕಾಳಿಂಗ ಸರ್ಪಕ್ಕೆ ಕಾಟಕೊಟ್ಟವರಿಗೆ ಸಚಿವರು ಶಾಕ್ ನೀಡಿದ್ದಾರೆ.

ಕೆಟ್ಟು ನಿಂತ ಮೈಕು, ಸೌಜನ್ಯ ಮೆರೆದ ಧ್ವನಿವರ್ಧಕವಿಲ್ಲದೇ ಮಾತನಾಡಿದ ಶಾಸಕ ಗೋಪಾಲಕೃಷ್ಣ ಬೇಳೂರು

BREAKING: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗೆ ಆಯುಕ್ತರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ

Share. Facebook Twitter LinkedIn WhatsApp Email

Related Posts

ರೇಣುಕಾಸ್ವಾಮಿ ಕೊಲೆ ಕೇಸ್ : ದರ್ಶನ್ ಕೇಸ್ ವಿಚಾರಣೆ ನಡೆಸುತ್ತಿರುವ ಕೋರ್ಟ್, ಜಡ್ಜ್ ಬದಲಾವಣೆ!

1 Min Read

ಇದು ಶ್ರೀ ಆದಿ ಶಂಕರಾಚಾರ್ಯರಿಗೆ ಭಗವಾನ್ ಶಿವನು ನೀಡಿದ ಪಂಚಲಿಂಗಗಳ ಮಹಿಮೆ: ತಪ್ಪದೇ ಓದಿ, ಕಷ್ಟಗಳೆಲ್ಲ ಪರಿಹಾರ

4 Mins Read

ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಹಿನ್ನೆಲೆ : ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು ಗೊತ್ತಾ?

2 Mins Read
Recent News
Aloo Batani Kurma Recipe

ಪೂರಿ ಚಪಾತಿಗೆ ಆಲೂಗಡ್ಡೆ ಬಟಾಣಿ ಕುರ್ಮಾ ರೆಸಿಪಿ

ರುಚಿಕರ ಪನೀರ್ ಮಸಾಲಾ ಗ್ರೇವಿ ಮಾಡುವ ಸುಲಭ ವಿಧಾನ

ರೇಣುಕಾಸ್ವಾಮಿ ಕೊಲೆ ಕೇಸ್ : ದರ್ಶನ್ ಕೇಸ್ ವಿಚಾರಣೆ ನಡೆಸುತ್ತಿರುವ ಕೋರ್ಟ್, ಜಡ್ಜ್ ಬದಲಾವಣೆ!

ಇದು ಶ್ರೀ ಆದಿ ಶಂಕರಾಚಾರ್ಯರಿಗೆ ಭಗವಾನ್ ಶಿವನು ನೀಡಿದ ಪಂಚಲಿಂಗಗಳ ಮಹಿಮೆ: ತಪ್ಪದೇ ಓದಿ, ಕಷ್ಟಗಳೆಲ್ಲ ಪರಿಹಾರ

State News
KARNATAKA

ರೇಣುಕಾಸ್ವಾಮಿ ಕೊಲೆ ಕೇಸ್ : ದರ್ಶನ್ ಕೇಸ್ ವಿಚಾರಣೆ ನಡೆಸುತ್ತಿರುವ ಕೋರ್ಟ್, ಜಡ್ಜ್ ಬದಲಾವಣೆ!

By ಸುರೇಶ್‌ KARNATAKA 1 Min Read

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇದೀಗ ಸಿಸಿಎಚ್ ಕೋರ್ಟ್‌ನಿಂದ ನಗರದ 59ನೇ ಸೆಷನ್ ಕೋರ್ಟ್‌ಗೆ ವರ್ಗಾವಣೆಯಾಗಿದೆ.…

ಇದು ಶ್ರೀ ಆದಿ ಶಂಕರಾಚಾರ್ಯರಿಗೆ ಭಗವಾನ್ ಶಿವನು ನೀಡಿದ ಪಂಚಲಿಂಗಗಳ ಮಹಿಮೆ: ತಪ್ಪದೇ ಓದಿ, ಕಷ್ಟಗಳೆಲ್ಲ ಪರಿಹಾರ

ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಹಿನ್ನೆಲೆ : ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು ಗೊತ್ತಾ?

ALERT : ಬ್ರೇಕ್ ಫಾಸ್ಟ್ ಗೆ ಪೂರಿ, ವಡೆ, ಬ್ರೆಡ್-ಜಾಮ್ ತಿನ್ನೋ ಮುನ್ನ ಎಚ್ಚರ: ನಿಮ್ಮ ಆರೋಗ್ಯಕ್ಕೆ ಕಾದಿದೆ ಕಂಟಕ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.