ಬೆಂಗಳೂರು : ಬೆಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು 7 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.ಈ ಒಂದು ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ ಕೋರ್ಟ್ ಆದೇಶ ನಿಜಕ್ಕೂ ನನಗೆ ಶಾಕ್ ನೀಡಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಈ ವಿಚಾರದ ಕುರಿತಾಗಿ ಪ್ರತಿಕ್ರಿಯಿಸಿದ ಅವರು, ಕಾನೂನಿಗೆ ಯಾರೇ ಆಗಲಿ ಗೌರವ ಕೊಡಬೇಕು. ಶಾಸಕ ಸತೀಶ್ ಸೈಲ್ಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಅವರು ಮೇಲ್ಮನವಿ ಸಲ್ಲಿಸಬಹುದು ಎನಿಸುತ್ತೆ. ಆದರೆ ಕಾನೂನಿಗೆ ಎಲ್ಲರೂ ತಲೆ ಬಾಗಬೇಕು. ಇನ್ನು ಶಾಸಕ ಸ್ಥಾನ ವಜಾ ಬಗ್ಗೆ ಕೋರ್ಟ್ ನೀಡಿರುವ ಆದೇಶದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಲೀಗಲಿ ಏನು ಆಗಬೇಕೋ ಅದು ಆಗುತ್ತದೆ ಎಂದು ತಿಳಿಸಿದರು.
ಬೇಲೆಕೇರಿ ಅದಿರು ನಾಪತ್ತೆ ಕೇಸ್ನ 6 ಪ್ರಕರಣಗಳಲ್ಲೂ ಕಾಂಗ್ರೆಸ್ ಶಾಸಕ ಸತೀಶ್ ರೈಗೆ 7 ವರ್ಷ ಜೈಲು ಎಂದು ಕೋರ್ಟ್ ಆದೇಶ ಹೊರಡಿಸಿದೆ. ಕೋರ್ಟ್ ಆದೇಶ ಕೇಳಿ ನನಗೆ ಶಾಕ್ ಆಗಿದೆ. ಅಫೀಲು ಮಾಡಲು ಶಾಸಕರಿಗೆ ಅವಕಾಶವಿದೆ. ಅವರು ಲೀಗಲ್ ಟೀಂ ಜೊತೆ ಮಾತನಾಡುತ್ತಾರೆ. ಶಾಸಕ ಸ್ಥಾನದಿಂದ ಅನರ್ಹ ಆಗುವ ಕುರಿತು ನನಗೆ ತಿಳಿದಿಲ್ಲ. ಮುಂದೆ ಏನು ಆಗುತ್ತದೆ ನೋಡೋಣ ಎಂದರು.