ಹಾಸನ : ಹಾಸನ ಜಿಲ್ಲೆಯಲ್ಲಿ ಏನಾಗುತ್ತಿದೆ ಎಂದು ತಿಳಿಯುತ್ತಿಲ್ಲ ಏಕೆಂದರೆ ಕಳೆದ ಒಂದು ತಿಂಗಳಲ್ಲಿ ಇದುವರೆಗೂ ಹೃದಯಘಾತದಿಂದ 14 ಜನರು ಸಾವನ್ನಪ್ಪಿದ್ದಾರೆ. ಇದೀಗ ಮತ್ತೊಂದು ಘಟನೆ ನಡೆದಿದ್ದು, ಹೃದಯಾಘಾತದಿಂದ ಕಾರು ಚಾಲಕ ಮಂಜುನಾಥ್ (51) ಇದೀಗ ಸಾವನ್ನಪ್ಪಿದ್ದಾರೆ.
ಹೌದು ಹಾಸನ ನಗರದ ಪೆನ್ಷನ್ ಮೊಹಲ್ಲಾದ ನಿವಾಸಿಯಾಗಿರುವ ಮಂಜುನಾಥ್ ಕಾರು ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಖಾಸಗಿ ವೈದ್ಯರ ಕಾರು ಚಾಲಕನಾಗಿದ್ದ ಮಂಜುನಾಥ್ ಬುಧವಾರ ತಡರಾತ್ರಿ ಮನೆಯಲ್ಲಿದ್ದಾಗ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಮಂಜುನಾಥ್ ಆಸ್ಪತ್ರೆಗೆ ದಾಖಲಾಗಿದ್ದರು. ಇಸಿಜಿ ಮಾಡಿ ವೈದ್ಯರಿಗೆ ಆಸ್ಪತ್ರೆ ಸಿಬ್ಬಂದಿ ಕರೆ ಮಾಡಿದ್ದಾರೆ.
ಆದರೆ ವೈದ್ಯರು ಬರುವಷ್ಟರಲ್ಲಿ ಮಂಜುನಾಥ್ ಸಾವನಪ್ಪಿದ್ದಾರೆ. ಮಂಜುನಾಥ್ ಮೂಲತಹಃ ಆಲೂರು ತಾಲೂಕಿನ ಬಾವಿ ಕೊಪ್ಪಲು ಗ್ರಾಮದ ನಿವಾಸಿಯಾಗಿದ್ದರು. ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ ಹೃದಯಘಾತಕ್ಕೆ 15 ಜನರು ಬಲಿಯಾಗಿದ್ದಾರೆ. ಹೃದಯಾಘಾತದಿಂದ ಸಾವು ಸಂಭವಿಸುತ್ತಿರುವುದರಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ.