ಹಾಸನ : ಹಾಸನದಲ್ಲಿ ಇಂದು ಒಂದೇ ದಿನ ಮೂವರು ಹೃದಯಘಾತಕ್ಕೆ ಬಲಿಯಾಗಿದ್ದಾರೆ. ತಡರಾತ್ರಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳುನಲ್ಲಿ ಯೋಧ ಸಾವನಪ್ಪಿದ್ದರೆ, ಇನ್ನೂ ಇಂದು ಬೆಳಿಗ್ಗೆ ತಾನೇ ಹೃದಯಾಘಾತದಿಂದ ಬೇಲೂರು ಪಟ್ಟಣದಲ್ಲಿ ಮಹಿಳೆ ಒಬ್ಬರು ಕುಸಿದು ಬಿದ್ದು ಸಾವನಪ್ಪಿದ್ದಾರೆ. ಇದೀಗ ಹೊಳೆನರಸೀಪುರದಲ್ಲಿ ಟೀ ಕುಡಿಯುತ್ತಿದ್ದಾಗ ಪ್ರಾಧ್ಯಾಪಕರೊಬ್ಬರೂ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೌದು ಹಾಸನ ಜಿಲ್ಲೆಯಲ್ಲಿ ಒಂದೇ ದಿನ ಹೃದಯಾಘಾತಕ್ಕೆ ಮೂರು ಜನ ಬಲಿ ಯಾಗಿದ್ದಾರೆ. ಹಾಸನ ಜಿಲ್ಲೆಯ ಬೇಲೂರಿನ ಜೆಪಿ ನಗರದ ಲೇಪಾಕ್ಷಿ (50), ಹೊಳೆ ನರಸೀಪುರದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ, ಮುತ್ತಯ್ಯ (58) ಸಾವನಪ್ಪಿದ್ದಾರೆ, ಇವರು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು.ಹಾಗು ಕೆಂಬಾಳು ಗ್ರಾಮದಲ್ಲಿ ಹೃದಯಾಘಾತದಿಂದ ಯೋಧ ಲೋಹಿತ್ (38) ಸಾವನ್ನಪ್ಪಿದ್ದಾರೆ.
ಕಳೆದ 40 ದಿನಗಳಲ್ಲಿ ಒಟ್ಟು 21 ಜನರು ಹೃದಯಘಾತಕ್ಕೆ ಬಲಿಯಾಗಿದ್ದಾರೆ ಇತ್ತೀಚಿಗೆ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ವೈದ್ಯರು ಹೃದಯಾಘಾತಕ್ಕೆ ಏನು ಕಾರಣ ಎಂಬುದರ ಕುರಿತು ವರದಿ ಬಹಿರಂಗಪಡಿಸಿದ್ದು, ಅದರಲ್ಲೂ ಮಹಿಳೆಯರಿಗೆ ಈ ಒಂದು ಹೃದಯಘಾತ ಹೆಚ್ಚಾಗಿ ಕಂಡುಬರುತ್ತಿದೆ ಎಂದು ವರದಿಯಲ್ಲಿ ವೈದ್ಯರು ಬಹಿರಂಗಪಡಿಸಿದ್ದಾರೆ.