ರಾಣಿಬೆನ್ನೂರು : ರಾಜ್ಯದಲ್ಲಿ ಮದುವೆಗೆ ಹೆಣ್ಣು ಸಿಗಲಿಲ್ಲ ಎಂದು ಮನನೊಂದು ಮತ್ತೊಬ್ಬ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಮದುವೆಯಾಗಲು ಕನ್ಯ ಸಿಗದ ಹಿನ್ನೆಲೆ ಯುವಕನೊಬ್ಬ ಬೇಸರಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಸಣ್ಣಸಂಗಾಪುರ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಅವಿನಾಶ ಚಾವಡಿ (29) ಮೃತ ಯುವಕ. ಈತ ವೃತ್ತಿಯಲ್ಲಿ ಡ್ರೈವರ್ಆಗಿದ್ದ. ಊರಿನಲ್ಲಿ ತನ್ನ ವಯಸ್ಸಿನ ಎಲ್ಲ ಹುಡುಗರಿಗೆ ಹೆಣ್ಣು ಸಿಕ್ಕು ಮದುವೆ ಆಗಿದ್ದಾರೆ. ಆದರೆ, ತನಗೆ ಮಾತ್ರ ಹುಡುಗಿ ಸಿಗುತ್ತಿಲ್ಲ ಎಂದು ಬೇಸರಗೊಂಡಿದ್ದ. ಇದರಿಂದ ಚಿಂತಿತನಾಗಿದ್ದ ಅವಿನಾಶ ಕುಡಿದ ನಶೆಯಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.