ಬೀದರ್ : ರಾಜ್ಯದಲ್ಲಿ ಅಮಾನವೀಯ ಕೃತ್ಯವೊಂದು ನಡೆದಿದ್ದು, 3ನೇ ಮಹಡಿಯಿಂದ 7 ವರ್ಷದ ಮಗುವನ್ನ ನೂಕಿ ಮಲತಾಯಿ ಕೊಲೆ ಮಾಡಿರುವ ಘಟನೆ ಬೀದರ್ ನಗರದ ಆದರ್ಶ ಕಾಲೋನಿಯಲ್ಲಿ ನಡೆದಿದೆ.
ಆಗಸ್ಟ್27ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶಾನವಿ ಮೃತ ಬಾಲಕಿ. ಆಗಸ್ಟ್ 27ರಂದು ಶಾನವಿ ಮೃತಪಟ್ಟಾಗ ಮಹಡಿಯಿಂದ ಆಯತಪ್ಪಿ ಬಿದ್ದು ಮಗಳು ಜೀವ ಬಿಟ್ಟಿದ್ದಾಳೆ ಎಂದು ಕುಟುಂಬಸ್ಥರು ಅಂದುಕೊಂಡಿದ್ದರು. ಆದ್ರೆ ಪಕ್ಕದ ಮನೆಯವರು ಸಿಸಿಟಿವಿ ದೃಶ್ಯ ಕಳುಹಿಸಿದ ಬಳಿಕ ಮಲತಾಯಿ ಕೃತ್ಯ ಬೆಳಕಿಗೆ ಬಂದಿದೆ.
ಈ ಸಿಟಿಟಿವಿ ದೃಶ್ಯವನ್ನ ಸೆಪ್ಟೆಂಬರ್ 12ರಂದು ಬಾಲಕಿ ತಂದೆ ಸಿದ್ಧಾಂತ ವಾಟ್ಸಾಪ್ಗೆ ಪಕ್ಕದ ಮನೆ ಮಾಲೀಕ ಕಳುಹಿಸಿದ್ದಾರೆ. ಮೇಲ್ಮಹಡಿಯಲ್ಲಿ ಖುರ್ಚಿ ಇಟ್ಟು ಅದರ ಮೇಲೆ ಬುಟ್ಟಿ ಉಲ್ಟಾ ಇಟ್ಟು ಶಾನವಿಯನ್ನ ಕೂರಿಸಿರೊದು ಪತ್ತೆಯಾಗಿದೆ. ಸಿಸಿಟಿವಿ ದೃಶ್ಯ ಆಧರಿಸಿ ಮೃತ ಬಾಲಕಿ ಅಜ್ಜಿ, ರಾಧಾ ವಿರುದ್ಧ ದೂರು ನೀಡಿದ್ದು, ಈ ದೂರು ದಾಖಲಿಸಿಕೊಂಡು ಪೊಲೀಸರು ಆರೋಪಿ ರಾಧಾಳನ್ನು ಬಂಧಿಸಿದ್ದಾರೆ.
ಮೃತ ಶಾನವಿ ತಾಯಿ ಖಾಯಿಲೆಗೆ ತುತ್ತಾಗಿ ಕಳೆದ 6 ವರ್ಷಗಳ ಹಿಂದೆಯೇ ಸಾವನ್ನಪ್ಪಿದ್ದಳು. ಮೃತ ಶಾನವಿ ತಂದೆ ಸಿದ್ಧಾಂತ 2023ರಲ್ಲಿ ರಾಧಾ ಜೊತೆ 2ನೇ ವಿವಾಹವಾಗಿದ್ದರು.