ತುಮಕೂರು : ಸೆಲ್ಫಿ ಹುಚ್ಚಾಟಕ್ಕೆ ಅನೇಕರು ತಮ್ಮ ಜೀವಕ್ಕೆ ಆಪತ್ತು ತಂದುಕೊಂಡಿದ್ದು ಉಂಟು ಹಾಗೂ ಪ್ರಾಣವನ್ನು ಕೂಡ ಕಳೆದುಕೊಂಡಿದ್ದು ಉಂಟು. ಇದೀಗ ಅಂತದ್ದೇ ಸೆಲ್ಫಿ ಕ್ರೇಜಿಗೆ ರಾಜ್ಯದಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು ತುಮಕೂರಿನಲ್ಲಿ ಕೆರೆ ಕೋಡಿಗೆ ಬಿದ್ದ ಯುವತಿಯು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಹೌದು ತುಮಕೂರಿನ ಗುಬ್ಬಿ ತಾಲೂಕಿನ ಶಿವಪುರದ ಸೋಮನಾಥ್ ಎಂಬುವವರ ಪುತ್ರಿ ಹಂಸ ಸ್ನೇಹಿತರೊಂದಿಗೆ ಮೈದಾಳ ಕೆರೆ ನೋಡಲು ತೆರಳಿದ್ದರು. ಈ ವೇಳೆ ಕೋಡಿಯಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿ ಬಿದ್ದಿದ್ದರು. ನೀರಿನಲ್ಲಿ ಜಾರಿ ಕಲ್ಲಿನ ಪೊಟರೆಯಲ್ಲಿ ಸಿಲುಕಿದ್ದರು.
ಮಂದಾರಗಿರಿ ಬೆಟ್ಟದ ತಪ್ಪಲಿನಲ್ಲಿರುವ ಮೈದಾಳ ಕೆರೆ ಕೋಡಿಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋದ ವಿದ್ಯಾರ್ಥಿನಿ ಹಂಸ (20) ಕೆಳಕ್ಕೆ ಬಿದ್ದು ಕಾಣೆಯಾಗಿದ್ದಳು. ಸಂಜೆಯಾದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅಪಾಯಕ್ಕೆ ಸಿಲುಕಿರುವ ಸಾಧ್ಯತೆಯಿದೆ ಎನ್ನಲಾಗಿತ್ತು.
ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿ ನಿನ್ನೆ ಸಂಜೆಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದರು. ರಾತ್ರಿಯಾದರೂ ಆಕೆ ಪತ್ತೆಯಾಗಲಿಲ್ಲ. ಕೆರೆ ಕೋಡಿ ನೀರನ್ನು ಬೇರೆಡೆಗೆ ಡೈವರ್ಟ್ ಮಾಡಿ ಕಾರ್ಯಾಚರಣೆ ಆರಂಭಿಸಿದ್ದರು. ಸತತ 12 ಗಂಟೆಗಳ ಕಾರ್ಯಾಚರಣೆ ಬಳಿಕ ಕೊನೆಗೂ ಹಂಸ ಬದುಕುಳಿದಿದ್ದಾಳೆ