ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ನೀರು ಕೇಳುವ ನೆಪದಲ್ಲಿ ಮನೆಗೆ ಮಹಿಳೆಯ ಕತ್ತು ಸೀಳಿ ಕೊಲೆ ಮಾಡಿ ಆಕೆಯ ಮೈಮೇಲಿದ್ದ ಚಿನ್ನಾಭರಣ ದೋಚಿರುವ ಆಘಾತಕಾರಿ ಘಟನೆ ನೆಲಮಂಗಲದ ಪೇಟೆ ಬೀದಿಯಲ್ಲಿ ನಡೆದಿದೆ.
ಶೋಭಾ (60) ಮೃತ ಮಹಿಳೆಯಾಗಿದ್ದು, ಬರ್ಬರವಾಗಿ ಕೊಲೆಯಾಗಿರುವ ಮಹಿಳೆ ಶೋಭಾ ನೆಲಮಂಗಲದ ಪೇಟೆ ಬೀದಿಯಲ್ಲಿ ತಮ್ಮ ಪತಿಯೊಂದಿಗೆ ವಾಸವಾಗಿದ್ದರು. ಈ ದಂಪತಿಗೆ ಮಕ್ಕಳಿರಲಿಲ್ಲ. ಪತಿಯೂ 12 ವರ್ಷಗಳ ಹಿಂದೆ ಬ್ರೈನ್ ಸ್ಟ್ರೋಕ್ ಆಗಿ ಹಾಸಿಗೆ ಹಿಡಿದ್ದ ಕಾರಣ ಇವರೇ ಮನೆಗೆ ಆಧಾರವಾಗಿದ್ದರು.
ಮನೆಯಲ್ಲಿ ವೃದ್ಧ ದಂಪತಿ ಮಾತ್ರ ಇರುವುದನ್ನು ಗಮಿನಿಸಿದ್ದ ದರೋಡೆಕೋರರು ವೃದ್ಧೆಯ ಚಿನ್ನಾಭರಣದ ಮೇಲೆ ಕಣ್ಣು ಹಾಕಿದ್ದರು. ಬುಧವಾರ (ಫೆ.18) ಸಂಜೆ ಮನೆಗೆ ನುಗ್ಗಿ ವೃದ್ಧೆಯ ಕತ್ತು ಹಿಸುಕಿ ತಲೆಗೆ ಹೊಡೆದು ಕೊಲೆ ಮಾಡಿ, ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಚಿನ್ನಾಭರಣ ದೋಚಿರುವ ಶಂಕೆಯನ್ನ ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ನೆಲಮಂಗಲ ಟೌನ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಶ್ವಾನದಳ ಆಗಮಿಸಿದೆ. ದರೋಡೆ ಬಗ್ಗೆ ಮಾಹಿತಿ ಸಂಗ್ರಹಿಸಲು ಪೊಲೀಸರು ಅಕ್ಕಪಕ್ಕದ ಮನೆಯ ಸಿಸಿಟಿವಿಯನ್ನ ಪರಿಶೀಲನೆ ನಡೆಸುತ್ತಿದ್ದಾರೆ.








