ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು,ದುಷ್ಕರ್ಮಿಗಳು 15 ವರ್ಷದ ಬಾಲಕಿಯನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಬೋಳಾರೆ ಗ್ರಾಮದ ಬಳಿ ಕವನ ಎಂಬ 15 ವರ್ಷದ ಬಾಲಕಿಯನ್ನು ಕತ್ತು ಕಿಸುಕಿ ಕೊಲೆ ಮಾಡಲಾಗಿದೆ. ನಿನ್ನೆ ಮಧ್ಯಾಹ್ನ ಬಹಿರ್ದೆಸೆಗೆ ಹೋಗಿದ್ದ ಬಾಲಕಿ ಸಂಜೆಯಾದರೂ ವಾಪಸ್ ಬಂದಿರಲಿಲ್ಲ. ನಂತರ ಹುಡುಕಾಡಿದಾಗ ಬಾಲಕಿಯ ಮೃತದೇಹ ಪತ್ತೆಯಾಗಿದೆ. ತಾಯಿ ಇಲ್ಲದ ಬಾಲಕಿ ಕವನ ಸಾವಿತ್ರಮ್ಮ ಎಂಬುವವರ ಜೊತೆ ವಾಸವಾಗಿದ್ದಳು. ಕವನ ತಂದೆ ಬೇರೆ ಕಡೆ ವಾಸವಾಗಿದ್ದರು.
ಬಾಲಕಿ ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








