ಕಲಬುರಗಿ : ರಾಜ್ಯದಲ್ಲಿ ಹೃದಯಾಘಾರದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು ನಿನ್ನೆ ತಾನೇ ಹೃದಯಾಘಾತಕೆ ಓರ್ವ ಬಾಲಕ ಸೇರಿದಂತೆ ಒಟ್ಟು ಎಂಟು ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಇದೀಗ ಕಲ್ಬುರ್ಗಿಯಲ್ಲಿ ಹೃದಯಘಾತಕ್ಕೆ ಕಾಲೇಜು ಉಪ ಪ್ರಾಂಶುಪಾಲರು ಒಬ್ಬರು ಸಾವನ್ನಪ್ಪಿದ್ದಾರೆ.
ಹೌದು ಕಲ್ಬುರ್ಗಿಯಲ್ಲಿ ಹೃದಯಾಘಾತದಿಂದ ಉಪರಂಶುಪಾಲ ಸಾವನ್ನಪ್ಪಿದ್ದಾರೆ. ಕಲಬುರ್ಗಿಯ ಬಿದ್ದಾಪುರ ಕಾಲೋನಿಯ ಗುರುಬಸಯ್ಯ ಸಾಲಿಮಠ್ (53) ಎನ್ನುವವರು ಸಾವನಪ್ಪಿದ್ದಾರೆ ಕಲಬುರ್ಗಿ ನಗರದಲ್ಲಿ ಖಾಸಗಿ ಪದವಿ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಗುರುಬಸಯ್ಯ ಸೇವೆ ಸಲ್ಲಿಸುತ್ತಿದ್ದರು . ವಾಕಿ ಮುಗಿಸಿ ಮನೆಯಲ್ಲಿ ನೀರು ಕುಡಿದು ಕುರ್ಬಸಯ್ಯ ಕುಳಿತಿದ್ದಾಗ ತೀವ್ರ ಹೃದಯಾಘಾತ ಸಂಭವಿಸಿ ಸಾವನಪ್ಪಿದ್ದಾರೆ.
ನಿನ್ನೆ ಮಧ್ಯಾಹ್ನ ಕಾಲೇಜಿನಲ್ಲಿದ್ದಾಗಲೇ ಗುರುಬಸಯ್ಯ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಆದರೆ ಅವರು ಯಾವುದೇ ಚಕಪ್ ಮಾಡಿಸಿಕೊಳ್ಳಲಿಲ್ಲ. ಆದರೆ ಇಂದು ಬೆಳಿಗ್ಗೆ ವಾಕಿಂಗ್ ಮುಗಿಸಿ ಮನೆಗೆ ಬಂದು ನೀರು ಕುಡಿದು ಕುಳಿತುಕೊಂಡಾಗಲೇ ಏಕಾಏಕಿ ಹೃದಯಘಾತದಿಂದ ಸಾವನಪ್ಪಿದ್ದಾರೆ.