ಉಡುಪಿ : ರಾಜ್ಯದಲ್ಲಿ ಹೃದಯಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಯಕ್ಷಗಾನ ವೇಷಧಾರಿ ಈಶ್ವರ ಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಈಶ್ವರ ಗೌಡ ಮಂದಾರ್ತಿ ಮೇಳದ ಕಲಾವಿದರಾಗಿದ್ದರು. ಮಂದಾರ್ತಿ ಎರಡನೇ ಮೇಳದಲ್ಲಿ ಮಹಿಷಾಸುರ ಪಾತ್ರ ಮಾಡುತ್ತಿದ್ದರು. ರಾತ್ರಿ ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಅಸ್ವಸ್ಥರಾಗಿದ್ದರು. ಆಸ್ಪತ್ರೆಗೆ ದಾಖಲಿಸುವ ವೇಳೆ ಕೊನೆಯುಸಿರೆಳೆದಿದ್ದಾರೆ. ಈಶ್ವರ ಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ.








