ಚಿಕ್ಕಬಳ್ಳಾಪುರ : ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ಮಗನ ಮೇಲೆ ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಲಾಗಿತ್ತು. ಈ ವಿಚಾರ ತಿಳಿದು ಅಲ್ಲಿಗೆ ಒಳಗಾದ ಯುವಕನ ತಾಯಿಯೊಬ್ಬರು ಹೃದಯಘಾತದಿಂದ ಸಾವನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕೋರೆನಹಳ್ಳಿ ಎಂಬಲ್ಲಿ ನಡೆದಿದೆ.
ಹೌದು ಜಮೀನು ವಿವಾದ ಸಂಬಂಧ ಯುವಕನ ಮೇಲೆ ಹಲ್ಲೆನಡೆಸಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕೋರಿನಹಳ್ಳಿ ನಡೆದಿತ್ತು, ಕೊಲೆ ಆರೋಪಿ ಶಿವಣ್ಣ ಅಲಿಯಾಸ್ ಶಿವಶಂಕರ ರೆಡ್ಡಿ ಅರೆಸ್ಟ್ ಆಗಿದ್ದಾನೆ. ಪೇರೆಸಂದ್ರ ಠಾಣೆಯ ಪೊಲೀಸರಿಂದ ಆರೋಪಿ ಶಿವಣ್ಣ ಬಂಧನವಾಗಿದೆ.
ಜಮೀನು ವಿವಾದ ಸಂಬಂಧ ಯುವಕ ನವೀನ್ ಎನ್ನುವವನ ಮೇಲೆ ಮಚ್ಚಿನಿಂದ ಆರೋಪಿ ಶಿವಣ್ಣ ಅಲಿಯಾಸ್ ಶಿವಶಂಕರ ದಾಳಿ ನಡೆಸಿದ್ದ. ಮಗನ ಮೇಲಿನ ದಾಳಿ ವಿಚಾರ ಕೇಳಿ ನವೀನ್ ತಾಯಿ ಯಶೋದಮ್ಮ ಮೃತಪಟ್ಟಿದ್ದರು. ಸದ್ಯ ಆರೋಪಿ ಶಿವಣ್ಣನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.