ಬೆಳಗಾವಿ : ಬೆಳಗಾವಿ ತಾಲ್ಲೂಕಿನ ಅಂಬೇವಾಡಿ ಗ್ರಾಮದಲ್ಲಿ ರೈತ ಯಲ್ಲಪ್ಪದ ಗುರವ್ ಕೃಷಿ ಕೆಲಸದಲ್ಲಿ ತೊಡಗಿದ್ದಾಗ, ಎಡಗೈ ಹೆಬ್ಬೆರಳಿಗೆ ಹಾವಿನ ಮರಿ ಕಚ್ಚಿದ್ದು, ಕೂಡಲೇ ಪ್ಲಾಸ್ಟಿಕ್ ಬಾಟ್ಲಿಯಲ್ಲಿ ಹಾವು ಹಾಕಿಕೊಂಡು, ಅದರ ಸಮೇತ ಜಿಲ್ಲಾಸ್ಪತ್ರೆಗೆ ಬಂದ ದಾಖಲಾಗಿರುವ ಘಟನೆ ನಡೆದಿದೆ.
ಹೌದು, ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ರೈತನಿಗೆ ಹಾವು ಕಚ್ಚಿದ್ದು, ಹಾವಿನ ಸಮೇತವೇ ರೈತ ಆಸ್ಪತ್ರೆಗೆ ಬಂದು ದಾಖಲಾದ ಘಟನೆ ಮಂಗಳವಾರ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಯಲ್ಲಪ್ಪ ಗುರವ ಅವರಿಗೆ ಹಾವು ಕಚ್ಚಿದೆ. ಬಳಿಕ ಕಚ್ಚಿದ ಹಾವಿನ ಸಮೇತ ರೈತ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರಿಗೆ ಹಾವನ್ನು ತೋರಿಸಿ, ಇದೇ ಹಾವು ಕಚ್ಚಿದೆ, ಚಿಕಿತ್ಸೆ ಕೊಡಿ ಎಂದು ತಿಳಿಸಿದ್ದಾನೆ. ಕೊಳಕು ಮಂಡಲ ಹಾವು ಕಡಿದ ಹಿನ್ನೆಲೆಯಲ್ಲಿ ಸ್ಥಿತಿ ಗಂಭೀರವಾಗಿದ್ದು, ತುರ್ತು ಘಟಕದಲ್ಲಿ ರೈತನಿಗೆ ಚಿಕಿತ್ಸೆ ನೀಡಲಾಗುತ್ತಿದೆ.