ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, : ಮೊಬೈಲ್ ರಿಚಾರ್ಜ್ ಮಾಡಿಲ್ಲವೆಂದು ಟೆರೇಸ್ ಮೇಲಿಂದ ಜಿಗಿದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಟೆರೇಸ್ ಮೇಲಿಂದ ಜಿಗಿದು ಶಿಖಾ ದೇವಿ (28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಘಟನೆ ನಡೆದಿದೆ.
ಅಕ್ಟೋಬರ್ 12ರ ಸಂಜೆ 5.30ರ ಸುಮಾರಿಗೆ ಶಿಖಾ ದೇವಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉತ್ತರ ಪ್ರದೇಶ ಮೂಲದ ಶಿಖಾಗೆ 2019ರಲ್ಲಿ ಮದುವೆ ಆಗಿತ್ತು.
ಉತ್ತರ ಪ್ರದೇಶದ ವಿನೋದ್ ಕುಮಾರ್ ಜೊತೆಗೆ ಮದುವೆಯಾಗಿತ್ತು. ಎರಡು ವರ್ಷದ ಹಿಂದೆ ಪತಿ ಜೊತೆಗೆ ಬೆಂಗಳೂರಿಗೆ ಬಂದಿದ್ದ ಶಿಖಾ ದೇವಿ ಕೆಂಗೇರಿಯ ಗೇರುಪಾಳ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪತಿ ಜೊತೆಗೆ ಮೊಬೈಲ್ ರಿಚಾರ್ಜ್ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದರು. ರಿಚಾರ್ಜ್ ಮಾಡಿಲ್ಲವೆಂದು ಮನೆಯ ಟೆರೇಸ್ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಖಾ ತಂದೆ ಅನಿಲ್ ಕುಮಾರ್ ನೀಡಿದ ದೂರಿನ ಅನ್ವಯ ಕುಂಬಲಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.