ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಬಂಧಿಸಿದ್ದು, ವಿದ್ಯುತ್ ಸ್ಪರ್ಶಿಸಿ ದಂಪತಿ ಸಾವನ್ನಪ್ಪಿದ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕಪ್ಪಗಳಲೆ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಪತ್ನಿ ಒದ್ದಾಡುವುದನ್ನು ನೋಡಿದ ಪತಿ ರಕ್ಷಿಸಲು ಮುಂದಾಗಿದ್ದು, ಈ ವೇಳೆ ಇಬ್ಬರೂ ವಿದ್ಯುತ್ ಶಾಕ್ ನಿಂದ ಸಾವನ್ನಪ್ಪಿದ್ದಾರೆ.
ಕಪಗಳಲೆ ಗ್ರಾಮದ ಕೃಷ್ಣಪ್ಪ(55), ಅವರ ಪತ್ನಿ ವಿನೋದಾ(42) ಮೃತಪಟ್ಟವರು. ಮನೆಯ ಹೊರಗೆ ಬಟ್ಟೆ ಒಣಗಿಸಲು ಕಟ್ಟಿದ್ದ ಕಬ್ಬಿಣದ ತಂತಿಯ ಮೇಲೆ ಬಟ್ಟೆ ಹಾಕಲು ಹೋಗಿದ್ದಾಗ ಆ ತಂತಿಯಲ್ಲಿ ವಿದ್ಯುತ್ ಪ್ರವಹಿಸಿ ವಿನೋದಾ ಅವರಿಗೆ ತಗುಲಿದೆ. ಅವರನ್ನು ರಕ್ಷಿಸಲು ಹೋದ ಕೃಷ್ಣಪ್ಪ ಕೂಡ ಪತ್ನಿಯೊಂದಿಗೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ದಂಪತಿಗೆ ಇಬ್ಬರು ಪುತ್ರಿಯರು ಹಾಗೂ ಪುತ್ರ ಇದ್ದಾರೆ. ಸೊರಬ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.