ಕೊಪ್ಪಳ : ದಲಿತ ಯುವಕನಿಗೆ ಹೇರ್ ಕಟ್ ಮಾಡಲು ನಿರಾಕರಿಸಿ ಆತನನ್ನು ಕತ್ತರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ನಡೆದಿದೆ.
ಸಂಗನಾಳ ಗ್ರಾಮದ ಯಮನೂರಪ್ಪ ಈರಪ್ಪ ಬಂಡಿಹಾಳ (23) ಎಂಬ ಯುವಕ ಸಲೂನಿಗೆ ಹೇರ್ ಕಟ್ ಮಾಡಲು ತೆರಳಿದ್ದ. ಈ ವೇಳೆ ದಲಿತ ಎಂಬ ಕಾರಣಕ್ಕೆ ಹೇರ್ ಕಟ್ ಮಾಡಲು ನಿರಾಕರಿಸಿ ಕತ್ತರಿಯಿಂದ ಇರಿದು ಮುದುಕಪ್ಪ ಅಂದಪ್ಪ ಹಡಪದ ಹತ್ಯೆ ಮಾಡಿದ್ದಾನೆ.
ಘಟನೆ ಸಂಬಂಧ ಮೃತ ಯುವಕ ಯಮನೂರಪ್ಪ ಸಹೋದರ ಹನುಮಂತಪ್ಪ ಯಲುಬುರ್ಗಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿ ಮುದಕಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.