SHOCKING : ಶಿವಮೊಗ್ಗದಲ್ಲಿ ವಾಲಿಬಾಲ್ ತರಬೇತಿ ವೇಳೆ ಕುಸಿದು ಬಿದ್ದು ಶಾಲಾ ಶಿಕ್ಷಕ ಸಾವು!
ಶಿವಮೊಗ್ಗ : ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದಾಗ ಶಾಲೆ ಆವರಣದಲ್ಲಿಯೇ ಕುಸಿದು ಬಿದ್ದು ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಗಜಾನನ ಹಿರೇಮಠ್ (46)ಮೃತ ಶಿಕ್ಷಕ. ಇವರು ಸಾಗರ ಪಟ್ಟಣದ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇಂದು ಮಧ್ಯಾಹ್ನ ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದರು ಎಂದು ತಿಳಿದುಬಂದಿದೆ.ಈ ವೇಳೆ ಶಿಕ್ಷಕ ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ಥಳದಲ್ಲಿದ್ದವರು ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಅವರನ್ನು ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
Copy and paste this URL into your WordPress site to embed
Copy and paste this code into your site to embed