ಕಲಬುರ್ಗಿ : ಉಚಿತ ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಪಂಚ ಗ್ಯಾರಂಟಿಗಳಲ್ಲಿ ಗೃಹಜೋತಿ ಕೂಡ ಒಂದು ಪ್ರತಿ ಮನೆಗೂ ಕೂಡ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಕೊಡುವುದಾಗಿ ಹೇಳಿತ್ತು. ಆದರೆ ಇದೀಗ ಈ ಒಂದು ಗ್ರಾಮದಲ್ಲಿ ಕರೆಂಟ್ ಬಿಲ್ ನೋಡಿಯೇ ಗ್ರಾಮಸ್ಥರು ಶಾಕ್ ಗೆ ಒಳಗಾಗಿದ್ದಾರೆ.
ಹೌದು ಜೆಸ್ಕಾಂ ಕೊಟ್ಟ ಶಾಕ್ನಿಂದ ಕಲಬುರಗಿ ತಾಲೂಕಿನ ಕುಸನೂರು ಗ್ರಾಮಸ್ಥರು ಕಂಗಲಾಗಿದ್ದಾರೆ. ಸರ್ಕಾರದ ಗೃಹಜ್ಯೋತಿ ಯೋಜನೆಯಡಿ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ಪಡೆದು ತಿಂಗಳಿಗೆ 100 ರಿಂದ 200 ರೂ. ಬಿಲ್ ಪಡೆಯುತ್ತಿದ್ದ ಕೂಸನೂರು ಗ್ರಾಮಸ್ಥರು, ಈ ತಿಂಗಳು ಬರೊಬ್ಬರಿ 18 ಸಾವಿರ, 20 ಸಾವಿರ, 49 ಸಾವಿರದಂತೆ ಅಡ್ಡಾದಿಡ್ಡಿ ಬಿಲ್ ನೋಡಿ ಕಂಗಾಲಾಗಿದ್ದಾರೆ.
ಈ ವೇಳೆ ಗ್ರಾಮಕ್ಕೆ ಜೆಸ್ಕಾಂ ಎಇಇ ಭೇಟಿ ನೀಡಿದಾಗ ಅವರನ್ನು ತರಾಟೆಗೆ ತೆಗೆದುಕೊಂಡು, ಬಾಡಿಗೆ ಮನೆಯಲ್ಲಿದ್ದವರಿಗೂ 28 ಸಾವಿರ ಬಿಲ್ ಬಂದಿದೆ. ಎಲ್ಲಿಂದ ಕಟ್ಟಬೇಕು ಎಂದು ಗಲಾಟೆ ಮಾಡಿದರು. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಜೆಸ್ಕಾಂ ಎಇಇ ಸುನೀಲ್ ಕುಮಾರ್, ಮೀಟರ್ ರೀಡರ್ ಮಾಡಿದ ಎಡವಟ್ಟಿನಿಂದ ಹಿಗೇ ಬಿಲ್ ಹೆಚ್ಚಿಗೆ ಬಂದಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೇ ಜನ ಆತಂಕಕ್ಕೆ ಒಳಗಾಗಬಾರದೆಂದು ಮನವಿ ಮಾಡಿದ್ದಾರೆ.