ಹಾವೇರಿ: ಸಾಲ ವಸೂಲಾತಿಯ ಹೆಸರಿನಲ್ಲಿ ಗರ್ಭಿಣಿಯೊಬ್ಬರ ಮೇಲೆ ಕಿರಾತಕರು ನಡೆಸಿದ ಹಲ್ಲೆಯಿಂದಾಗಿ, ಹೊಟ್ಟೆಯಲ್ಲಿದ್ದ ಅವಳಿ ಮಕ್ಕಳು ಅಕಾಲಿಕವಾಗಿ ಜನಿಸಿ ಮೃತಪಟ್ಟಿರುವ ದಾರುಣ ಘಟನೆ ಸವಣೂರು ತಾಲ್ಲೂಕಿನ ಅಲ್ಲಿಪುರ ಗ್ರಾಮದಲ್ಲಿ ನಡೆದಿದೆ.
ಘಟನೆಯ ಹಿನ್ನೆಲೆ:
ಮಾರ್ಚ್ 28ರಂದು ಸಾಲದ ಹಣ ವಾಪಸ್ ಕೇಳುವ ನೆಪದಲ್ಲಿ ಆರೋಪಿಗಳು ಪವಿತ್ರಾ ಲಮಾಣಿ ಎಂಬುವವರ ಮನೆಗೆ ನುಗ್ಗಿದ್ದರು. ಈ ವೇಳೆ ವಾಗ್ವಾದ ನಡೆಸಿ, ಗರ್ಭಿಣಿ ಪವಿತ್ರಾ ಅವರ ಹೊಟ್ಟೆಗೆ ಬಲವಾಗಿ ಒದ್ದು ಹಲ್ಲೆ ನಡೆಸಲಾಗಿತ್ತು ಎನ್ನಲಾಗಿದೆ. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಪವಿತ್ರಾ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ದುರಂತ ಅಂತ್ಯ:
ಹಲ್ಲೆಯ ಪರಿಣಾಮವಾಗಿ ಹೊಟ್ಟೆಯಲ್ಲಿದ್ದ ಶಿಶುಗಳಿಗೆ ತೀವ್ರ ಪೆಟ್ಟು ಬಿದ್ದಿತ್ತು. ಪರಿಣಾಮವಾಗಿ ಏಪ್ರಿಲ್ 7ರಂದು ಪವಿತ್ರಾ ಅವರಿಗೆ ಅವಧಿಗೂ ಮುನ್ನವೇ ಹೆರಿಗೆಯಾಗಿದೆ. ಜನಿಸಿದ ಕೆಲವೇ ಗಂಟೆಗಳಲ್ಲಿ ಎರಡೂ ಅವಳಿ ಶಿಶುಗಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿವೆ.
ಪೊಲೀಸ್ ಕ್ರಮ:
ಈ ಅಮಾನವೀಯ ಕೃತ್ಯಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ತಾಯಿ ಹಾಲವ್ವ ಲಮಾಣಿ ಅವರು ಸವಣೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹಲ್ಲೆ ನಡೆಸಿದ ಆರೋಪದ ಮೇಲೆ ಅಲ್ಲಿಪುರ ಗ್ರಾಮದ ಸುರೇಶ ಹಾಲಪ್ಪ ಲಮಾಣಿ, ಪರಶುರಾಮ ಹಾಲಪ್ಪ ಲಮಾಣಿ, ಮಹೇಶ ಸೋಮಲೆಪ್ಪ ಲಮಾಣಿ, ಸಕ್ಕುಬಾಯಿ ಸುರೇಶ ಲಮಾಣಿ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ:








