ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ಬೆಂಗಳೂರು ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಹೆತ್ತ ತಾಯಿರನ್ನೇ ಪಾಪಿ ಪುತ್ರರು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಹತ್ಯ ನಡೆದಿದ್ದು, ಮಗನೊಬ್ಬ ತನ್ನ ಹೆತ್ತ ತಾಯಿಯ ಕತ್ತು ಸೀಳಿ ಕೊಲೆ ಮಾಡಿದ ಘಟನೆ ನಡೆದಿದೆ.
ಬೆಂಗಳೂರಿನಲ್ಲಿ ಹೆತ್ತ ತಾಯಿಯನ್ನೇ ಕತ್ತು ಸೀಳಿ ಕೊಂದು ಪಾಪಿ ಪುತ್ರ.!
ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಜಾಲಮಂಗಲದಲ್ಲಿ ಸ್ವಂತ ಮಗನೇ ತಾಯಿಯನ್ನು ಕೊಲೆ ಮಾಡಿದ್ದಾನೆ. ಕೊಲೆಯಾದ ಮಹಿಳೆಯನ್ನು ಸರೋಜಮ್ಮ (60) ಎಂದು ಗುರುತಿಸಲಾಗಿದೆ. ಅನಿಲ್ (36) ತಾಯಿಯನ್ನೇ ಕೊಂದ ಮಗ.
ಜಮೀನು ಮಾರಾಟ ಮಾಡಿದ ಹಣ ಕೊಡಲಿಲ್ಲ ಎಂದು ತಾಯಿಯಾದ ಸರೋಜಮ್ಮಳ ಕತ್ತು ಕೊಯ್ದಿದ್ದಾನೆ. ತೀವ್ರ ರಕ್ತಸ್ರಾವದಿಂದ ಕುಸಿದು ಬಿದ್ದ ಸರೋಜಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಾಗಲಕೋಟೆಯಲ್ಲಿ ಕುಡಿಯಲು ಹಣ ಕೊಡಲಿಲ್ಲವೆಂದು ಹೆತ್ತ ತಾಯಿಯನ್ನೇ ಕೊಂದ ಮಗ.!
ಮದ್ಯ ಕುಡಿಯಲು ಹಣ ಕೊಡಲಿಲ್ಲ ಎಂದು ಹೆತ್ತ ತಾಯಿಯನ್ನೇ ಕೈಕಾಲು ಕಟ್ಟಿ ಬಾಯಿಗೆ ಬಟ್ಟೆ ತುರುಕಿ ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ಬಾಗಲಕೋಟೆ ತಾಲೂಕಿನ ತುಳಸಿಗೇರಿ ಗ್ರಾಮದಲ್ಲಿ ನಡೆದಿದೆ.
28 ವರ್ಷದ ವೆಂಕಟೇಶ್ ಗಿರಿಸಾಗರ ಎಂಬ ಪಾಪಿ ಮಗ ತನ್ನ ತಾಯಿ ಶಾವಕ್ಕ ಗಿರಿಸಾಗರ (58) ಅವರ ಕೈಕಾಲು ಕಟ್ಟಿ ಬಾಯಲ್ಲಿ ಬಟ್ಟೆ ತುರುಕಿ, ಕುತ್ತಿಗೆ ಕೊಯ್ದು ಕೊಲೆ ಮಾಡಿ ಬಳಿಕ ಪರಾರಿಯಾಗಿದ್ದಾನೆ.
ಕುಡಿಯಲು ಹಣ ಕೊಡದ ತಾಯಿ ಶಾವಕ್ಕಳ ಕೈಕಾಲು ಕಟ್ಟಿ ಬಾಯಲ್ಲಿ ಬಟ್ಟೆ ತುರುಕಿ, ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಸಂಜೆಯಾದರೂ ಶಾವಕ್ಕ ಕಾಣಿಸದಿದ್ದಾಗ ಅಕ್ಕಪಕ್ಕದವರು ಇಣುಕಿ ನೋಡಿದ್ದಾರೆ. ರಕ್ತದ ಮಡುವಿನಲ್ಲಿ ಶವವಾಗಿ ಬಿದ್ದಿರುವುದು ಗೊತ್ತಾಗಿದೆ. ಕೂಡಲೇ ಕಲಾದಗಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ವೆಂಕಟೇಶನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.