ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ಮಹಿಳೆಯೊಬ್ಬಳು ತನ್ನ ಪತಿ ತಲೆ ಮೇಲೆ ಕಾದ ಎಣ್ಣೆ ಸುರಿದು ಕೊಲೆಗೆ ಯತ್ನಿಸಿದ್ದಾಳೆ.
ಬೆಳಗಾವಿ ತಾಲೂಕಿನ ಮಚ್ಚಿ ಗ್ರಾಮದ ರಾಮನಗರದಲ್ಲಿ ಪತ್ನಿ ತನ್ನ ಪತಿ ಮೇಲೆ ಕಾದ ಎಣ್ಣೆ ಸುರಿದು ಕೊಲೆಗೆ ಯತ್ನಿಸಿದ್ದಾಳೆ. ವೈಶಾಲಿ ಎಂಬ ಮಹಿಳೆ ತನ್ನ ಪತಿ ಸುಭಾಷ್ ಪಾಟೀಲ್ (55) ಕೊಲೆಗೆ ಯತ್ನಿಸಿದ್ದಾಳೆ. ಗಂಭೀರವಾಗಿ ಗಾಯಗೊಂಡ ಸುಭಾಷ್ ಗೆ ಬಿಮ್ಸ್ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪತಿ ಬೇರೆ ಮಹಿಳೆ ಜೊತೆಗೆ ಸಂಬಂಧ ಇಟ್ಟುಕೊಂಡಿದ್ದಾನೆ ಎಂದು ಕೊಲೆಗೆ ಯತ್ನಿಸಿದ್ದಾಳೆ. 20 ವರ್ಷದಿಂದ ಸಿಲಿಂಡರ್ ಸಪ್ಲೈಯರ್ ಆಗಿ ಸುಭಾಷ್ ಕೆಲಸ ಮಾಡುತ್ತಿದ್ದಾರೆ. ಕೆಲಸ ಮುಗಿಸಿ ಮನೆಗೆ ಬಂದು ಕುಳಿತಿದ್ದಾಗ ಪತ್ನಿ ಈ ಕೃತ್ಯ ಎಸಗಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.