ಶಿವಮೊಗ್ಗ : ಇತ್ತೀಚೆಗೆ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈ ನಡುವೆ ತೀರ್ಥಹಳ್ಳಿ ತಾಲೂಕು ದಂಡಾಧಿಕಾರಿಗಳಾದ ಜಕ್ಕಣ್ಣ ಗೌಡರ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕೋರ್ಟ್ ಕೆಲಸದ ನಿಮಿತ್ತವಾಗಿ ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿನ ನರ್ತಕಿ ಚಿತ್ರಮಂದಿರ ಎದುರು ಇರುವ ವೈಭವ ಲಾಡ್ಜ್ ನಲ್ಲಿ ತಂಗಿದ್ದರು. ಬುಧವಾರ ರಾತ್ರಿ 10 ಗಂಟೆಯ ಸಮಯದಲ್ಲಿ ತೀವ್ರ ತರದ ಎದೆ ನೋವು ಕಂಡು ಬಂದಿದ್ದು ಹೃದಯಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು, ಹೈಕೋರ್ಟ್ ಕೆಲಸದ ನಿಮಿತ್ತ ಮಂಗಳವಾರ ಬೆಂಗಳೂರಿಗೆ ತೆರಳಿದ್ದರು. ಆದರೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತಪಟ್ಟಿರುವ ವಿಷಯವನ್ನು ಶಿವಮೊಗ್ಗ ಜಿಲ್ಲಾಧಿಕಾರಿಗಳು ದೃಡಪಡಿಸಿದ್ದಾರೆ. ತೀರ್ಥಹಳ್ಳಿ ಪೊಲೀಸರು ಬೆಂಗಳೂರು ಪೊಲೀಸರನ್ನು ಸಂಪರ್ಕಿಸಿದ್ದು, ಉಪ್ಪಾರಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಠಡಿ ಬಾಗಿಲು ತೆರೆದಾಗ ಜಕ್ಕಣ್ಣಗೌಡರ್ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಸದ್ಯ ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದ್ದು, ಮರಣೋತ್ತರ ಪರೀಕ್ಷೆ ನಂತರ ಕುಟುಂಬದವರಿಗೆ ಹಸ್ತಾಂತರ ಮಾಡಲಾಗುವುದು. ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.