Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬರ್ತ್‌ಡೇ ಗಿಫ್ಟ್ ಅಂದ್ರೆ ಇದು ! ಗೆಳತಿಯ 26ನೇ ಹುಟ್ಟುಹಬ್ಬಕ್ಕೆ ಯುವಕನಿಂದ 26 ಕಿ.ಮೀ ಓಟ!

15/01/2026 12:19 PM

BREAKING : ರೌಡಿ ರಾಜೀವ್ ಗೌಡನ ಮತ್ತಷ್ಟು ದಾದಾಗಿರಿ ಬಯಲು : ಶಿಡ್ಲಘಟ್ಟ ತಹಸೀಲ್ದಾರ್ ಗು ನಿಂದನೆ ಆರೋಪ

15/01/2026 12:19 PM

ಇರಾನ್‌ನಲ್ಲಿ ಹತ್ಯಾಕಾಂಡಕ್ಕೆ ಬ್ರೇಕ್? ‘ಸದ್ಯಕ್ಕೆ ಸುಮ್ಮನಿದ್ದೇವೆ, ಮುಂದೆ ನೋಡ್ತೀವಿ’ ಎಂದ ಟ್ರಂಪ್!

15/01/2026 12:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ರಾಜ್ಯದಲ್ಲಿ ಮುಂದುವರೆದ `ಹೃದಯಾಘಾತ’ ಸಾವಿನ ಸರಣಿ : ನಿನ್ನೆ ಒಂದೇ ದಿನ `ಹಾರ್ಟ್ ಅಟ್ಯಾಕ್’ಗೆ 5 ಮಂದಿ ಸಾವು.!
KARNATAKA

SHOCKING : ರಾಜ್ಯದಲ್ಲಿ ಮುಂದುವರೆದ `ಹೃದಯಾಘಾತ’ ಸಾವಿನ ಸರಣಿ : ನಿನ್ನೆ ಒಂದೇ ದಿನ `ಹಾರ್ಟ್ ಅಟ್ಯಾಕ್’ಗೆ 5 ಮಂದಿ ಸಾವು.!

By kannadanewsnow5716/07/2025 8:34 AM

ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತದ ಸಾವಿನ ಸರಣಿ ಮುಂದುವರಿದಿದೆ. ನಿನ್ನೆ ಒಂದೇ ದಿನ ರಾಜ್ಯದ ವಿವಿಧೆಡೆ ಐವರು ಸಾವನ್ನಪ್ಪಿದ್ದಾರೆ.

ಮಂಡ್ಯದಲ್ಲಿ ಹೃದಯಾಘಾತದಿಂದ ತೆಂಗಿನಕಾಯಿ ವ್ಯಾಪಾರಿ ಸಾವು

ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಂಗಬೋರನದೊಡ್ಡಿ ಗ್ರಾಮದ ತೆಂಗಿನ ಕಾಯಿ ವ್ಯಾಪಾರಿಯಾದ ರಾಜಣ್ಣ (ಲಿಂಗರಾಜು) ಅವರು ಸೋಮವಾರದಂದು ವೇಳೆಯಲ್ಲಿ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಸ್ಥಳೀಯ ಶ್ರೀ ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

KSRTC ನೌಕರ ಆರ್ಟ್ ಅಟ್ಯಾಕ್ ನಿಂದ ಸಾವು

ಕೋಲಾರ ಜಿಲ್ಲೆಯಲ್ಲಿ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಕೆ ಎಸ್ ಆರ್ ಟಿ ಸಿ ನೌಕರರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಅನಾರೋಗ್ಯದಿಂದ ಬಳಲುತ್ತಿದ್ದಂತ ಮುತ್ತಕಪಲ್ಲಿ ಗ್ರಾಮದ ನಿವಾಸಿ ಬಾಬಾಜಾನ್(53) ಎಂಬ ಕೆ ಎಸ್ ಆರ್ ಟಿ ಸಿ ನೌಕರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೆ ಎಸ್ ಆರ್ ಟಿ ಸಿ ಡಿಪೋದಲ್ಲಿ ಬಾಬಾಜಾನ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಚಾಲಕರಾಗಿ ಕೆಲಸಕ್ಕೆ ಸೇರಿದ್ದಂತ ಬಾಬಾಜಾನ್ ಅವರು ಅಪಘಾತದಲ್ಲಿ ಕಾಲಿಗೆ ಪೆಟ್ಟಾದ ನಂತ್ರ ಘಟಕದಲ್ಲೇ ಕೆಲಸ ಮಾಡಿಕೊಂಡಿದ್ದರು.

ಭಾನುವಾರದಂದು ಕೂಡ ಕರ್ತವ್ಯಕ್ಕೆ ಹಾಜರಾಗಿದ್ದಂತ ಬಾಬಾಜಾನ್, ಮನೆಗೆ ತೆರಳಿದ ನಂತ್ರ ಸೋಮವಾರದಂದು ರಾತ್ರಿ ಹೃದಯಾಘಾತವಾಗಿದೆ. ಹೀಗಾಗಿ ಬಾಬಾಜಾನ್ ಅವರು ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

ಶಾಲೆಗೆ ಹೋಗುವಾಗಲೇ `ಹೃದಯಾಘಾತ’ದಿಂದ 6ನೇ ತರಗತಿ ವಿದ್ಯಾರ್ಥಿನಿ ಸಾವು

ಶಾಲೆಗೆ ತೆರಳುತ್ತಿರುವಾಗಲೇ ಕುಸಿದು ಬಿದ್ದು ವಿದ್ಯಾರ್ಥಿನಿಯೊಬ್ಬಳು ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಕಾಳಿಂಗೇರಿಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಕಾಳಂಗೇರಿಯ ದೀಕ್ಷಾ (12) 6ನೇ ತರಗತಿಯಲ್ಲಿ ಓದುತ್ತಿದ್ದ ದೀಕ್ಷಾ ಎಂದಿನಂತೆ ಸಿದ್ಧಳಾಗಿ ಶಾಲೆಗೆ ಹೋಗುತ್ತಿದ್ದಳು. ಶಾಲೆಗೆ ತೆರಳುವಾಗ ಏಕಾಏಕಿ ಕುಸಿದು ಬಿದ್ದಿದ್ದ ಬಾಲಕಿ ದೀಕ್ಷಾಳನ್ನ ಕೂಡಲೇ ಕುಟುಂಬಸ್ಥರು ಸಂಡೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲು ಮುಂದಾಗಿದ್ದರು. ಆದರೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ದೀಕ್ಷಾ ಮೃತಪಟ್ಟಿದ್ದಾಳೆ. ದೀಕ್ಷಾ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಚೇರಿಗೆ ತೆರಳುವಾಗ ಕುಸಿದುಬಿದ್ದು ‘FDA’ ನೌಕರ ಸಾವು

ದಕ್ಷಿಣ ಕನ್ನಡದಲ್ಲಿ ಕಚೇರಿಗೆ ತೆರಳುವಾಗಲೇ FDA ನೌಕರರೊಬ್ಬರು ಕುಸಿದು ಬಿದ್ದು ಸಾವನಪ್ಪಿರುವ ಘಟನೆ ವರದಿಯಾಗಿದೆ. ಹೌದು ಹೃದಯಾಘಾತದಿಂದ FDA ನೌಕರ ಬಲಿಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಈ ಒಂದು ಘಟನೆ ನಡೆದಿದೆ. ಹೃದಯಘಾತದಿಂದ ಹಾಸನ ಮೂಲದ ಸತೀಶ್ (46) ಇದೀಗ ಸಾವನಪ್ಪಿದ್ದಾರೆ. ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಸತೀಶ್ ಎಫ್ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಬೆಳಿಗ್ಗೆ ಮನೆಯಲ್ಲಿ ಸ್ನಾನ ಮಾಡಿ ಬರುವಾಗ ಸತೀಶ್ ಕುಸಿದು ಬಿದ್ದಿದ್ದಾರೆ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಪತ್ನಿ ಜಯಶ್ರೀ ತೆರಳಿದ್ದಾರೆ.ಆಸ್ಪತ್ರೆಗೆ ಹೋದಾಗ ಸತೀಶ್ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ಹಾಸ್ಯ ಕಲಾವಿದ ಮೌನೇಶ್ ಆಚಾರ್ಯ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಹಾಸ್ಯ ಕಲಾವಿದರಾದ ಮೌನೇಶ್ ಆಚಾರ್ಯ ಮಾಣಿ ಕಾಪಿಕಾಡು(42) ಹೃದಯಾಘಾತದಿಂದ ನಿಧನರಾಗಿದ್ದಾರೆ. ನೆಲ್ಯಾಡಿಯ ನಮ್ಮ ಕಲಾವಿದರು ತಂಡದಲ್ಲಿ ಕಲಾವಿದನಾಗಿ ಹಾಸ್ಯ, ಪೋಷಕ ಪಾತ್ರದಲ್ಲಿ ಗುರುತಿಸಿಕೊಂಡಿರುವವರು. ಸಾಮಾಜಿಕ ಜಾಲತಾಣಗಳಲ್ಲೂ ಇವರ ಹಾಸ್ಯ ಅಭಿನಯ ಪ್ರಖ್ಯಾತಿಯನ್ನು ಪಡೆದಿದೆ.

SHOCKING: The series of 'heart attack' deaths continues in the state: 5 people died of 'heart attacks' in a single day yesterday!
Share. Facebook Twitter LinkedIn WhatsApp Email

Related Posts

BREAKING : ರೌಡಿ ರಾಜೀವ್ ಗೌಡನ ಮತ್ತಷ್ಟು ದಾದಾಗಿರಿ ಬಯಲು : ಶಿಡ್ಲಘಟ್ಟ ತಹಸೀಲ್ದಾರ್ ಗು ನಿಂದನೆ ಆರೋಪ

15/01/2026 12:19 PM1 Min Read

BIG NEWS : ಕನಕ ಗುರುಪೀಠದ ಸಿದ್ದರಾಮಾನಂದಪುರಿ ಶ್ರೀಗಳ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚನೆ

15/01/2026 12:09 PM1 Min Read

SHOCKING : ಧಾರವಾಡದಲ್ಲಿ ಕ್ಷುಲ್ಲಕ ಕಾರಣಕ್ಕೆ ಬಾಲಕನಿಗೆ ಚಾಕು ಇರಿದು ಹತ್ಯೆ : ಮೂವರು ಅಪ್ರಾಪ್ತರು ಅರೆಸ್ಟ್!

15/01/2026 11:48 AM1 Min Read
Recent News

ಬರ್ತ್‌ಡೇ ಗಿಫ್ಟ್ ಅಂದ್ರೆ ಇದು ! ಗೆಳತಿಯ 26ನೇ ಹುಟ್ಟುಹಬ್ಬಕ್ಕೆ ಯುವಕನಿಂದ 26 ಕಿ.ಮೀ ಓಟ!

15/01/2026 12:19 PM

BREAKING : ರೌಡಿ ರಾಜೀವ್ ಗೌಡನ ಮತ್ತಷ್ಟು ದಾದಾಗಿರಿ ಬಯಲು : ಶಿಡ್ಲಘಟ್ಟ ತಹಸೀಲ್ದಾರ್ ಗು ನಿಂದನೆ ಆರೋಪ

15/01/2026 12:19 PM

ಇರಾನ್‌ನಲ್ಲಿ ಹತ್ಯಾಕಾಂಡಕ್ಕೆ ಬ್ರೇಕ್? ‘ಸದ್ಯಕ್ಕೆ ಸುಮ್ಮನಿದ್ದೇವೆ, ಮುಂದೆ ನೋಡ್ತೀವಿ’ ಎಂದ ಟ್ರಂಪ್!

15/01/2026 12:11 PM

BIG NEWS : ಕನಕ ಗುರುಪೀಠದ ಸಿದ್ದರಾಮಾನಂದಪುರಿ ಶ್ರೀಗಳ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚನೆ

15/01/2026 12:09 PM
State News
KARNATAKA

BREAKING : ರೌಡಿ ರಾಜೀವ್ ಗೌಡನ ಮತ್ತಷ್ಟು ದಾದಾಗಿರಿ ಬಯಲು : ಶಿಡ್ಲಘಟ್ಟ ತಹಸೀಲ್ದಾರ್ ಗು ನಿಂದನೆ ಆರೋಪ

By kannadanewsnow0515/01/2026 12:19 PM KARNATAKA 1 Min Read

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ನಗರ ಸಭೆ ಆಯುಕ್ತೆ ಅಮೃತ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಕ್ರಮವಾಗಿ…

BIG NEWS : ಕನಕ ಗುರುಪೀಠದ ಸಿದ್ದರಾಮಾನಂದಪುರಿ ಶ್ರೀಗಳ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚನೆ

15/01/2026 12:09 PM

SHOCKING : ಧಾರವಾಡದಲ್ಲಿ ಕ್ಷುಲ್ಲಕ ಕಾರಣಕ್ಕೆ ಬಾಲಕನಿಗೆ ಚಾಕು ಇರಿದು ಹತ್ಯೆ : ಮೂವರು ಅಪ್ರಾಪ್ತರು ಅರೆಸ್ಟ್!

15/01/2026 11:48 AM

ಬೆಂಗಳೂರಲ್ಲಿ ಮದ್ವೆಯಾಗೋದಾಗಿ ನಂಬಿಸಿ ಲವ್ ಸೆಕ್ಸ್ ದೋಖಾ : ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆಗೆ ಯತ್ನ

15/01/2026 11:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.