ಕಲಬುರಗಿ : ಕಲಬುರಗಿಯಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಕಲಬುರಗಿ ನಗರದ ಹೊರವಲಯದ ಪಟ್ನಾ ಗ್ರಾಮದ ಬಳಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಸಿದ್ಧಾರೂಢ(32), ಜಗದೀಶ(25), ರಾಮಚಂದ್ರ(35) ಎಂಬುವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಕೊಲೆಯಾದ ಮೂವರು ವ್ಯಕ್ತಿಗಳು ಸಂಬಂಧಿಕರಾಗಿದ್ದಾರೆ.
ಹಳೆ ವೈಷಮ್ಯದಿಂದ ಮೂವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಡಾಬಾದಲ್ಲಿ ಕೆಲಸ ಮಾಡುತ್ತಿದ್ದ ಮೂವರನ್ನು ಡಾಬಾಗೆ ನುಗ್ಗಿ ಮಾರಾಕಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಸಬ್ ಅರ್ಬನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.