ಹಾಸನ : ಕಾಡಾನೆಯೊಂದು ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನು ಬೆನ್ನಟ್ಟಿದ್ದು, ಕೂದಲೆಳೆ ಅಂತರದಲ್ಲಿ ಸಿಬ್ಬಂದಿಗಳು ಪಾರಾಗಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕಾಡಾನೆಯೊಂದು ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ಬೆನ್ನಟ್ಟಿದ್ದು, ಭಯಾನಕ ವೀಡಿಯೊ ವೈರಲ್ ಆಗಿದೆ. ಆನೆ ತನ್ನ ಕಡೆಗೆ ಓಡಿ ಬರುತ್ತಿದ್ದಂತೆ ಕ್ಯಾಮೆರಾಮನ್ ಧೈರ್ಯದಿಂದ ನಿಂತು ತನ್ನ ಪ್ರಾಣವನ್ನು ಲೆಕ್ಕಿಸದೆ ಘಟನೆಯನ್ನು ವಿಡಿಯೋ ಮಾಡಿದ್ದಾರೆ. ಇಬ್ಬರು ಅರಣ್ಯ ಇಲಾಖೆ ಅಧಿಕಾರಿಗಳನ್ನು ಆನೆ ಬೆನ್ನಟ್ಟುತ್ತಿರುವುದನ್ನು ಮತ್ತು ಕ್ಯಾಮೆರಾಮನ್ ತನ್ನ ದಿಕ್ಕಿನತ್ತ ಓಡುತ್ತಿರುವಾಗ ವೀಡಿಯೊವನ್ನು ರೆಕಾರ್ಡ್ ಮಾಡುತ್ತಿರುವುದನ್ನು ವೀಡಿಯೊ ತೋರಿಸುತ್ತದೆ.
ಕಾಡಾನೆಯೊಂದು ದಾರಿ ತಪ್ಪಿ ಕೃಷಿ ಭೂಮಿಗೆ ಪ್ರವೇಶಿಸಿದ್ದು, ಈ ವೇಳೆ ಆನೆಯನ್ನು ಮತ್ತೆ ಕಾಡಿಗೆ ಕಳುಹಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಯತ್ನಿಸಿದ್ದಾರೆ. ಈ ಆನೆ ಕೋಪಗೊಂಡು ಸಿಬ್ಬಂದಿಗಳನ್ನು ಬೆನ್ನಟ್ಟಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ವೈರಲ್ ಆಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳಾದ ಪ್ರಶಾಂತ್ ಮತ್ತು ಸುನಿಲ್ ಅವರನ್ನು ಆನೆ ಬೆನ್ನಟ್ಟುತ್ತಿದ್ದಂತೆ ತಮ್ಮ ಜೀವ ಉಳಿಸಿಕೊಳ್ಳಲು ಓಡಿದ್ದಾರೆ.
#कर्नाटक के हासन जिले में जंगली हाथी ने वन विभाग के कर्मियों को दौड़ाया, दोनों वनकर्मी किसी तरह अपनी जान बचाकर भागे।#Karnataka pic.twitter.com/E2NWX4VmwF
— Rohit Nandan Mishra (@RohitNandanMis3) March 18, 2025