ರಾಯಚೂರು: ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಮೃತರೊರ್ವರ ಅಂತ್ಯ ನಡೆಸಲು ಮಾಡಲು ಹರಿಯುವ ನದಿ ದಾಟಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಹೌದು, ಮುಕುಂದ ಗ್ರಾಮದಲ್ಲಿ ಮೃತರ ಅಂತ್ಯ ಸಂಸ್ಕಾರ ಮಾಡಲು ಮೃತದೇಹವನ್ನು ತೆಪ್ಪದಲ್ಲಿ ತೆಗೆದುಕೊಂಡು ಅಂತ್ಯ ಸಂಸ್ಕಾರ ಮಾಡಬೇಕಿದೆ. ಗ್ರಾಮದಲ್ಲಿ ಸೋಮವಾರ ವೃದ್ಧೆಯೊಬ್ಬರು ಮೃತಪಟ್ಟಿದ್ದು, ಮೃತರ ಅಂತ್ಯ ಸಂಸ್ಕಾರಕ್ಕಾಗಿ ಸಾರ್ವಜನಿಕರು ನದಿಯಲ್ಲಿ ಈಜಿ ಹಾಗೂ ಹರಿಗೋಲಿನಲ್ಲಿ ಮೃತದೇಹವನ್ನು ಸಾಗಿಸಿ ಅಂತ್ಯಕ್ರಿಯೆ ಮಾಡಿದ ವಿಡಿಯೋ ವೈರಲ್ ಆಗಿದೆ.
ಗ್ರಾಮದ ಸ್ಮಶಾನ ನದಿ ದಂಡೆ ಮೇಲಿದೆ. ಮಳೆಗಾಲದಲ್ಲಿ ತುಂಗಭದ್ರ ಜಲಾಶಯದಿಂದ ನದಿಗೆ ನೀರು ಬಿಟ್ಟ ಸಮಯದಲ್ಲಿ ಪ್ರತಿ ವರ್ಷ ಇದೆ ಸಮಸ್ಯೆ ಕಾಡುತ್ತದೆ. ಶವ ಸಂಸ್ಕಾರ ಮಾಡಲು ಹೋಗುವವರು ಜೀವ ಕೈಯಲ್ಲಿಟ್ಟುಕೊಂಡು ಹೋಗುವ ಪರಿಸ್ಥಿತಿ ಇದೆ. ಹೀಗಾಗಿ ರಸ್ತೆಯಾದರು ನಿರ್ಮಿಸಿ ಅನುಕೂಲ ಮಾಡಬೇಕು ಎಂದು ಗ್ರಾಮಸ್ಥರ ಮನವಿ ಮಾಡಿದ್ದಾರೆ.