BREAKING: ಶ್ರದ್ಧಾ ಕೊಲೆ ಪ್ರಕರಣ: ಅಫ್ತಾಬ್ ನ್ಯಾಯಾಂಗ ಬಂಧನವನ್ನು 14 ದಿನಗಳ ಕಾಲ ವಿಸ್ತರಿಸಿದ ದೆಹಲಿ ನ್ಯಾಯಾಲಯ

ನವದೆಹಲಿ: ಆರೋಪಿ ಅಫ್ತಾಬ್ ಪೂನಾವಾಲಾ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ 14 ದಿನಗಳ ಕಾಲ ವಿಸ್ತರಿಸಿದೆ. ಇಂದು ಆರೋಪಿ ಅಫ್ತಾಬ್ ಪೂನಾವಾಲಾ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ಪ್ರಕರಣದಲ್ಲಿ ತನಿಖೆ ಪ್ರಗತಿಯಲ್ಲಿದೆ ಎಂದು ನ್ಯಾಯಾಲಯಕ್ಕೆ ದೆಹಲಿ ಪೊಲೀಸರು ವರದಿ ಸಲ್ಲಿಸಿದರು ಇದೇ ವೇಳೆ ಅಫ್ತಾಬ್ ನ್ಯಾಯಾಂಗ ಬಂಧನವನ್ನು ಹೆಚ್ಚಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು. ಹೀಗಾಗಿ ದೆಹಲಿಯ ಸಾಕೇತ್ ನ್ಯಾಯಾಲಯವು ಅಫ್ತಾಬ್ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಲು ಆದೇಶಿಸಿತು.