ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ ಭಾರತದ ಹೊಸ ಅಧ್ಯಾಯ: ಕೇಂದ್ರ ಸಚಿವ ಸಂಪುಟ ಶ್ಲಾಘನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಐತಿಹಾಸಿಕ 18 ದಿನಗಳ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರನ್ನು ಅಭಿನಂದಿಸುವ ನಿರ್ಣಯವನ್ನು ಅಂಗೀಕರಿಸಿತು. ಈ ಕಾರ್ಯಾಚರಣೆಯು ಭಾರತದ ಬಾಹ್ಯಾಕಾಶ ಕಾರ್ಯಕ್ರಮದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿತು ಎಂದು ಸಂಪುಟ ಪ್ರತಿಪಾದಿಸಿತು. ಸಭೆಯ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, … Continue reading ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ ಭಾರತದ ಹೊಸ ಅಧ್ಯಾಯ: ಕೇಂದ್ರ ಸಚಿವ ಸಂಪುಟ ಶ್ಲಾಘನೆ