ವಿಜಯನಗರ : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಹಾಗೂ ಹೈಕಮಾಂಡ್ ಅವರನ್ನು ಭೇಟಿ ಮಾಡುವ ವಿಚಾರವಾಗಿ ಭಾರಿ ಚರ್ಚೆ ನಡೆಯುತ್ತಿದ್ದು ಇದರ ಮಧ್ಯ ಸಚಿವ ಜಮೀರ್ ಅಹ್ಮದ್ ಖಾನ್ 2028 ರ ವರೆಗೂ ಸಿದ್ದರಾಮಯ್ಯರೆ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
ವಿಜಯನಗರದಲ್ಲಿ ಮಾತನಾಡಿದ ಅವರು, 2028ರವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ, ಮುಂದಿನ ಚುನಾವಣೆಯೂ ಅವರ ನೇತೃತ್ವದಲ್ಲೇ ನಡೆಯಲಿದೆ. ಹಾಗಾಗಿ 2028ರವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಹೇಳುವ ಮೂಲಕ ಸಿಎಂ ಬದಲಾವಣೆ ಚರ್ಚೆಗೆ ತೆರೆ ಎಳೆದಿದ್ದಾರೆ.
ನಮ್ಮದು ಹೈಕಮಾಂಡ್ ಪಕ್ಷ ಹೈಕಮಾಂಡ್ ಏನೇ ನಿರ್ಧಾರ ತಗೊಂಡ್ರೂ ನಾವು ಬದ್ಧರಾಗಿರುತ್ತೇವೆ. ಒಂದು ವೇಳೆ ಬೀದಿಯಲ್ಲಿ ಹೋಗೋ ದಾಸಯ್ಯನನ್ನು ತಂದು ಸಿಎಂ ಮಾಡಿದ್ರೂ ನಾವು ಒಪ್ಪಿಕೊಳ್ಳುತ್ತೇವೆ. ಆದರೆ ಸದ್ಯಕ್ಕೆ 2028ರವರೆಗೆ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದು ಹೇಳುವ ಮೂಲಕ ಸಿಎಂ ಬದಲಾವಣೆಯ ಊಹಾಪೋಹಗಳಿಗೆ ತೆರೆ ಎಳೆದರು.








