Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪೆರುವಿನಲ್ಲಿ ಭೀಕರ ದುರಂತ: ಸ್ಟೇಡಿಯಂ ಗೋಡೆ ಕುಸಿದು 60ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

04/04/2026 9:00 AM

ಬೆಳ್ಳಂಬೆಳಗ್ಗೆ ಕೋಳಿಗಳು ಕೂಗುವುದೇಕೆ? ಬಯಲಾಯಿತು ವರ್ಷಗಳ ಹಿಂದಿನ ರಹಸ್ಯ!

04/04/2026 8:58 AM

BREAKING : ಚಿಕ್ಕಮಗಳೂರಿನಲ್ಲಿ ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ.!

04/04/2026 8:53 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿದ್ದರಾಮಯ್ಯನವರೇ ನಿಮ್ಮ ಆತ್ಮಸಾಕ್ಷಿ ಎನ್ನುವುದು ಅಸ್ತಿತ್ವದಲ್ಲಿ ಇದೆಯಾ? : HD ಕುಮಾರಸ್ವಾಮಿ ಆಕ್ರೋಶ
KARNATAKA

ಸಿದ್ದರಾಮಯ್ಯನವರೇ ನಿಮ್ಮ ಆತ್ಮಸಾಕ್ಷಿ ಎನ್ನುವುದು ಅಸ್ತಿತ್ವದಲ್ಲಿ ಇದೆಯಾ? : HD ಕುಮಾರಸ್ವಾಮಿ ಆಕ್ರೋಶ

By kannadanewsnow0524/05/2024 9:58 PM

ಬೆಂಗಳೂರು : ಪ್ರಜ್ವಲ್​ ರೇವಣ್ಣ ನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ. ವಿದೇಶಕ್ಕೆ ಕಳಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ? ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡರ ಬಗ್ಗೆ ಲಘುವಾಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೆಂದೂ ನಾನು ವಕೀಲಿಕೆ ಮಾಡುತ್ತಿದ್ದೆ ಎನ್ನಬೇಡಿ

ಸುಧೀರ್ಘವಾದಂತ ಟ್ವೀಟ್ ಮಾಡಿರುವ ಅವರು, ಎಚ್ ಡಿ ದೇವೇಗೌಡರೇ ಪ್ರಜ್ವಲ್ ಅನ್ನು ವಿದೇಶಕ್ಕೆ ಕಳುಸಿದ್ದಾರೆ ಎಂಬ ಹೇಳಿಕೆಗೆ ಕಿಡಿ ಕಾರಿದ್ದಾರೆ. ನಾನು ವಕೀಲನಾಗಿದ್ದೆ, ಹಿಂದೆ ನಾನೂ ವಕೀಲಿಕೆ ಮಾಡುತ್ತಿದ್ದೆ ಎಂದು ಪದೇಪದೆ ಹೇಳಬೇಡಿ. ನಿಮ್ಮ ವಕೀಲಿ ಜ್ಞಾನದ ಮೇಲೆ ಅಗೌರವ ಬರುವಂತೆ ಮಾತನಾಡಬೇಡಿ. ಎಷ್ಟೋ ಮಹಾನುಭಾವರು ಈ ವೃತ್ತಿಗೆ ಕಳಸಪ್ರಾಯರಾಗಿದ್ದಾರೆ. ದಯಮಾಡಿ ಅವರೆಲ್ಲರನ್ನು ಅಪಮಾನಿಸಬೇಡಿ.

“ಅತ್ಯಾಚಾರದ ವೀಡಿಯೊ ಹರಿದಾಡಿತು ಎನ್ನುವುದಕ್ಕಿಂತ, ಅತ್ಯಾಚಾರ ಘೋರ ಅಪರಾಧ” ಎನ್ನುವ ಆಣಿಮುತ್ತು ಉದುರಿಸಿದ್ದೀರಿ. ನಿಮ್ಮ ವಕೀಲಿಕೆಯ ಪಾಂಡಿತ್ಯದ ಬಗ್ಗೆ ಈ ನಿಮ್ಮ ಮಾತು ನನ್ನಲ್ಲಿ ಅನೇಕ ಪ್ರಶ್ನೆಗಳನ್ನು ಉಂಟು ಮಾಡಿದೆ.ಅತ್ಯಾಚಾರ ಅಮಾನುಷ ಎನ್ನುವುದರಲ್ಲಿ ಎರಡನೇ ಮಾತಿಲ್ಲ. ಆದರೆ, ಆ ಅಮಾನುಷಕ್ಕೆ ತುತ್ತಾದ ಹೆಣ್ಮಕ್ಕಳ ವಿಡಿಯೋಗಳನ್ನು ಹಂಚಿ ವಿಕೃತಾನಂದ ಅನುಭವಿಸುವುದು ಮಾನುಷವೇ? ಮನುಷ್ಯರು ಹೇಳುವ ಮಾತೇ ಇದು? ದಯಮಾಡಿ ನೀವು ಇನ್ನೆಂದೂ ನಾನು ವಕೀಲಿಕೆ ಮಾಡುತ್ತಿದ್ದೆ ಎನ್ನಬೇಡಿ.

ಪೆನ್ ಡ್ರೈವ್ ಹಂಚಿಕೆ ಕುರಿತು ಡಿಸಿಎಂನ್ನ ಒಮ್ಮೆಯಾದರೂ ಕೇಳಿದ್ದೀರಾ?

ನಿಮ್ಮ ಪಕ್ಕದಲ್ಲಿ ಪೆನ್ ಡ್ರೈವ್ ಹಂಚಿಕೆದಾರ ಕೂತಿದ್ದಾರೆ. ಆ CD ಶಿವು ಚುನಾವಣಾ ಸ್ವಾರ್ಥಕ್ಕಾಗಿ ಹೆಣ್ಮಕ್ಕಳ ಮಾನವನ್ನು ಪೆನ್ ಡ್ರೈವುಗಳಿಗೆ ತುಂಬಿಸಿ ಹಾದಿಬೀದಿಯಲ್ಲಿ ಮಾರಿಕೊಂಡಿದ್ದು ನಿಮಗೆ ಗೊತ್ತಿಲ್ಲವೇ? ಸ್ವಯಂ ಘೋಷಿತ ಸಂವಿಧಾನ ತಜ್ಞ ಬಿರುದಾಂಕಿತರಾದ ನೀವು, ಇಂಥ ಮಾನದ್ರೋಹಿಯನ್ನು ಪಕ್ಕದಲ್ಲೇ ಕೂರಿಸಿಕೊಳ್ಳಲು ನಿಮ್ಮ ಆತ್ಮಸಾಕ್ಷಿ ಒಪ್ಪುತ್ತದೆಯೇ? ಪ್ರಶ್ನೆ ಮಾಡಿಕೊಳ್ಳಿ.

ನಿಮ್ಮ ಉಪ ಮುಖ್ಯಮಂತ್ರಿ ಮಹಾಶಯ ಪೆನ್ ಡ್ರೈವ್ ಹಂಚಿಕೆಯಲ್ಲಿ ಶಾಮೀಲಾಗಿಲ್ಲವೇ? ದೇವರಾಜೆಗೌಡ, Broker ಶಿವರಾಮೇಗೌಡ, ಡಿ.ಕೆ.ಶಿವಕುಮಾರ್ ನಡುವಿನ ಮೊಬೈಲ್ ಸಂಭಾಷಣೆ ನಿಮ್ಮ ಸರಕಾರದ ಮಾನವನ್ನು ಹಾಸನದಲ್ಲಿ ಪೆನ್ ಡ್ರೈವ್ ರೂಪದಲ್ಲಿ ವೋಟಿಗೆ ಹರಾಜಾಗಲಿಲ್ಲವೇ? ಚಾಲಕ ಕಾರ್ತಿಕ್ ಗೌಡ ಆ ನೊಂದ ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ತುಂಬಿದ್ದ ಮೊದಲ ಪೆನ್ ಡ್ರೈವನ್ನು ನಿಮಗೆ ತಂದು ಕೊಡಲಿಲ್ಲವೇ? ಎಂದು ನಿಮ್ಮ ಉಪ ಮುಖ್ಯಮಂತ್ರಿಯನ್ನು ಒಮ್ಮೆಯಾದರೂ ಕೇಳಿದ್ದೀರಾ ಮುಖ್ಯಮಂತ್ರಿಗಳೇ..?

ನಿಮ್ಮ ಆತ್ಮಸಾಕ್ಷಿ ಎನ್ನುವುದು ಅಸ್ತಿತ್ವದಲ್ಲಿ ಇದೆಯಾ?

ಪ್ರಜ್ವಲ್ ರೇವಣ್ಣ ಅವರನ್ನು ನಾನೆಂದೂ ಸಮರ್ಥನೆ ಮಾಡಿಲ್ಲ, ಮಾಡುವುದೂ ಇಲ್ಲ. ಪ್ರಕರಣ ಹೊರಬಂದ ಮೊದಲ ದಿನವೇ ‘ಈ ನೆಲದ ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು. ಉಪ್ಪು ತಿಂದವರು ನೀರು ಕುಡಿಯಲೇ ಬೇಕು’ ಎಂದು ಹೇಳಿದ್ದೇನೆ. ನನ್ನ ಹೇಳಿಕೆ ನಿಮಗೆ ಗೊತ್ತಾಗಲಿಲ್ಲವೇ? ನಿಮಗೆ ಪತ್ರಿಕೆ ಓದುವ ಅಭ್ಯಾಸ ಇಲ್ಲದಿದ್ದರೆ ನಾನೇನು ಮಾಡಲಿ?

ದೇವೇಗೌಡರ ಬಗ್ಗೆ ನೀವು ಕಾರಿಕೊಂಡ ವಿಷದ ಬಗ್ಗೆ ಹೇಳುವುದಾದರೆ; ನನ್ನ ಮಾತಿಗೆ ಗೌರವ ಕೊಟ್ಟು ಪ್ರಜ್ವಲ್ ವಾಪಸ್ ಬಂದು SIT ಮುಂದೆ ಹಾಜರಾಗದಿದ್ದರೆ ಕುಟುಂಬದಿಂದ ಹೊರ ಹಾಕುತ್ತೇನೆ ಎಂದು ದೇವೇಗೌಡರು ಎಚ್ಚರಿಕೆ ನೀಡಿದ್ದಾರೆ. ಅವರ ಮಾತೇ ನಮ್ಮ ಕುಟುಂಬದ ಮಾತು. ಆದರೆ ನೀವು ಹೇಳಿದ್ದೇನು? ಪ್ರಜ್ವಲ್ ನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ. ವಿದೇಶಕ್ಕೆ ಕಳಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ? ಎಂದಿದ್ದೀರಿ! ನಿಮ್ಮ ಆತ್ಮಸಾಕ್ಷಿ ಎನ್ನುವುದು ಅಸ್ತಿತ್ವದಲ್ಲಿ ಇದೆಯಾ?

ನನ್ನ ಮತ್ತು ದೇವೆಗೌಡರ ಮನೆಗೆ ಕಳ್ಳಕಿವಿ ಇಟ್ಟಿದ್ದೀರಿ

ಅವನು ದೇವೇಗೌಡರಿಗೆ ಹೇಳಿಯೇ ವಿದೇಶಕ್ಕೆ ಹೋಗಿದ್ದಾನೆ ಎಂದು ಹೇಳಿದ್ದೀರಿ. ನಿಮಗೆ ಹೇಗೆ ಗೊತ್ತು? ನಿಮ್ಮ ಪಕ್ಷದಲ್ಲೇ ಕೂರುವ CD ಶಿವು ಮಾಡುತ್ತಿರುವ ಮಾನಗೇಡಿ ಕೃತ್ಯಗಳು ಗೊತ್ತಾಗೋದಿಲ್ಲ ನಿಮಗೆ!? ಆದರೆ, ದೇವೆಗೌಡರ ಮನೆಯಲ್ಲಿ ನಡೆಯೋದೆಲ್ಲ ನಿಮಗೆ ಗೊತ್ತಾಗುತ್ತದೆಯೇ!? ಅದು ಹೇಗೆ? ನನ್ನ ಮತ್ತು ದೇವೆಗೌಡರ ಮನೆಗೆ ಕಳ್ಳಕಿವಿ ಇಟ್ಟಿದ್ದೀರಿ ಎನ್ನುವ ನನ್ನ ಆರೋಪ ಸತ್ಯ ಎಂದ ಹಾಗಾಯಿತು.. ಅಲ್ಲವೇ? ಅಸತ್ಯ ಹೇಳುವ ಅಗತ್ಯ ನಮಗಿಲ್ಲ. ಅವನು ಕುಟುಂಬದ ಸಂಪರ್ಕದಲ್ಲಿ ಇಲ್ಲ. ಹಿಂದೆಯೂ ಹೇಳಿದ್ದೆ, ಈಗಲೂ ಹೇಳುತ್ತಿದ್ದೇನೆ.ಪಕ್ಷದ ಅಧ್ಯಕ್ಷನಾಗಿ ಆತನ ವಿರುದ್ಧ ಕ್ರಮ ಕೈಗೊಂಡಿದ್ದೇನೆ. ಆತನ ಮೇಲಿರುವ ಆರೋಪ ಸಾಬೀತಾದರೆ ಪಕ್ಷದಲ್ಲಿ ಆತನಿಗೆ ಸ್ಥಾನವಿಲ್ಲ. ನಿಮಗೆ ಸಂಶಯ ಸಲ್ಲ.

ನಿಮ್ಮ ಸರಕಾರ ಕಥೆ ಮುಗಿದೇ ಹೋಗುತ್ತದೆ

ಇನ್ನು, SIT ತನಿಖೆ ಅಂತೀರಾ? SIT ಹೆಸರಿನಲ್ಲಿ ಎಷ್ಟು ಸ್ಲೀಪರ್ ಸೆಲ್ ಗಳು ತನಿಖೆ ಮಾಡುತ್ತಿವೆ ಎಂದು ಬಿಚ್ಚಿಟ್ಟರೆ ನಿಮ್ಮ ಸರಕಾರ ಕಥೆ ಮುಗಿದೇ ಹೋಗುತ್ತದೆ. CD ಶಿವು ಆದೇಶದ ಮೇರೆಗೆ ಪೆನ್ ಡ್ರೈವ್ ಗಳನ್ನು ಹಂಚಿದ ಕಿರಾತಕರೆಲ್ಲ ದಿನ ಬೆಳಗಾದರೆ ಯಾರ ಮನೆಯಲ್ಲಿ ಪ್ರತ್ಯಕ್ಷರಾಗುತ್ತಾರೆ? ವಿಧಾನಸೌಧದಲ್ಲಿ ಯಾರ ಕಚೇರಿಯೊಳಕ್ಕೆ ನುಸಳುತ್ತಾರೆ ಎನ್ನುವುದು ಇಂಟೆಲಿಜೆನ್ಸ್ ಅನ್ನು ಇಟ್ಟುಕೊಂಡಿರುವ ನಿಮಗೇ ಗೊತ್ತಿಲ್ಲದಿದ್ದರೆ ಹೇಗೆ?

ಕೊನೆಯದಾಗಿ; ನಿಮ್ಮ ಸುಪುತ್ರ, ದಿವಂಗತ ರಾಕೇಶ್ ಅವರನ್ನು Tomorrow Land ಎನ್ನುವ ಅಮಲಿನ ಪಾರ್ಟಿಗೆ ನೀವೇ ಕಳಿಸಿದ್ದೀರಿ, ಅಲ್ಲಿ ಅವರ ಸಾವಿಗೆ ನೀವೇ ಕಾರಣರಾದಿರಿ ಎಂದು ಯಾರಾದರೂ ನಿಮ್ಮನ್ನು ಕೇಳಿದರೆ ನಿಮ್ಮ ಮನಸ್ಸಿಗೆ ಹೇಗಾಗಬೇಡ? ದೇವೇಗೌಡರ ಬಗ್ಗೆ ನೀವು ಕೇಳಿದ್ದು ಕೂಡ ಹಾಗೆಯೇ ಅಲ್ಲವೇ ಮಾನ್ಯ ಮುಖ್ಯಮಂತ್ರಿಗಳೇ.. ಶೋಕದ ಮನೆಯಲ್ಲಿ ರಾಜಕೀಯ ಮಾಡುವ ಜಾಯಮಾನ ನಮ್ಮದಲ್ಲ. ದಯಮಾಡಿ ಅರ್ಥ ಮಾಡಿಕೊಳ್ಳಿ.

ಶ್ರೀ @siddaramaiah ನವರೇ..
ನಾನು ವಕೀಲನಾಗಿದ್ದೆ, ಹಿಂದೆ ನಾನೂ ವಕೀಲಿಕೆ ಮಾಡುತ್ತಿದ್ದೆ ಎಂದು ಪದೇಪದೆ ಹೇಳಬೇಡಿ. ನಿಮ್ಮ ವಕೀಲಿ ಜ್ಞಾನದ ಮೇಲೆ ಅಗೌರವ ಬರುವಂತೆ ಮಾತನಾಡಬೇಡಿ. ಎಷ್ಟೋ ಮಹಾನುಭಾವರು ಈ ವೃತ್ತಿಗೆ ಕಳಸಪ್ರಾಯರಾಗಿದ್ದಾರೆ. ದಯಮಾಡಿ ಅವರೆಲ್ಲರನ್ನು ಅಪಮಾನಿಸಬೇಡಿ.

"ಅತ್ಯಾಚಾರದ ವೀಡಿಯೊ ಹರಿದಾಡಿತು ಎನ್ನುವುದಕ್ಕಿಂತ,…

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 24, 2024

Share. Facebook Twitter LinkedIn WhatsApp Email

Related Posts

ಬೆಳ್ಳಂಬೆಳಗ್ಗೆ ಕೋಳಿಗಳು ಕೂಗುವುದೇಕೆ? ಬಯಲಾಯಿತು ವರ್ಷಗಳ ಹಿಂದಿನ ರಹಸ್ಯ!

04/04/2026 8:58 AM1 Min Read

BREAKING : ಚಿಕ್ಕಮಗಳೂರಿನಲ್ಲಿ ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ.!

04/04/2026 8:53 AM1 Min Read

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ‘ಇ-ಚಾವಡಿ’ ಮೂಲಕ ಇನ್ಮುಂದೆ ಪೌತಿ ಖಾತೆ, ಮ್ಯುಟೇಷನ್ ವಿವರ ಬೆರಳ ತುದಿಯಲ್ಲೇ ಲಭ್ಯ!

04/04/2026 8:18 AM2 Mins Read
Recent News

ಪೆರುವಿನಲ್ಲಿ ಭೀಕರ ದುರಂತ: ಸ್ಟೇಡಿಯಂ ಗೋಡೆ ಕುಸಿದು 60ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

04/04/2026 9:00 AM

ಬೆಳ್ಳಂಬೆಳಗ್ಗೆ ಕೋಳಿಗಳು ಕೂಗುವುದೇಕೆ? ಬಯಲಾಯಿತು ವರ್ಷಗಳ ಹಿಂದಿನ ರಹಸ್ಯ!

04/04/2026 8:58 AM

BREAKING : ಚಿಕ್ಕಮಗಳೂರಿನಲ್ಲಿ ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ.!

04/04/2026 8:53 AM

BREAKING: ಚುನಾವಣಾ ಪ್ರಚಾರದ ವೇಳೆ ಕೇರಳದಲ್ಲಿ ಶಶಿ ತರೂರ್ ಬೆಂಗಾವಲು ವಾಹನದ ಮೇಲೆ ಬೆನ್ನಟ್ಟಿ ಹಲ್ಲೆ; ಭದ್ರತಾ ಸಿಬ್ಬಂದಿಗೆ ಗಾಯ!

04/04/2026 8:44 AM
State News
KARNATAKA

ಬೆಳ್ಳಂಬೆಳಗ್ಗೆ ಕೋಳಿಗಳು ಕೂಗುವುದೇಕೆ? ಬಯಲಾಯಿತು ವರ್ಷಗಳ ಹಿಂದಿನ ರಹಸ್ಯ!

By kannadanewsnow5704/04/2026 8:58 AM KARNATAKA 1 Min Read

ಸಾಮಾನ್ಯವಾಗಿ ಹಳ್ಳಿಗಳಲ್ಲಿ ಅಥವಾ ಮನೆಯ ಹತ್ತಿರ ಕೋಳಿಗಳಿದ್ದರೆ, ಸೂರ್ಯ ಹುಟ್ಟುವ ಮೊದಲೇ ಹುಂಜದ ‘ಕೊಕ್ಕೊಕ್ಕೋ’ ಎನ್ನುವ ಧ್ವನಿ ಕೇಳಿಬರುತ್ತದೆ. ಇದನ್ನು…

BREAKING : ಚಿಕ್ಕಮಗಳೂರಿನಲ್ಲಿ ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ.!

04/04/2026 8:53 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ‘ಇ-ಚಾವಡಿ’ ಮೂಲಕ ಇನ್ಮುಂದೆ ಪೌತಿ ಖಾತೆ, ಮ್ಯುಟೇಷನ್ ವಿವರ ಬೆರಳ ತುದಿಯಲ್ಲೇ ಲಭ್ಯ!

04/04/2026 8:18 AM

Rain Alert : ರಾಜ್ಯದ ಈ 18 ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

04/04/2026 8:11 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.