Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಸಾಗರದ ಮರ್ಕಜ್ ಶಾಲಾ ಮಕ್ಕಳು ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

20/12/2025 10:28 PM

ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ 30 ದಿನದೊಳಗೆ ಮಾಹಿತಿ ಒದಗಿಸಿ: ಆಯುಕ್ತ ಬದ್ರುದ್ದೀನ್.ಕೆ ಖಡಕ್ ಸೂಚನೆ

20/12/2025 10:11 PM

ನಿಮ್ಮ ವಾಟ್ಸಾಪ್ ಅಕೌಂಟ್ ಕೂಡ ಬ್ಯಾನ್ ಆಗಿದ್ಯಾ? ಟೆನ್ಷನ್ ಬೇಡ, ಜಸ್ಟ್ ಈ ಟ್ರಿಕ್ ಬಳಸಿ!

20/12/2025 9:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 7 ಗಣಿಗಳಿಗೆ ಅಕ್ರಮವಾಗಿ ಅನುಮತಿ ಕೊಟ್ಟಿದ್ದ ಸಿದ್ದರಾಮಯ್ಯ: ಸಿಎಂ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆರೋಪ
KARNATAKA

7 ಗಣಿಗಳಿಗೆ ಅಕ್ರಮವಾಗಿ ಅನುಮತಿ ಕೊಟ್ಟಿದ್ದ ಸಿದ್ದರಾಮಯ್ಯ: ಸಿಎಂ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆರೋಪ

By kannadanewsnow0923/06/2025 8:36 PM

ನವದೆಹಲಿ: ಅಕ್ರಮ ಗಣಿಗಾರಿಕೆ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಹೆಚ್.ಕೆ. ಪಾಟೀಲ್‌ ಬರೆದಿರುವ ಪತ್ರವನ್ನು ಕಸದ ಬುಟ್ಟಿಗೆ ಹಾಕಬೇಕು ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗುಡುಗಿದ್ದಾರೆ.

ನವದೆಹಲಿಯ ತಮ್ಮ ಅಧಿಕೃತ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವರು; ಕಳೆದ ಬಾರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರಾವಧಿಯಲ್ಲಿ ಕಾನೂನುಬಾಹಿರವಾಗಿ ಏಳು ಗಣಿ ಕಂಪನಿಗಳಿಗೆ ಅನುಮತಿ ನೀಡಿದ್ದರು. ಅದರ ಬಗ್ಗೆ ಏನು ಹೇಳುತ್ತೀರಿ ಹೆಚ್.ಕೆ. ಪಾಟೀಲರೇ ಎಂದು ಖಾರವಾಗಿ ಪ್ರಶ್ನಿಸಿದರು.

ರಾಜಕೀಯ ದುರುದೇಶದಿಂದ ಹಾಗೂ ವಸತಿ ಇಲಾಖೆಯಲ್ಲಿ ಎದ್ದಿರುವ ಕಮೀಷನ್‌ ಮುಜುಗರದಿಂದ ಪಾರಾಗಲು ಹೆಚ್.ಕೆ. ಪಾಟೀಲ್‌ ಅವರ ಪತ್ರವನ್ನು ಹೊರಗೆ ಬಿಡಲಾಗಿದೆ ಎಂದು ಅವರು ಕಿಡಿಕಾರಿದರು.

ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣದ ಬಗ್ಗೆ ಈಗ ಹೆಚ್.ಕೆ. ಪಾಟೀಲ್ ಎಚ್ಚರಗೊಂಡಿದ್ದಾರೆ. 1.5 ಲಕ್ಷ ಕೋಟಿ ಹಗರಣ ಆಗಿದೆ ಎಂದಿದ್ದಾರೆ. ಎರಡು ವರ್ಷದಿಂದ ತಾವು ಕಾನೂನು ಮಂತ್ರಿಯಾಗಿದ್ದರಿ, ಕುಂಭಕರ್ಣನ ನಿದ್ದೆಯಲ್ಲಿ ಇದ್ರಾ? ಎಂದು ಅವರಗೆ ಪ್ರಶ್ನೆ ಮಾಡಿದರು ಕೇಂದ್ರ ಸಚಿವರು.

ಹೆಚ್.ಕೆ. ಪಾಟೀಲ್ ಅವರು 10 ವರ್ಷಗಳ ಬಳಿಕ ಪತ್ರ ಬರೆದಿದ್ದಾರೆ. ಗ್ರೇಟ್.. ಸಿದ್ದರಾಮಯ್ಯನವರೇ, ಏನು ಮಾಡಿದ್ರೀ ನೀವು ರಾಜ್ಯದ ಸಂಪತ್ತು ಉಳಿಸಲು? ಹೆಚ್.ಕೆ. ಪಾಟೀಲರೇ ಡ್ರಾಮಾ ಬಿಡಿ. ನಿಮ್ಮ ನೇತೃತ್ವದ ಉಪ ಸಮಿತಿ ಕೊಟ್ಟ ವರದಿ ಇಟ್ಟುಕೊಂಡೇ ಸಿದ್ದರಾಮಯ್ಯ ಏನೂ ಮಾಡಿಲ್ಲ. ಈಗ ಪತ್ರ ಬರೆದು ಏನು ಮಾಡುತ್ತೀರಿ? ಅದನ್ನು ತೆಗೆದು ಕಸದಬುಟ್ಟಿಗೆ ಎಸೆಯಿರಿ ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದಿರು.

ಕಳೆದ ಬಾರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಕಾನೂನುಬಾಹಿರವಾಗಿ ಏಳು ಗಣಿ ಕಂಪನಿಗಳಿಗೆ ಅನುಮತಿ ನೀಡಿದ್ದರು. ಅಲ್ಲಿ ಏನೆಲ್ಲಾ ನಡೆದಿದೆ ಎನ್ನುವುದು ನಿಮಗೆ ಗೊತ್ತಿಲ್ಲವೇ ಪಾಟೀಲರೇ? ಆ ಬಗ್ಗೆ ಮೌನವೇಕೆ? ಯಾವ ನೈತಿಕತೆ ಇಟ್ಟುಕೊಂಡು ಸಿದ್ದರಾಮಯ್ಯ ಪಕ್ಕದಲ್ಲಿ ಕೂತು ಅಕ್ರಮ ಗಣಿಗಾರಿಕೆ ಬಗ್ಗೆ ಮಾತಾಡುತ್ತಿದ್ದೀರಿ ಹೆಚ್.ಕೆ. ಪಾಟೀಲರೇ? ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.

ನಾನು ಸಿದ್ದರಾಮಯ್ಯ ಗಣಿ ಅಕ್ರಮದ ಬಗ್ಗೆ ವಿಧಾನಮಂಡಲದಲ್ಲಿಯೂ ಮಾತನಾಡಿದದೇನೆ. ಏಳು ಗಣಿಗಳಿಗೆ ಸಿದ್ದರಾಮಯ್ಯ ಅವರು ಹಿಂದೆ ಸಿಎಂ ಆಗಿದ್ದಾಗ ಅಕ್ರಮವಾಗಿ ಅನುಮತಿ ನೀಡಿದ್ದಾರೆ. ಎಲ್ಲರ ಬಾಯಿ ಮುಚ್ಚಲು ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಇಡಿ, ಐಟಿ ಎಂದು ಕೇಂದ್ರ ಸರಕಾರವನ್ನು ದೂರುತ್ತಿದ್ದಾರೆ. ಹಾಗಾದರೆ ಇವರು ಮಾಡುತ್ತಿರುವುದು ಏನು? ಎಂದು ಅವರು ಕಿಡಿಕಾರಿದರು.

ರಾಜ್ಯದ ಜನರು ನನಗೆ ಶಕ್ತಿ ನೀಡಿ ಮುಂದೆ ಐದು ವರ್ಷ ಅಧಿಕಾರ ಕೊಟ್ಟರೆ ಈ ಹೆಚ್.ಕೆ. ಪಾಟೀಲ್ ಅವರು ಬರೆದ ಪತ್ರಕ್ಕೆ ಉತ್ತರ ಕೊಡುತ್ತೇನೆ. ಎಲ್ಲಾ ದಾಖಲೆಗಳನ್ನೂ ಇಟ್ಟುಕೊಂಡಿದ್ದೇನೆ. 2012ರಲ್ಲಿ ನನ್ನ ವಿರುದ್ಧ ಹಾಕಲಾದ ಕೇಸ್‌ ಅದು. ನನ್ನಿಂದ ರಾಜ್ಯಕ್ಕೆ ನಯಾಪೈಸೆ ನಷ್ಟವಾಗಿಲ್ಲ. ಇವರು ಕೊಳ್ಳೆ ಹೊಡೆದು ವಿದೇಶಗಳಿಗೆ ಅದಿರು, ಹಣ ಸಾಗಿಸಿದ ಹಾಗೆ ನಾನು ಮಾಡಿಲ್ಲ. ಈಗ ಕಾನೂನು ಸಚಿವರು ಪತ್ರ ಬರೆಯುತ್ತಾರೆ. ಯಾಕೆ ಬರೆದಿದ್ದೀರಿ ಪಾಟೀಲರೇ.. ನಮ್ಮನ್ನು ಹೆದರಿಸಲಿಕ್ಕಾ? ನಮ್ಮನ್ನು ಹೆದರಿಸುವುದು ನಿಮ್ಮ ಹಣೆಯಲ್ಲಿ ಬರೆದಿಲ್ಲ ಎಂದು ಕುಮಾರಸ್ವಾಮಿ ನೇರವಾಗಿ ಹೆಚ್.ಕೆ.ಪಾಟೀಲರಿಗೇ ಟಾಂಗ್‌ ಕೊಟ್ಟರು.

ಈ ಸರಕಾರದ ಸಿಎಂ, ಡಿಸಿಎಂ ಇಬ್ಬರಿಂದ ರಾಜ್ಯ ಹಾಳಾಗುತ್ತಿದೆ. ಕಾಂಗ್ರೆಸ್‌ ಹೈಕಮಾಂಡ್‌ ನಿಜಕ್ಕೂ ನೈತಿಕತೆ ಇದ್ದರೆ ಇವರಿಬ್ಬರ ರಾಜೀನಾಮೆ ತೆಗೆದುಕೊಂಡು ಯಾರಾದರೂ ಉತ್ತಮರಾದ ಮೂರನೇ ವ್ಯಕ್ತಿಯನ್ನು ಸಿಎಂ ಮಾಡಿ ರಾಜ್ಯದ ಮರ್ಯಾದೆ ಉಳಿಸಿ‌. ಉಳಿದ ಮೂರು ವರ್ಷವಾದರೂ ಸರಿಯಾಗಿ ಆಡಳಿತ ಮಾಡಿ ಎಂದು ಹೆಚ್ಡಿಕೆ ಒತ್ತಾಯಿಸಿದರು.

ಸಾಲಮನ್ನಾ; ನಾನು ಬಿಟ್ಟಿ ಪ್ರಚಾರ ಪಡೆದಿಲ್ಲ

ಕುಮಾರಸ್ವಾಮಿ ಸಾಲಮನ್ನಾ ಮಾಡಿ ಪ್ರಚಾರ ಮಾಡಿಕೊಂಡರು. ನಾನು 300 ಕೋಟಿ ತೀರಿಸಿದೆ ಎಂದು ತುಮಕೂರಿನಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ. ಹಾಗಾದರೆ, 25000 ಕೋಟಿ ಸಾಲಮನ್ನಾ ಮಾಡಿದ್ದು ಯಾರು? ಸುಖಾಸುಮ್ಮನೆ ಸುಳ್ಳು ಹೇಳುವುದೇಕೆ? ಇಷ್ಟೆಲ್ಲಾ ಆದ ಮೇಲೆಯೂ ಇವರಿಗೆ ಸಿಎಂ ಸ್ಥಾನದಲ್ಲಿ ಮುಂದುವರಿಯುವ ಯೋಗ್ಯತೆ ಇದೆಯಾ? ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಜೂನ್.30ರವರೆಗೆ ‘ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ’ಯ ಅವಧಿ ವಿಸ್ತರಣೆ

ನೀವು ‘ಮಲೆನಾಡಿನ ದೃಶ್ಯ ವೈಭವ’ವನ್ನು ಕಣ್ ತುಂಬಿಕೊಳ್ಳಬೇಕೇ? ತಪ್ಪದೇ ಈ ವೀಡಿಯೋ ಸಾಂಗ್ ನೋಡಿ | Malnad Yana

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಸಾಗರದ ಮರ್ಕಜ್ ಶಾಲಾ ಮಕ್ಕಳು ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

20/12/2025 10:28 PM1 Min Read

ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ 30 ದಿನದೊಳಗೆ ಮಾಹಿತಿ ಒದಗಿಸಿ: ಆಯುಕ್ತ ಬದ್ರುದ್ದೀನ್.ಕೆ ಖಡಕ್ ಸೂಚನೆ

20/12/2025 10:11 PM3 Mins Read

ನಾಳೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ: ಬೆಂಗಳೂರಿಗರೇ ನಿಮ್ಮ ಬೂತ್ ತಿಳಿಯಲು ಹೀಗೆ ಮಾಡಿ

20/12/2025 9:27 PM2 Mins Read
Recent News

ಶಿವಮೊಗ್ಗ: ಸಾಗರದ ಮರ್ಕಜ್ ಶಾಲಾ ಮಕ್ಕಳು ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

20/12/2025 10:28 PM

ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ 30 ದಿನದೊಳಗೆ ಮಾಹಿತಿ ಒದಗಿಸಿ: ಆಯುಕ್ತ ಬದ್ರುದ್ದೀನ್.ಕೆ ಖಡಕ್ ಸೂಚನೆ

20/12/2025 10:11 PM

ನಿಮ್ಮ ವಾಟ್ಸಾಪ್ ಅಕೌಂಟ್ ಕೂಡ ಬ್ಯಾನ್ ಆಗಿದ್ಯಾ? ಟೆನ್ಷನ್ ಬೇಡ, ಜಸ್ಟ್ ಈ ಟ್ರಿಕ್ ಬಳಸಿ!

20/12/2025 9:58 PM

‘ಆಯುಷ್ ಮಾರ್ಕ್’ ಆರಂಭಿಸಿದ ಪ್ರಧಾನಿ ; ಸಾಂಪ್ರದಾಯಿಕ ಔಷಧದ ವಿಶ್ವಾಸಾರ್ಹ, ವೈಜ್ಞಾನಿಕ ಮಾನದಂಡ ಪೂರೈಸಿದ ಭಾರತ

20/12/2025 9:45 PM
State News
KARNATAKA

ಶಿವಮೊಗ್ಗ: ಸಾಗರದ ಮರ್ಕಜ್ ಶಾಲಾ ಮಕ್ಕಳು ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

By kannadanewsnow0920/12/2025 10:28 PM KARNATAKA 1 Min Read

ಶಿವಮೊಗ್ಗ: ಇಂದು ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸಾಗರದ ಶಿವಮೊಗ್ಗ ರಸ್ತೆಯ ತ್ಯಾಗರ್ತಿ ಕ್ರಾಸ್ ಬಳಿಯಿರುವ ಮರ್ಕಜ್…

ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ 30 ದಿನದೊಳಗೆ ಮಾಹಿತಿ ಒದಗಿಸಿ: ಆಯುಕ್ತ ಬದ್ರುದ್ದೀನ್.ಕೆ ಖಡಕ್ ಸೂಚನೆ

20/12/2025 10:11 PM

ನಾಳೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ: ಬೆಂಗಳೂರಿಗರೇ ನಿಮ್ಮ ಬೂತ್ ತಿಳಿಯಲು ಹೀಗೆ ಮಾಡಿ

20/12/2025 9:27 PM

ವಿದ್ಯೆ ಕಲಿಸಿದ ಗುರುಗಳನ್ನು ಸದಾಸ್ಮರಿಸಿ: ಶಾಸಕ ಗೋಪಾಲಯ್ಯ

20/12/2025 9:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.