Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: INDIA ಬ್ಲಾಕ್ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಆಯ್ಕೆ

19/08/2025 1:13 PM

BREAKING : ಉಪರಾಷ್ಟ್ರಪತಿ ಚುನಾವಣೆ : `INDIA’ ಒಕ್ಕೂಟದ ಅಭ್ಯರ್ಥಿಯಾಗಿ ಸುದರ್ಶನ್ ರೆಡ್ಡಿ ಆಯ್ಕೆ | Sudarshan Reddy

19/08/2025 1:10 PM

ಸಂಸತ್ತಿನ ಆವರಣದಲ್ಲಿ SIR ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ | Opposition holds protest

19/08/2025 1:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿದ್ಧರಾಮಯ್ಯನವರೇ ಓಲೈಕೆ ರಾಜಕಾರಣಕ್ಕೆ ಇನ್ನೆಷ್ಟು ಸುಳ್ಳು ಹೇಳುತ್ತೀರಿ?: ಆರ್.ಅಶೋಕ್ ಪ್ರಶ್ನೆ
KARNATAKA

ಸಿದ್ಧರಾಮಯ್ಯನವರೇ ಓಲೈಕೆ ರಾಜಕಾರಣಕ್ಕೆ ಇನ್ನೆಷ್ಟು ಸುಳ್ಳು ಹೇಳುತ್ತೀರಿ?: ಆರ್.ಅಶೋಕ್ ಪ್ರಶ್ನೆ

By kannadanewsnow0925/11/2024 4:28 PM

ಬೆಂಗಳೂರು: ಈಗ ವಕ್ಫ್ ವಿಚಾರದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲೇ ಅತಿಹೆಚ್ಚು ನೋಟಿಸುಗಳು ನೀಡಲಾಗಿದೆ ಎಂದು ಮತ್ತೊಂದು ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದೀರಿ. ಓಲೈಕೆ ರಾಜಕಾರಣಕ್ಕೆ ಇನ್ನೆಷ್ಟು ಸುಳ್ಳು ಹೇಳುತ್ತೀರಿ? ಎಂಬುದಾಗಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ವಕ್ಫ್ ವಿಚಾರದಲ್ಲಿ ದಿನಕ್ಕೊಂದು ನಾಟಕ, ಕ್ಷಣಕ್ಕೊಂದು ಸುಳ್ಳು ಹೇಳುತ್ತಲೇ ಬರುತ್ತಿರುವ ಕಾಂಗ್ರೆಸ್ ಸರ್ಕಾರ ಈಗ ಮತ್ತೊಮ್ಮೆ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದೆ. ಸಿಎಂ ಸಿದ್ಧರಾಮಯ್ಯನವರೇ, ವಕ್ಫ್ ವಿಚಾರ ಮೊದಲ ಪ್ರಸ್ತಾಪವಾದಾಗ ಸರ್ಕಾರ ಯಾರಿಗೂ ನೋಟೀಸು ಕಳಿಸುತ್ತಲೇ ಇಲ್ಲ ಎಂದು ಸುಳ್ಳು ಹೇಳಿದಿರಿ ಎಂದಿದ್ದಾರೆ.

ನಂತರ ವಿಜಯಪುರ ಜಿಲ್ಲೆಯಲ್ಲಿ ರೈತರು ಸಿಡಿದ್ದೆದ್ದಾಗ, ನೋಟಿಸು ವಾಪಸ್ಸು ಪಡೆದು, ಈ ಪ್ರಕ್ರಿಯೆ ನಿಲ್ಲಿಸುತ್ತೇವೆ ಎಂದು ಮತ್ತೊಂದು ಸುಳ್ಳು ಹೇಳಿದಿರಿ.

ಆದರೆ ರೈತರಿಗೆ, ಮಠ-ಮಂದಿರಗಳಿಗೆ ಕಳಿಸುವುದು, ರಾತ್ರೋರಾತ್ರಿ ತರಾತುರಿಯಲ್ಲಿ ಭೂದಾಖಲೆಗಳನ್ನು ತಿದ್ದುವುದು ಮಾತ್ರ ನಿಲ್ಲಲೇ ಇಲ್ಲ. ಮೇಲಾಗಿ ಸಚಿವ ಜಮರ್ ಅಹ್ಮದ್ ಖಾನ್ ಅವರು ಇದೆಲ್ಲಾ ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ನಡೆಯುತ್ತಿದೆ ಎಂದು ಹೇಳುವ ವಿಡಿಯೋ ಬಹಿರಂಗ ಆದಮೇಲೆ ತಮ್ಮ ಸುಳ್ಳು ಸಂಪೂರ್ಣ ಬಯಲಾಯಿತು.

ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆಯೇ ಸರ್ಕಾರದ ಮುಂದಿಲ್ಲ ಎಂದು ಸತ್ಯದ ತಲೆಯ ಮೇಲೆ ಹೊಡೆದ ಹಾಗೆ ಮತ್ತೊಂದು ಸುಳ್ಳು ಹೇಳಿದಿರಿ. ಆದರೆ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ಕೊಡಬೇಕು ಎಂದು ತಮ್ಮ ರಾಜಕೀಯ ಕಾರ್ಯದರ್ಶಿ ನಾಸೀರ್ ಅಹ್ಮದ್, ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಮುಸ್ಲಿಂ ಶಾಸಕರು ಆಗಸ್ಟ್ 24, 2024 ರಂದು ತಮಗೆ ಪತ್ರ ಬರೆಯುತ್ತಾರೆ. ತಾವು ಅದೇ ದಿನವೇ ಈ ಪತ್ರವನ್ನ ಪರಿಶೀಲಿಸಿ ಮಂಡಿಸಿ ಎಂದು ಆರ್ಥಿಕ ಇಲಾಖೆಗೆ ನಿರ್ದೇಶನ ನೀಡಿದ್ದೀರಿ. ಈ ಸಂಬಂಧ ಕೆಟಿಪಿಪಿ ಕಾಯ್ದೆಗೆ ತಿದ್ದುಪಡಿ ತರಲೂ ಸಹ ತಾವು ಅನುಮೋದನೆ ನೀಡಿದ್ದೀರಿ.

ಈಗ ವಕ್ಫ್ ವಿಚಾರದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲೇ ಅತಿಹೆಚ್ಚು ನೋಟಿಸುಗಳು ನೀಡಲಾಗಿದೆ ಎಂದು ಮತ್ತೊಂದು ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದೀರಿ. ಓಲೈಕೆ ರಾಜಕಾರಣಕ್ಕೆ ಇನ್ನೆಷ್ಟು ಸುಳ್ಳು ಹೇಳುತ್ತೀರಿ?

ಕಾಂಗ್ರೆಸ್ ಪಕ್ಷದ ಅನೇಕ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರಭಾವಿ ಮುಖಂಡರು ಬಡವರಿಗೆ ಸೇರಿದ ಸಾವಿರಾರು ಎಕರೆ ವಕ್ಫ್ ಭೂಮಿಯನ್ನ ಕಬಳಿಸಿದ್ದಾರೆ ಎಂಬ ವರದಿ ನಮ್ಮ ಸರ್ಕಾರಕ್ಕೆ ಬಂದಿತ್ತು. ಆಗ ಆ ವರದಿಯ ಆಧಾರದ ಮೇಲೆ ತನಿಖೆ ಮಾಡಲು ಸಂಬಂಧಪಟ್ಟವರಿಗೆ ನೋಟಿಸುಗಳನ್ನು ನೀಡಲಾಗಿತ್ತೇ ಹೊರತು ಇದರ ಹಿಂದೆ ಯಾವುದೇ ಕುತಂತ್ರ, ಷಡ್ಯಂತ್ರ ಇರಲಿಲ್ಲ.

ಇಷ್ಟಕ್ಕೂ ಬಿಜೆಪಿ ಸರ್ಕಾರ ಬಡ ರೈತರು ತಲೆತಲಾಂತರಗಳಿಂದ ಉಳುಮೆ ಮಾಡಿಕೊಂಡು ಬಂದಿರುವ ಕೃಷಿ ಜಮೀನುಗಳಿಗೆ, ಗೋಮಾಳಗಳಿಗೆ, ಸ್ಮಶಾನಗಳಿಗೆ, ನೂರಾರು ವರ್ಷ ಇತಿಹಾಸ ಇರುವ ಸರ್ಕಾರಿ ಶಾಲೆಗಳಿಗೆ, ದೇವಸ್ಥಾನಗಳಿಗೆ, ಮಠ-ಮಾನ್ಯಗಳಿಗೆ, ಪಾರಂಪರಿಕ ತಾಣಗಳಿಗೆ, ಜನಸಾಮಾನ್ಯರ ಆಸ್ತಿ-ಪಾಸ್ತಿಗಳಿಗೆ, ಮಾಜಿ ಶಾಸಕರ ಮನೆಗಳಿಗೆ ನೋಟಿಸು ಕಳಿಸಿಲ್ಲ. ಬಡವರ ಭೂಮಿ ನುಂಗಿರುವ ದೊಡ್ಡ ದೊಡ್ಡ ತಿಮಿಂಗಿಲಗಳನ್ನು ಹಿಡಿಯುವ ಉದ್ದೇಶದಿಂದ ನೋಟಿಸು ಕೊಟ್ಟಿತ್ತು. ಇಷ್ಟಕ್ಕೂ ಈಗ ತಮ್ಮದೇ ಸರ್ಕಾರ ಇದೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊಟ್ಟ ನೋಟಿಸುಗಳಲ್ಲಿ ಏನಾದರೂ ತಪ್ಪಿದ್ದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ.

ವಕ್ಫ್ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣ ಜನರಿಗೆ ಸ್ಪಷ್ಟವಾಗಿ ಅರ್ಥವಾಗಿದೆ. ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತರಲು ಉದ್ದೇಶಿಸಿರುವ ತಿದ್ದುಪಡಿಗೆ ಮೊದಲು ಹೇಗಾದರೂ ಮಾಡಿ ಜಮೀನು ಕಬಳಿಸಬೇಕು ಎಂಬ ಕಾಂಗ್ರೆಸ್ ಪಕ್ಷದ ಷಡ್ಯಂತ್ರ, ಕುತಂತ್ರ ಬಹುಸಂಖ್ಯಾತ ಹಿಂದೂಗಳಿಗೆ ಬಹಳ ಸ್ಪಷ್ಟವಾಗಿ ಮನವರಿಕೆಯಾಗಿದೆ.

ಈಗ ಮತ್ತೊಂದು ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಬಿಡಿ. ವಕ್ಫ್ ಹೆಸರಿನಲ್ಲಿ ನಡೆಯುತ್ತಿರುವ ದಬ್ಬಾಳಿಕೆ ನಿಲ್ಲಿಸಿ. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿ ಮಹಾರಾಷ್ಟ್ರ, ಹರಿಯಾಣ ರಾಜ್ಯಗಳಲ್ಲಿ ಆದಂತೆ ಕರ್ನಾಟಕದಲ್ಲೂ ಧೂಳೀಪಟ ಆಗುವುದು ನಿಶ್ಚಿತ ಎಂದು ಗುಡುಗಿದ್ದಾರೆ.

ವಕ್ಫ್ ವಿಚಾರದಲ್ಲಿ ದಿನಕ್ಕೊಂದು ನಾಟಕ, ಕ್ಷಣಕ್ಕೊಂದು ಸುಳ್ಳು ಹೇಳುತ್ತಲೇ ಬರುತ್ತಿರುವ @INCKarnataka ಸರ್ಕಾರ ಈಗ ಮತ್ತೊಮ್ಮೆ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದೆ.

ಸಿಎಂ @siddaramaiah ನವರೇ,

ವಕ್ಫ್ ವಿಚಾರ ಮೊದಲ ಪ್ರಸ್ತಾಪವಾದಾಗ ಸರ್ಕಾರ ಯಾರಿಗೂ ನೋಟೀಸು ಕಳಿಸುತ್ತಲೇ ಇಲ್ಲ ಎಂದು ಸುಳ್ಳು ಹೇಳಿದಿರಿ.

ನಂತರ ವಿಜಯಪುರ… https://t.co/XqR6S5bHFa

— R. Ashoka (@RAshokaBJP) November 25, 2024

ನಾಳೆ ‘ಗ್ರಾಮ ಪಂಚಾಯ್ತಿ’ಗಳಲ್ಲಿ ‘ಸಂವಿಧಾನ ದಿನ’ ಅಭಿಯಾನ: ಸಚಿವ ಪ್ರಿಯಾಂಕ್ ಖರ್ಗೆ

BREAKING : ರದ್ದಾಗಿದ್ದ ‘BPL’ ಕಾರ್ಡ್ ಗಳು ಮತ್ತೆ ‘ಆಕ್ಟಿವ್’ : ರಾಜ್ಯಾದ್ಯಂತ ಭರದಿಂದ ಸಾಗಿದ ಕಾರ್ಡ್ ಗಳ ಪರಿಷ್ಕರಣೆ

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ಬೈಕ್ ಸವಾರ ಸಾವು.!

19/08/2025 1:00 PM1 Min Read

`ಸಾಲವೂ ತಪ್ಪಲಿಲ್ಲ, ತುಪ್ಪವೂ ಸಿಗಲಿಲ್ಲ’, ಇದು ಮೋದಿ ಮ್ಯಾಜಿಕ್ : ಸಚಿವ ಪ್ರಿಯಾಂಕ್ ಖರ್ಗೆ

19/08/2025 12:58 PM1 Min Read

BREAKING: ಬೆಂಗಳೂರಲ್ಲಿ `CCB’ ಪೊಲೀಸರ ಭರ್ಜರಿ ಕಾರ್ಯಾಚರಣೆ : ವಿದೇಶಿ ಡ್ರಗ್ ಪೆಡ್ಲರ್ ಅರೆಸ್ಟ್, 40 ಲಕ್ಷ ರೂ.ಡ್ರಗ್ಸ್ ವಶ.!

19/08/2025 12:34 PM2 Mins Read
Recent News

BREAKING: INDIA ಬ್ಲಾಕ್ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಆಯ್ಕೆ

19/08/2025 1:13 PM

BREAKING : ಉಪರಾಷ್ಟ್ರಪತಿ ಚುನಾವಣೆ : `INDIA’ ಒಕ್ಕೂಟದ ಅಭ್ಯರ್ಥಿಯಾಗಿ ಸುದರ್ಶನ್ ರೆಡ್ಡಿ ಆಯ್ಕೆ | Sudarshan Reddy

19/08/2025 1:10 PM

ಸಂಸತ್ತಿನ ಆವರಣದಲ್ಲಿ SIR ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ | Opposition holds protest

19/08/2025 1:00 PM

BREAKING : ಬೆಂಗಳೂರಲ್ಲಿ ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ಬೈಕ್ ಸವಾರ ಸಾವು.!

19/08/2025 1:00 PM
State News
KARNATAKA

BREAKING : ಬೆಂಗಳೂರಲ್ಲಿ ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ಬೈಕ್ ಸವಾರ ಸಾವು.!

By kannadanewsnow5719/08/2025 1:00 PM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ…

`ಸಾಲವೂ ತಪ್ಪಲಿಲ್ಲ, ತುಪ್ಪವೂ ಸಿಗಲಿಲ್ಲ’, ಇದು ಮೋದಿ ಮ್ಯಾಜಿಕ್ : ಸಚಿವ ಪ್ರಿಯಾಂಕ್ ಖರ್ಗೆ

19/08/2025 12:58 PM

BREAKING: ಬೆಂಗಳೂರಲ್ಲಿ `CCB’ ಪೊಲೀಸರ ಭರ್ಜರಿ ಕಾರ್ಯಾಚರಣೆ : ವಿದೇಶಿ ಡ್ರಗ್ ಪೆಡ್ಲರ್ ಅರೆಸ್ಟ್, 40 ಲಕ್ಷ ರೂ.ಡ್ರಗ್ಸ್ ವಶ.!

19/08/2025 12:34 PM

BREAKING : ವಿಧಾನಸಭೆಯಲ್ಲಿ `2025 ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ’ ಅಂಗೀಕಾರ

19/08/2025 12:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.