Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 33 ಜೀವರಕ್ಷಕ ಔಷಧಿಗಳ ಮೇಲಿನ ‘GST’ ಶೇ.12%ರಿಂದ ಶೂನ್ಯಕ್ಕೆ ಇಳಿಕೆ : ನಿರ್ಮಲಾ ಸೀತಾರಾಮನ್ ಘೋಷಣೆ

03/09/2025 10:47 PM

BREAKING: ಜಿಎಸ್‌ಟಿ ಮಂಡಳಿಯು ಶೇ 12 ಮತ್ತು ಶೇ 28 ರ ಸ್ಲ್ಯಾಬ್‌ಗಳನ್ನು ರದ್ದು | GST Council

03/09/2025 10:28 PM

BREAKING : ಶೇ.5 ಮತ್ತು ಶೇ.18ರ ಎರಡು ತೆರಿಗೆ ಸ್ಲ್ಯಾಬ್ ದರಗಳಿಗೆ ‘GST’ ಕೌನ್ಸಿಲ್ ಗ್ರೀನ್ ಸಿಗ್ನಲ್ ; ಸೆ. 22ರಿಂದ ಜಾರಿ

03/09/2025 10:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ₹9,823 ಕೋಟಿ ಹೂಡಿಕೆ ಯೋಜನೆಗಳಿಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಮಿತಿ ಒಪ್ಪಿಗೆ: 5,605 ಉದ್ಯೋಗ ಸೃಷ್ಟಿ
KARNATAKA

GOOD NEWS: ₹9,823 ಕೋಟಿ ಹೂಡಿಕೆ ಯೋಜನೆಗಳಿಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಮಿತಿ ಒಪ್ಪಿಗೆ: 5,605 ಉದ್ಯೋಗ ಸೃಷ್ಟಿ

By kannadanewsnow0923/12/2024 4:08 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 64ನೇ ಸಭೆಯು ಒಟ್ಟು ₹9,823.31 ಕೋಟಿ ಬಂಡವಾಳ ಹೂಡಿಕೆಯ ಒಂಬತ್ತು ಯೋಜನೆಗಳಿಗೆ ಹಸಿರು ನಿಶಾನೆ ತೋರಿಸಿದೆ. ಇದರಿಂದ 5,605 ಉದ್ಯೋಗಗಳು ಸೃಷ್ಟಿಯಾಗಲಿವೆ.

ಸೋಮವಾರ ಕೃಷ್ಣಾ ದಲ್ಲಿ ನಡೆದ ಸಭೆಯಲ್ಲಿ ಬೃಹತ್ ಮತ್ತು ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಐಟಿ ಸಚಿವ ಪ್ರಿಯಾಂಕ್ ಖರ್ಗೆ, ಕೃಷಿ ಸಚಿವ ಚೆಲುವರಾಯಸ್ವಾಮಿ, ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೆಐಎಡಿಬಿ ಸಿಇಒ ಡಾ.ಮಹೇಶ ಮುಂತಾದವರು ಭಾಗವಹಿಸಿದ್ದರು.

ಅನುಮೋದನೆ ಪಡೆದವುಗಳಲ್ಲಿ ಡಿ.ಎನ್.ಸೊಲ್ಯೂಷನ್ಸ್ ನ ₹998 ಕೋಟಿ (ಐಟಿಐಆರ್ , ದೇವನಹಳ್ಳಿ), ಸೈಲೆಕ್ಟ್ರಿಕ್ ಸೆಮಿಕಂಡಕ್ಟರ್ಸ್ ಮ್ಯಾನುಫ್ಯಾಕ್ಚರಿಂಗ್ ನ ₹3,425. 60 ಕೋಟಿ (ಕೋಚನಹಳ್ಳಿ ಕೈಗಾರಿಕಾ ಪ್ರದೇಶ, ಮೈಸೂರು) ಮತ್ತು ಸನ್ಸೆರಾ ಇಂಜಿನಿಯರಿಂಗ್ ಸಂಸ್ಥೆಯ ₹2150 ಕೋಟಿ (ಹಾರೋಹಳ್ಳಿ) ಹೂಡಿಕೆ ಯೋಜನೆಗಳು ಹೊಸದಾಗಿವೆ. ಇವುಗಳಿಂದ ಕ್ರಮವಾಗಿ 467, 460 ಮತ್ತು 3,500 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಮಿಕ್ಕಂತೆ, 6 ಯೋಜನೆಗಳು ಹೆಚ್ಚುವರಿ ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಾಗಿವೆ. ಇವುಗಳಲ್ಲಿ ಮುಸಾಶಿ ಆಟೋ ಪಾರ್ಟ್ಸ್ (ದೊಡ್ಡಬಳ್ಳಾಪುರ) ₹122.66 ಕೋಟಿ, ಜೆಎಸ್ ಡಬ್ಲ್ಯು ಸಿಮೆಂಟ್ (ತೋರಣಗಲ್, ಬಳ್ಳಾರಿ) ₹486.82 ಕೋಟಿ, ನೈಡೆಕ್ ಇಂಡಸ್ಟ್ರಿಯಲ್ ಆಟೋಮೇಷನ್ (ಬೇಲೂರು, ಧಾರವಾಡ) ₹200 ಕೋಟಿ, ಎಪ್ಸಿಲಾನ್ ಕಾರ್ಬನ್ (ಸಂಡೂರು) ₹740 ಕೋಟಿ, ಕೆ.ಬಿ.ಸ್ಟೀಲ್ಸ್ (ಹೊಸಪೇಟೆ, ವಿಜಯನಗರ) ₹852.49 ಕೋಟಿ ಮತ್ತು ಸಿಫಿ ಡೇಟಾ ಮ್ಯಾನೇಜ್ಡ್ ಸರ್ವೀಸಸ್ (ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್) ₹847.74 ಕೋಟಿಗಳನ್ನು ರಾಜ್ಯದಲ್ಲಿ ಹೆಚ್ಚುವರಿಯಾಗಿ ಹೂಡಿಕೆ ಮಾಡಲಿವೆ. ಇವುಗಳಿಂದ ಕ್ರಮವಾಗಿ ಮೊದಲ ನಾಲ್ಕು ಕಂಪನಿಗಳಲ್ಲಿ ಮಾತ್ರ 478, 225, 150 ಮತ್ತು 325 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಅವರು ವಿವರಿಸಿದ್ದಾರೆ.

ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, `ಸೆಮಿಕಂಡಕ್ಟರ್ ವಲಯದ ಪ್ರಥಮ ಯೋಜನೆಯು ಮೈಸೂರಿನ ಬಳಿಕ ಕೋಚನಹಳ್ಳಿಯ ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್ ನಲ್ಲಿ ಅಸ್ತಿತ್ವಕ್ಕೆ ಬರಲಿದೆ. ಕೆಐಎಡಿಬಿಯಿಂದ ಜಮೀನು ಪಡೆದುಕೊಳ್ಳುವ ಉದ್ಯಮಿಗಳು/ಕಂಪನಿಗಳು ನಿಗದಿತ ಸಮಯದಲ್ಲಿ ಕೈಗಾರಿಕೆಯನ್ನು ಆರಂಭಿಸಬೇಕು. ಇಲ್ಲದಿದ್ದರೆ ದಂಡ ವಿಧಿಸುವುದು ಸೇರಿದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದಿದ್ದಾರೆ.

ಇದಲ್ಲದೆ, ಸಕ್ಕರೆ ಕಾರ್ಖಾನೆಗಳು ಉಪ ಉತ್ಪನ್ನಗಳ ಉತ್ಪಾದನೆಯಲ್ಲೂ ರೈತರಿಗೆ ಲಾಭಾಂಶದ ಪಾಲು ನೀಡುವ ಕುರಿತು ಪರಿಶೀಲಿಸಲಾಗುವುದು. ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಈ ಸಂಬಂಧ ಅನುಸರಿಸುತ್ತಿರುವ ನಿಯಮಗಳನ್ನು ಅಧಿಕಾರಿಗಳು ನೋಡಬೇಕು. ಒಟ್ಟಿನಲ್ಲಿ ಕೈಗಾರಿಕೆಗಳು ಸರಕಾರದ ನಿಯಮಗಳಿಗೆ ತಕ್ಕಂತೆಯೇ ಕಾರ್ಯ ನಿರ್ವಹಿಸುವುದನ್ನು ಖಾತ್ರಿ ಪಡಿಸಿಕೊಳ್ಳಲಾಗುವುದು. ಎಂದು ಅವರು ವಿವರಿಸಿದ್ದಾರೆ.

ಮಂಡ್ಯದಲ್ಲಿ ಮನಕಲಕುವ ಘಟನೆ: ಮಗನ ಸಾವಿನ ಸುದ್ದಿ ಕೇಳಿ ತಾಯಿಯೂ ಕೊನೆಯುಸಿರು

BREAKING : ಕಲ್ಬುರ್ಗಿಯಲ್ಲಿ ಘೋರ ದುರಂತ : ಮಗುವನ್ನು ಶಾಲಾ ಬಸ್ ಗೆ ಹತ್ತಿಸುವಾಗ ವಿದ್ಯುತ್ ತಂತಿ ತುಳಿದು ಮಹಿಳೆಗೆ ಗಂಭೀರ ಗಾಯ

Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಸೆ.10 ಕೊನೆಯ ದಿನ.!

03/09/2025 8:53 PM2 Mins Read

BREAKING : ಸೌಜನ್ಯ ಕೇಸ್ ಮೇಲ್ಮನವಿ ಬಗ್ಗೆ ಅವರ ತಾಯಿ ನಿರ್ಧರಿಸಬೇಕು : CM ಸಿದ್ದರಾಮಯ್ಯ ಹೇಳಿಕೆ

03/09/2025 8:43 PM1 Min Read

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ ಈ 44 ಸೇವೆಗಳು `ಬಾಪೂಜಿ ಸೇವಾಕೇಂದ್ರ’ಗಳಲ್ಲಿ ಲಭ್ಯ.!

03/09/2025 8:26 PM1 Min Read
Recent News

BREAKING : 33 ಜೀವರಕ್ಷಕ ಔಷಧಿಗಳ ಮೇಲಿನ ‘GST’ ಶೇ.12%ರಿಂದ ಶೂನ್ಯಕ್ಕೆ ಇಳಿಕೆ : ನಿರ್ಮಲಾ ಸೀತಾರಾಮನ್ ಘೋಷಣೆ

03/09/2025 10:47 PM

BREAKING: ಜಿಎಸ್‌ಟಿ ಮಂಡಳಿಯು ಶೇ 12 ಮತ್ತು ಶೇ 28 ರ ಸ್ಲ್ಯಾಬ್‌ಗಳನ್ನು ರದ್ದು | GST Council

03/09/2025 10:28 PM

BREAKING : ಶೇ.5 ಮತ್ತು ಶೇ.18ರ ಎರಡು ತೆರಿಗೆ ಸ್ಲ್ಯಾಬ್ ದರಗಳಿಗೆ ‘GST’ ಕೌನ್ಸಿಲ್ ಗ್ರೀನ್ ಸಿಗ್ನಲ್ ; ಸೆ. 22ರಿಂದ ಜಾರಿ

03/09/2025 10:26 PM

BREAKING : ಇನ್ಮುಂದೆ ವಿಮಾ ಪ್ರೀಮಿಯಂಗಳ ಮೇಲೆ ‘GST’ ಇಲ್ಲ ; ಪರೋಕ್ಷ ತೆರಿಗೆಯಿಂದ ಪಾಲಿಸಿಗಳಿಗೆ ವಿನಾಯಿತಿ

03/09/2025 10:21 PM
State News

ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಸೆ.10 ಕೊನೆಯ ದಿನ.!

By kannadanewsnow5703/09/2025 8:53 PM KARNATAKA 2 Mins Read

ಬೆಂಗಳೂರು : ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…

BREAKING : ಸೌಜನ್ಯ ಕೇಸ್ ಮೇಲ್ಮನವಿ ಬಗ್ಗೆ ಅವರ ತಾಯಿ ನಿರ್ಧರಿಸಬೇಕು : CM ಸಿದ್ದರಾಮಯ್ಯ ಹೇಳಿಕೆ

03/09/2025 8:43 PM

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ ಈ 44 ಸೇವೆಗಳು `ಬಾಪೂಜಿ ಸೇವಾಕೇಂದ್ರ’ಗಳಲ್ಲಿ ಲಭ್ಯ.!

03/09/2025 8:26 PM

BREAKING : 70 ಸಾವಿರ ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಕಾನ್ಸ್ ಟೆಬಲ್.!

03/09/2025 8:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.