Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM

SHOCKING : ಕಾಡಿನಲ್ಲಿ ಸಿಗುವ ಆಹಾರ ಬಳಸೋ ಮುನ್ನ ಇರಲಿ ಎಚ್ಚರ : ‘ವಿಷ ಅಣಬೆ’ ಸೇವಿಸಿ 6 ಜನ ಸಾವು!

11/05/2025 3:01 PM

BREAKING : ಕಾಶ್ಮೀರದಲ್ಲಿ 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ‘SIA’ ದಾಳಿ : ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಶಂಕಿತರು ವಶಕ್ಕೆ

11/05/2025 2:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿದ್ದರಾಮಯ್ಯ ಗರ್ವಭಂಗ ಆಗಬೇಕು- ಮಾಜಿ ಪ್ರಧಾನಿ H.D ದೇವೇಗೌಡ ಗುಡುಗು
KARNATAKA

ಸಿದ್ದರಾಮಯ್ಯ ಗರ್ವಭಂಗ ಆಗಬೇಕು- ಮಾಜಿ ಪ್ರಧಾನಿ H.D ದೇವೇಗೌಡ ಗುಡುಗು

By kannadanewsnow0929/03/2024 5:27 PM

ಬೆಂಗಳೂರು: ನರೇಂದ್ರ ಮೋದಿ ಅವರು ದುರ್ಬಲ ಪ್ರಧಾನಮಂತ್ರಿ, ನಾನು ಪ್ರಬಲ ಸಿಎಂ ಎಂದು ಕೊಚ್ಚಿಕೊಂಡ ಸಿದ್ದರಾಮಯ್ಯ ಅವರ ಗರ್ವಭಂಗ ಈ ಲೋಕಸಭೆ ಚುನಾವಣೆಯಲ್ಲಿ ಆಗಬೇಕು ಎಂದು ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಗುಡುಗಿದರು.

ಬೆಂಗಳೂರಿನಲ್ಲಿ ನಡೆದ ಜೆಡಿಎಸ್ – ಬಿಜೆಪಿ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು; ನರೇಂದ್ರ ಮೋದಿಯಂತಹ ಜಗಮೆಚ್ಚಿದ ನಾಯಕರ ಬಗ್ಗೆ ಲಘುವಾಗಿ ಮಾತನಾಡಿರುವ ಸಿದ್ದರಾಮಯ್ಯ ಅವರಿಗೆ ಈ ಚುನಾವಣೆಯಲ್ಲಿ ಪಾಠ ಕಲಿಸಬೇಕು. ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಿಸಿ, ಸಿದ್ದರಾಮಯ್ಯ ಗರ್ವಭಂಗ ಮಾಡಿ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕರು, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜಿಟಿ ದೇವೇಗೌಡರಿಗೆ ನಿರ್ದೇಶನ ನೀಡಿದರು.

ಮೈಸೂರು ಚಾಮರಾಜನಗರ ಕ್ಷೇತ್ರ ಗೆಲ್ಲುವ ಶಕ್ತಿ ಜಿ.ಟಿ.ದೇವೇಗೌಡರಿಗೆ ಇದೆ. ಸಿದ್ದರಾಮಯ್ಯ ಅವರ ಗರ್ವಭಂಗ ಆಗಲೇಬೇಕು. ಅವರ ಗರ್ವಭಂಗ ಆಗಬೇಕಾದರೆ ನಾವೆಲ್ಲರೂ ಛಲದಿಂದ ಒಟ್ಟಾಗಿ ಹೋಗಬೇಕು ಎಂದು ವೇದಿಕೆಯಲ್ಲೇ ಜಿ.ಟಿ.ದೇವೇಗೌಡರಿಗೆ ಹೇಳಿದರು ಮಾಜಿ ಪ್ರಧಾನಿಗಳು.

ಮೈತ್ರಿಯಲ್ಲಿ ಎಲ್ಲಿಯೂ ಒಂದು ಸಣ್ಣ ಸಮಸ್ಯೆಯೂ ಕಾಣಿಸಿಕೊಳ್ಳಬಾರದು. ಒಬ್ಬ ಸಾಮಾನ್ಯ ಕಾರ್ಯಕರ್ತನನ್ನೂ ಬಿಡದೇ ಹೋರಾಟ ಮಾಡೋಣ. ಒಂದು ರಾಜ್ಯದ ಸಿಎಂ ಗಟ್ಟಿಯಾಗಿರಬೇಕಂತೆ, ದೇಶದ ಪ್ರಧಾನಿ ಬಹಳ ವೀಕ್ ಅಂತೆ.. ಅಬ್ಬಾ..! ಪ್ರಧಾನಿ ವಿರುದ್ಧವೇ ಕೋರ್ಟಿಗೆ ಹೋಗಿದ್ದಾರೆ.. ಎಂಥಾ ಜನ ಇವರು ಎಂದು ದೇವೇಗೌಡರು ಕಿಡಿಕಾರಿದರು.

ಮನಮೋಹನ್ ಸಿಂಗ್ NO ಎಂದರು

ರೈತರ ಸಾಲದ ಮೇಲೆ ಬಡ್ಡಿ ಮನ್ನ ಮಾಡಿ ಎಂದು ಕೇಳಿದರೆ, ಮನಮೋಹನ್ ಸಿಂಗ್ ಅವರು NO ಎಂದರು. ಇದೆಲ್ಲಾ ಗೊತ್ತಿದ್ದರೂ ಸಿದ್ದರಾಮಯ್ಯ ಅವರೇ ಕೋರ್ಟಿಗೆ ಅರ್ಜಿ ಹಾಕ್ತೀರಾ? ಸ್ಟ್ರಾಂಗೆಸ್ಟ್ ಮುಖ್ಯಮಂತ್ರಿ, ವೀಕೆಸ್ಟ್ ಪ್ರಧಾನಮಂತ್ರಿ! ಇಂತಹ ಮುಖ್ಯಮಂತ್ರಿ ನಮ್ಮ ರಾಜ್ಯದಲ್ಲಿದ್ದಾರೆ. ಆ ಮಹಾನುಬಾವರಿಗೆ, ನಮೋ ನಮಃ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯನವರು ಜೆಡಿಎಸ್ ಎಲ್ಲಿದೆ ಅಂತಾರೆ. ಅವರಿಗೆ ಅಧಿಕಾರದ ಮದ. ಆ ಮದ ಇಳಿಸುವ ಸಾಮರ್ಥ್ಯ 91ನೇ ವರ್ಷದ ಈ ದೇವೇಗೌಡನಿಗಿದೆ. ಯಾರ ಭಯಕ್ಕೂ ನಾನು ಅಂಜುವನಲ್ಲ. ಆ ಭಯ ಅನ್ನೋದೇ ನನಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ದೇವೇಗೌಡರ ಗುಡುಗಿದರು

ನನ್ನ ತಲೆ ಎನ್‌ಸೈಕ್ಲೋಪೀಡಿಯಾ. ಯಾವಾಗ, ಏನೆಲ್ಲಾ ಘಟನೆ ನಡೆದಿದೆ ಎಲ್ಲವನ್ನೂ ಹೇಳಬಲ್ಲೆ. ಯಡಿಯೂರಪ್ಪ ಅವರೇ ನನಗೆ ಎಲ್ಲಾ ಗೊತ್ತು ಎಂದ ಅವರು; ತುಮಕೂರಿಗೆ ಕಳಿಸಿ, ನನ್ನನ್ನೇ ಸೋಲಿಸಿದರು. ಕಾಂಗ್ರೆಸ್ ನವರು ಏನು ಮಾಡಿದರು ಎನ್ನುವುದು ಗೊತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಎಐಸಿಸಿಗೆ ಹಣ ಸಂದಾಯವಾಗುತ್ತಿದೆ

ಕಾಂಗ್ರೆಸ್ ರಾಜ್ಯವನ್ನು ಕೊಳ್ಳೆ ಹೊಡೆಯುತ್ತಿದೆ ಎಂದು ಆರೋಪ ಮಾಡಿದ ಮಾಜಿ ಪ್ರಧಾನಿಗಳು; 28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಹಣ ಬಲವನ್ನು ನಾವು ಎದುರಿಸಬೇಕಿದೆ. ಹೊರ ರಾಜ್ಯಗಳಿಗೂ ಕಾಂಗ್ರೆಸ್ ನವರು ಹಣ ಸರಬರಾಜು ಮಾಡ್ತಿದ್ದಾರೆ. ರಾಜಸ್ಥಾನ, ತೆಲಾಂಗಣ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಅಲ್ಲಿಗೆಲ್ಲ ರಾಜ್ಯದ ಹಣ ಹೋಗುತ್ತಿದೆ. ಕರ್ನಾಟಕದಿಂದ ಎಐಸಿಸಿಗೆ ಹಣ ಸಂದಾಯವಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಎರಡು ಪಕ್ಷಗಳ ಸಮನ್ವಯ ಸಮಿತಿ ಸಭೆ ನಡೆಯುತ್ತಿರುವುದು ಸಂತೋಷದಾಯಕ. ಭಾರತ ಮಾತೆ ಹಾಗೂ ಶ್ಯಾಮ್ ಪ್ರಕಾಶ್ ಮುಖರ್ಜಿ, ದೀನ್ ದಯಾಳ್ ಉಪಾಧ್ಯಾಯ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಅರ್ಪಿಸಿ ವೇದಿಕೆಗೆ ಬಂದಿದ್ದೇನೆ. ರಾಜ್ಯ ಉಸ್ತುವಾರಿ ರಾಧಮೋಹನ್ ದಾಸ್ ಎಲ್ಲಾ ಕ್ಷೇತ್ರಗಳ ಮಾಹಿತಿ ಪಡೆದಿದ್ದಾರೆ. ಎಲ್ಲಾ ಮಾಹಿತಿಯನ್ನ ಬಿಜೆಪಿ ವರಿಷ್ಠರಿಗೆ ನೀಡ್ತಿದ್ದಾರೆ. ಎರಡು ಪಕ್ಷದಲ್ಲಿ ಸಮನ್ವಯ ಸಾಧಿಸಬೇಕು. ಯಡಿಯೂರಪ್ಪ ಅವರ ಪಾತ್ರ ಬಹಳ ಮುಖ್ಯವಾಗಿದೆ. ಸಮಯ ತುಂಬಾ ಕಡಿಮೆ ಇದೆ. ಹಿಂದೆ ಆದಂತಹ ವಿಚಾರಗಳನ್ನ ಮರೆತು ನಾವೆಲ್ಲಾ ಒಂದಾಗಬೇಕಿದೆ. ಕಾರ್ಯಕರ್ತರು ಕೆಲಸ ಮಾಡಬೇಕಿದೆ ಎಂದರು ಅವರು.

ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ, ಯಡಿಯೂರಪ್ಪ, ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ಅಗರವಾಲ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ, ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಎರಡೂ ಪಕ್ಷಗಳ ಮಾಜಿ ಸದುವರು, ಶಾಸಕರು, ಮಾಜಿ ಶಾಸಕರು, ಪದಾಧಿಕಾರಿಗಳು ಹಾಜರಿದ್ದರು.

BIG NEWS : ಅಶ್ಲೀಲ ಪದಗಳಿಂದ ಸಚಿವ ಶಿವರಾಜ್ ತಂಗಡಗಿಗೆ ನಿಂದನೆ ಆರೋಪ : ಸಿಟಿ ರವಿ ವಿರುದ್ಧ ದೂರು ದಾಖಲು

BIG NEWS : ‘PSI’ ಹುದ್ದೆಗಳ ನೇಮಕಾತಿಯ ಮರುಪರೀಕ್ಷೆ : ಅಂತಿಮ ಅಂಕಪಟ್ಟಿ ಪ್ರಕಟ

ಸಿದ್ದರಾಮಯ್ಯ ಗರ್ವಭಂಗ ಆಗಬೇಕು- ಮಾಜಿ ಪ್ರಧಾನಿ H.D ದೇವೇಗೌಡ ಗುಡುಗು Siddaramaiah should be proud of himself: Former PM HD Deve Gowda
Share. Facebook Twitter LinkedIn WhatsApp Email

Related Posts

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM1 Min Read

BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಟಿಪ್ಪರ್ ಹರಿದು ಬೈಕ್ ಸವಾರ ದುರ್ಮರಣ

11/05/2025 2:28 PM1 Min Read

BREAKING : ಕರ್ನಾಟಕ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕನಿಂದಲೇ ‘ಹುಸಿ ಬಾಂಬ್’ ಕರೆ : ಆರೋಪಿ ಅರೆಸ್ಟ್

11/05/2025 2:21 PM1 Min Read
Recent News

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM

SHOCKING : ಕಾಡಿನಲ್ಲಿ ಸಿಗುವ ಆಹಾರ ಬಳಸೋ ಮುನ್ನ ಇರಲಿ ಎಚ್ಚರ : ‘ವಿಷ ಅಣಬೆ’ ಸೇವಿಸಿ 6 ಜನ ಸಾವು!

11/05/2025 3:01 PM

BREAKING : ಕಾಶ್ಮೀರದಲ್ಲಿ 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ‘SIA’ ದಾಳಿ : ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಶಂಕಿತರು ವಶಕ್ಕೆ

11/05/2025 2:44 PM

BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಟಿಪ್ಪರ್ ಹರಿದು ಬೈಕ್ ಸವಾರ ದುರ್ಮರಣ

11/05/2025 2:28 PM
State News
KARNATAKA

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

By kannadanewsnow0511/05/2025 3:22 PM KARNATAKA 1 Min Read

ರಾಮನಗರ : ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ…

BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಟಿಪ್ಪರ್ ಹರಿದು ಬೈಕ್ ಸವಾರ ದುರ್ಮರಣ

11/05/2025 2:28 PM

BREAKING : ಕರ್ನಾಟಕ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕನಿಂದಲೇ ‘ಹುಸಿ ಬಾಂಬ್’ ಕರೆ : ಆರೋಪಿ ಅರೆಸ್ಟ್

11/05/2025 2:21 PM

ಬೀದರ್ : ತಂಗಿಯ ಮದುವೆಗೆಂದು ರಜೆಗೆ ಊರಿಗೆ ಬಂದಿದ್ದ ಯೋಧ ಸೇವೆಗೆ ವಾಪಸ್

11/05/2025 2:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.